“ಆನ್‌ಲೈನ್‌ನಲ್ಲಿ ಭಾಷೆಯ ಬೋಧನೆ ಸವಾಲಿನ ಕೆಲಸ’

ಮುಂಬಯಿ ವಿವಿ ಕನ್ನಡ ವಿಭಾಗದಿಂದ ಆನ್‌ಲೈನ್‌ನಲ್ಲಿ ಕನ್ನಡ ಕಲಿಕೆ

Team Udayavani, Aug 4, 2021, 4:52 PM IST

Online-Class

ಮುಂಬಯಿ: ಭಾಷೆ ಎನ್ನುವುದು ಜೀವಂತವಾದುದು. ಭಾಷೆಯ ಒಡಲೊಳಗೆ ಒಂದು ಸಂಸ್ಕೃತಿ ನೆಲೆಸಿರುತ್ತದೆ. ಜಗತ್ತಿನ ಅತೀ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಒಂದು. ಕನ್ನಡ ಭಾಷೆಯ ಹಿರಿಮೆ-ಗರಿಮೆಯನ್ನು ಆಳವಾಗಿ ಆನ್‌ಲೈನ್‌ ಮೂಲಕ ಕಲಿಸುವುದು ಕಠಿನವಾದ ಸವಾಲಿನ ಕೆಲಸ ಎಂದು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅಭಿಪ್ರಾಯಪಟ್ಟರು.

ಕಲಿನ ಕ್ಯಾಂಪಸ್‌ ವಿದ್ಯಾನಗರಿಯ ರಾನಡೆ ಭವನದ ಕನ್ನಡ ವಿಭಾಗದಲ್ಲಿ ಅವರು ಇತ್ತೀಚೆಗೆ ಕನ್ನಡ ವಿಭಾಗದ ಮೂಲಕ ಆನ್‌ಲೈನ್‌ನಲ್ಲಿ ಕನ್ನಡವನ್ನು ಕಲಿಸಿದ ಗೀತಾ ಮಂಜುನಾಥ್‌ ಅವರನ್ನು ಶಾಲು ಹೊದೆಸಿ ಗ್ರಂಥ ಗೌರವ ನೀಡಿ ಮಾತನಾಡಿ,ಭಾಷೆಯ ಕಲಿಕೆ ತುಂಬಾ ಸವಾಲಿನದು. ಕನ್ನಡೇತರರಿಗೆ ಕನ್ನಡ ಕಲಿಸುವುದು ಸಾಮಾನ್ಯದ ಸಂಗತಿಯಲ್ಲ. ಕೊರೊನಾ ಕಾಲದಲ್ಲಿ ಕಂಪ್ಯೂಟರ್‌ ಮೂಲಕ ಅಂತರ್ಜಾಲವನ್ನು ಬಳಸಿಕೊಂಡು ಕನ್ನಡವನ್ನು ಲೀಲಾಜಾಲವಾಗಿ ಕಲಿಸಿದ ಗೀತಾ ಮಂಜುನಾಥ್‌ ಅವರ ಶ್ರಮ ಸಾರ್ಥಕವಾಗಿದೆ. ಭಾಷೆಯನ್ನು ಕಲಿಸುವಾಗ ಅಧ್ಯಾಪಕರು ಕ್ರಿಯಾಶೀಲರಾಗಿ ಹೊಸ ಹೊಸ ತಂತ್ರಗಳನ್ನು ಹಾಗೂ ವಿಧಾನಗಳನ್ನು ಅಳವಡಿಸಿಕೊಂಡರೆ ಕಲಿಕೆಯಲ್ಲಿ ಉತ್ಸಾಹ ಮೂಡುತ್ತದೆ. ಈ ಕೆಲಸವನ್ನು ಗೀತಾ ಮಂಜುನಾಥ್‌ ಅವರು ಯಶಸ್ವಿಯಾಗಿ ಮಾಡಿದ್ದಾರೆ ಎಂದು ತಿಳಿಸಿದರು.

ಗೀತಾ ಮಂಜುನಾಥ್‌ ಮಾತನಾಡಿ, ವಿಭಾಗದ ಮೂಲಕ ಆನ್‌ಲೈನ್‌ನಲ್ಲಿ ಕನ್ನಡ ಕಲಿಸಿದ್ದು ನನಗೆ ಹೊಸ ಅನುಭವ ನೀಡಿದೆ. ತಾಂತ್ರಿಕತೆಯ ಇತಿಮಿತಿಗಳ ನಡುವೆ, ಹಲಗೆ, ಬಳಪದ ಬದಲು ವಿಶೇಷ ಪರಿಕರಗಳನ್ನು ಇಟ್ಟುಕೊಂಡು, ಕಂಪ್ಯೂಟರ್‌ ಪರದೆಯ ಮೂಲಕವೇ ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಭಾಷೆ ಕಲಿಸುವುದು ಕಷ್ಟವೇನೋ ಸರಿ. ಆದರೆ ಕೊರೊನಾ ಸಂಕಷ್ಟದ ಕಾಲ ನಮಗೆಲ್ಲ ಇಂತಹ ಅನೇಕ ಹೊಸ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಆರಂಭದಲ್ಲಿ ಕಷ್ಟವೆನಿಸಿದರೂ ಇಷ್ಟುಪಟ್ಟು ಮಾಡುತ್ತಾ ಹೋದಾಗ ಆನ್‌ಲೈನ್‌ನಲ್ಲಿ ಬಹಳ
ಸುಲಭವಾಗಿ ಕನ್ನಡ ಹೇಳಿಕೊಡಬಹುದು ಎಂದು ಅನಿಸಿದ್ದು ನಿಜ. ಮನೆಯಲ್ಲೇ ಕುಳಿತು ಆಸಕ್ತಿಯಿಂದ ಕಲಿಯುವವರಿಗೆ ಆನ್‌ಲೈನ್‌ ತರಗತಿಗಳು ಒಂದು ಉತ್ತಮ ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟು, ಮೊದಲ ಬಾರಿಗೆ ಆನ್‌ಲೈನ್‌ ತರಗತಿ ನಡೆಸಲು ಅವಕಾಶ ಮಾಡಿಕೊಟ್ಟು ಪ್ರೋತ್ಸಾಹಿಸಿದ ಡಾ| ಉಪಾಧ್ಯ ಹಾಗೂ ಕಾಲಕಾಲಕ್ಕೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸಿದ ಡಾ| ಪೂರ್ಣಿಮಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಚಿತ್ರಕಲಾವಿದ ಜಯ ಸಿ. ಸಾಲ್ಯಾನ್‌, ದಿನಕರ ನಂದಿ ಚಂದನ್‌, ಸುಶೀಲಾ ಎಸ್‌. ದೇವಾಡಿಗ, ರೇಖಾ ಮಾನೆ ಉಪಸ್ಥಿತರಿದ್ದರು.ವಿಭಾಗದ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಕನ್ನಡ ಕಲಿಯಲು ಆಸಕ್ತಿ ಹೊಂದಿರುವವರು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಡಾ| ಜಿ. ಎನ್‌. ಉಪಾಧ್ಯ(9220212578), ಡಾ| ಪೂರ್ಣಿಮಾ ಶೆಟ್ಟಿ (9594553402),ಗೀತಾ ಮಂಜುನಾಥ್‌ (8369653432) ಅವರನ್ನು ಸಂಪರ್ಕಿಸಲು ವಿಭಾಗವು ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.