ಬಂಟರ ಸಂಘ ಮಹಿಳಾ ವಿಭಾಗ: ದೀಪಾವಳಿ
Team Udayavani, Nov 11, 2018, 5:33 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ದಾಂಡಿಯಾ ಮತ್ತು ದೀಪಾವಳಿ ಆಚರಣೆಯು ನ. 3 ರಂದು ಕುರ್ಲಾ ಪೂರ್ವದ ಬಂಟರ ಭವನದ ಸ್ವಾಮಿ ಮುಕ್ತಾನಂದ ಸಭಾ ಗೃಹದಲ್ಲಿ ನಡೆಯಿತು.
ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ, ಉಪ ಕಾರ್ಯದರ್ಶಿ ಮನೋರಮಾ ಎನ್. ಬಿ. ಶೆಟ್ಟಿ, ಕೋಶಾಧಿಕಾರಿ ಆಶಾ ವಿ. ರೈ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ಜರಗಿತು.
ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಸುಜಯಾ ಆರ್. ಶೆಟ್ಟಿ, ಲತಾ ಪಿ. ಶೆಟ್ಟಿ, ಲತಾ ಪಿ. ಭಂಡಾರಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಯರು ಹಾಗೂ ಸದಸ್ಯೆಯರು, ಹಿರಿಯ ಸದಸ್ಯೆ ಡಾ| ಸುನೀತಾ ಎಂ. ಶೆಟ್ಟಿ ಉಪಸ್ಥಿತರಿದ್ದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯ ಕ್ರಮವು ಪ್ರಾರಂಭಗೊಂಡಿತು.
ತುಳುನಾಡಿನ ಸಂಸ್ಕೃತಿ ಬಿಂಬಿಸುವ ಉದ್ದೇಶದಿಂದ ಬಲೀಂದ್ರ
ನನ್ನು ಕೂಗುವ ಪದ್ಧತಿ ಯನ್ನು ಆಚರಿಸಲಾಯಿತು. ಡಾ| ಸುನೀತಾ ಎಂ. ಶೆಟ್ಟಿ ಅವರು ತುಡಾರ್ ಬೆಳಗಿಸುವುದರೊಂದಿಗೆ ಹಾಗೂ ಡಾ| ಪಲ್ಲವಿ ಶೆಟ್ಟಿ ಅವರು ಬಲೀಂದ್ರನನ್ನು ಕರೆಯುವ ಮೂಲಕ ದೀಪಾ ವಳಿಯನ್ನು ಆಚರಿಸಲಾಯಿತು.
ದಾಂಡಿಯಾ ನೃತ್ಯ ಸ್ಪರ್ಧೆ ಮತ್ತು ಉತ್ತಮ ಉಡುಗೆ ಸ್ಪರ್ಧೆ ಆಯೋಜಿಸಲಾಗಿತ್ತು. ನೃತ್ಯ ಸ್ಪರ್ಧೆಯಲ್ಲಿ ಕವಿತಾ ಶೆಟ್ಟಿ ಪ್ರಥಮ, ಜಯಾ ಅಶೋಕ್ ಶೆಟ್ಟಿ ದ್ವಿತೀಯ, ಡಾ| ಪಲ್ಲವಿ ಶೆಟ್ಟಿ ತೃತೀಯ ಬಹುಮಾನ ಪಡೆದರು. ಉತ್ತಮ ಉಡುಗೆ ವಿಭಾಗದಲ್ಲಿ ಸುಚಿತಾ ಕೆ. ಶೆಟ್ಟಿ ಪ್ರಥಮ, ಶಶಿಕಲಾ ಎಸ್. ಪೂಂಜಾ ದ್ವಿತೀಯ, ಪ್ರಶಾಂತಿ ಡಿ. ಶೆಟ್ಟಿ ತೃತೀಯ ಬಹುಮಾನ ಗಳಿಸಿದರು.
ಸಮಾಧಾನಕರ ಬಹುಮಾನವನ್ನು ಮಕ್ಕಳ ವಿಭಾಗದಲ್ಲಿ ಹಾಸ್ಯಾ ಜಿ. ಶೆಟ್ಟಿ, ಯುವ ವಿಭಾಗದಲ್ಲಿ ಪ್ರಸಾದಿನಿ ಶೆಟ್ಟಿ, ಹಿರಿಯರ ವಿಭಾಗದಲ್ಲಿ ಡಾ| ಸುನೀತಾ ಎಂ. ಶೆಟ್ಟಿ, ಲತಾ ಪಿ. ಶೆಟ್ಟಿ ಅವರಿಗೆ ಪ್ರದಾನಿಸಲಾಯಿತು. ದೀಪಾವಳಿಯ ಪ್ರಯುಕ್ತ ಬಂಟರ ಸಂಘದ ಗೀತಾ ಎಸ್.ಎಂ. ಶೆಟ್ಟಿ ಮಹಿಳಾ ವಸತಿಗೃಹದ ಹಿರಿಯ ಸದಸ್ಯೆಯರಿಗೆ ದೀಪಾವಳಿಯ ಉಡುಗೊರೆ ನೀಡಲಾಯಿತು.
ಬಂಟರ ಸಂಘ ಮಹಿಳಾ ವಿಭಾಗದ ಎಲ್ಲ ಸದಸ್ಯೆಯರು, ಪ್ರಬಂಧಕ ಪ್ರವೀಣ್ ಶೆಟ್ಟಿ, ಸುಕುಮಾರ್ ಶೆಟ್ಟಿ ಹಾಗೂ ಎಲ್ಲ ಸಿಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ