ಉದ್ಯಮಿ ಪ್ರವೀಣ್ ಶೆಟ್ಟಿ ಪುತ್ತೂರು ಅವರಿಗೆ ಅಭಿನಂದನೆ
Team Udayavani, Jun 29, 2018, 12:20 PM IST
ಪುಣೆ: ನಗರದ ವೈಕುಂಠ ಮೆಹ್ತಾ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಕೋ. ಆಪರೇಟಿವ್ ಮ್ಯಾನೇಜೆ¾ಂಟ್ ಕಾಲೇಜ್ನಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರೀಯ ಕೃಷಿ ಉತ್ಪನ್ನಗಳ ಸಮರ್ಥನೀಯ ನಿರ್ವಹಣೆ ಮತ್ತು ಲಾಭದಾಯಕ ಸಮಾಲೋಚನ ಸಮ್ಮೇಳನವನ್ನು ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಾಜಿ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಅಂಧ್ರಪ್ರದೇಶದ ಮಾಜಿ ಕೃಷಿ ಸಚಿವ ವಿ. ಎಸ್ .ರಾವ್, ಮಹಾರಾಷ್ಟ್ರ ಸರಕಾರದ ಆಹಾರ ಮತ್ತು ಔಷದ ಖಾತೆ ಸಚಿವ ಗಿರೀಶ್ ಬಾಪಟ್, ಪುಣೆ ಸಂಸದ ಅನಿಲ್ ಶಿರೋಲೆ, ಕೇಂದ್ರ ಕೃಷಿ ಸಚಿವಾಲಯದ ಅಧಿಕಾರಿಗಳಾದ ಗುಲಾಟಿ, ಎಸ್. ತ್ರಿಪಾಠಿ, ಪುರುಷೋತ್ತಮ ರುಪಾಲ ಟಿ. ಚಟರ್ಜಿ ಮತ್ತು 170 ಕ್ಕೂ ಮಿಕ್ಕಿದ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎರಡು ದಿನ ನಡೆದ ಈ ಸಮ್ಮೇಳನದಲ್ಲಿ ಉಪರಾಷ್ಟ್ರಪತಿಗಳು ಉಪಸ್ಥಿತರಿದ್ದರು. ಸಮ್ಮೇಳನದ ಊಟೋಪಚಾರದ ಮೇಲ್ವಿ ಚಾರಕರಾಗಿ ಪ್ರವೀಣ್ ಶೆಟ್ಟಿ ಪುತ್ತೂರು ಆಡಳಿತ ನಿರ್ದೇಶಕರಾಗಿರುವ ಎ. ಪಿ. ಹಾಸ್ಪಿಟಾಲಿಟಿ ಸರ್ವಿಸಸ್ ಅವರು ನಿರ್ವಹಿಸಿದರು. ಇವರ ಉತ್ತಮ ಸೇವೆಯನ್ನು ಪರಿಗಣಿಸಿ ಉಪ ರಾಷ್ಟ್ರ ಪತಿಗಳು ಅಭಿನಂದನೆಯೊಂದಿಗೆ ಪ್ರಶಂಸಾ ಪತ್ರ ನೀಡಿ ಪ್ರವೀಣ್ ಶೆಟ್ಟಿ ಅವರನ್ನು ಗೌರವಿಸಿದರು.
ಪ್ರವೀಣ್ ಶೆಟ್ಟಿ ಅವರ ನೇತೃತ್ವ ದಲ್ಲಿ ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪುಣೆಗೆ ಭೇಟಿ ನೀಡಿದ ಒಂದು ದಿನದ ಕಾರ್ಯಕ್ರಮದಲ್ಲಿಯೂ ಊಟೋ ಪಚಾರದ ಉತ್ತಮ ಸೇವೆಗಾಗಿ ಪ್ರಶಂಸಾ ಪತ್ರವನ್ನು ಪಡೆದಿದ್ದರು.
ವರದಿ : ಹರೀಶ್ ಮೂಡಬಿದ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ