ಉದ್ಯಮಿ ಯಶ್ಪಾಲ್ ಮೊಗವೀರ ಬ್ಯಾಂಕಿಗೆ ಭೇಟಿ
Team Udayavani, May 24, 2019, 12:05 PM IST
ಮುಂಬಯಿ: ಕರಾವಳಿಯ ಪ್ರಸಿದ್ಧ ಸಹಕಾರಿ ಸಂಸ್ಥೆ ಗಳಲ್ಲಿ ಒಂದಾಗಿರುವ ಮಹಾಲಕ್ಷ್ಮೀ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟಗಾರರ ಫೆಡರೇಶನ್ ಇದರ ಅಧ್ಯಕ್ಷ, ಉದ್ಯಮಿ, ರಾಜಕೀಯ ಮುಖಂಡ ಯಶ್ಪಾಲ್ ಸುವರ್ಣ ಅವರು ಮುಂಬಯಿ ತುಳು- ಕನ್ನಡಿಗರ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾಗಿರುವ ಮೊಗವೀರ ಕೋ- ಆಪರೇಟಿವ್ ಬ್ಯಾಂಕಿಗೆ ಭೇಟಿ ನೀಡಿದರು.
ಅಂಧೇರಿ ಪಶ್ಚಿಮದ ಮೊಗವೀರ ಭವನದಲ್ಲಿರುವ ಮೊಗವೀರ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಎ. ಕೋಟ್ಯಾನ್ ಅವರು ಯಶ್ಪಾಲ್ ಸುವರ್ಣ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ಅವರು, ನಮ್ಮ ಹೆಮ್ಮೆಯ ಬ್ಯಾಂಕಿಗೆ ಭೇಟಿ ನೀಡಲು ತುಂಬಾ ಸಂತೋಷವಾಗುತ್ತಿದೆ. ಅದರ ಪ್ರಗತಿಯ ಬಗ್ಗೆ ಹೆಮ್ಮೆ ಎನಿಸುತ್ತಿದೆ. ಬ್ಯಾಂಕ್ ಇನ್ನಷ್ಟು ಶಾಖೆಗಳನ್ನು ತೆರೆದು ಯಶಸ್ಸಿನತ್ತ ಸಾಗಲಿ ಎಂದು ನುಡಿದು, ತಮ್ಮ ಬ್ಯಾಂಕಿಂಗ್ ಅನುಭವವನ್ನು ಹಂಚಿ ಶುಭಹಾರೈಸಿದರು.
ಮೊಗವೀರ ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಎ. ಕೋಟ್ಯಾನ್ ಅವರು ಮಾತನಾಡಿ, ಬ್ಯಾಂಕಿಂಗ್ ವಲಯದಲ್ಲಿ ಈ ರೀತಿಯ ಸ್ನೇàಹ ಬಾಂಧವ್ಯವು ಪ್ರಗತಿಗೆ ಪೂರಕವಾಗುತ್ತದೆ. ಯಶ್ಪಾಲ್ ಸುವರ್ಣ ಅವರು ನಮ್ಮ ಕಚೇರಿಗೆ ಭೇಟಿ ನೀಡಿರುವುದು ಸಂತೋಷದ ವಿಷಯವಾಗಿದೆ. ಅವರ ಭವಿಷ್ಯದ ಯೋಜನೆ- ಯೋಚನೆಗಳು ಶೀಘ್ರದಲ್ಲಿ ಕೈಗೂಡಲಿ ಎಂದರು.
ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಎ. ಕೋಟ್ಯಾನ್, ಉಪ ಕಾರ್ಯಾಧ್ಯಕ್ಷ ಧರ್ಮಪಾಲ್ ಪಿ., ನಿರ್ದೇಶಕರಾದ ಪುರುಷೋತ್ತಮ ಶ್ರೀಯಾನ್, ಮುಖೇಶ್ ಬಂಗೇರ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಡಿ. ಶಿರಾಲಿ ಅವರು ಯಶ್ಪಾಲ್ ಸುವರ್ಣ ಅವರಿಗೆ ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿ ಅಭಿನಂದಿಸಿ ಶುಭಹಾರೈಸಿ ದರು.
ಅಂಧೇರಿ ಶಾಖೆಗೆಯಶ್ಪಾಲ್ ಸುವರ್ಣ ಅವರು ಸಮೀಪದ ಅಂಧೇರಿ ಪಶ್ಚಿಮ ಮೊಗವೀರ ಬ್ಯಾಂಕಿನ ಶಾಖೆಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್