ಅರಸಿನ ಕುಂಕುಮ ಹಚ್ಚುವುದರಿಂದ ದೈವಿಕತೆಯ ಸಂದನೆ: ಸವಿತಾ ಸಾಲ್ಯಾನ್‌


Team Udayavani, Jan 20, 2021, 7:35 PM IST

chandrashekara salyan speech

ಡೊಂಬಿವಲಿ: ನಾವು ಹಣೆಯ ಮಧ್ಯದಲ್ಲಿ ಅರಸಿನ ಕುಂಕುಮ ಹಚ್ಚುವುದರಿಂದ ಆ ಜಾಗದಲ್ಲಿ ಆಜ್ಞಾಚಕ್ರ ಇರುವುದರಿಂದ ನಮಗೆ ದೈವಿಕತೆಯ ಸ್ಪಂದನ ಉಂಟಾಗುವುದು ಎಂದು ನೃತ್ಯಗುರು ಸವಿತಾ ಚಂದ್ರಶೇಖರ ಸಾಲ್ಯಾನ್‌ ಹೇಳಿದರು.

ಜ. 17ರಂದು ಸಂಜೆ ಡೊಂಬಿವಲಿಯ ತುಳು ವೆಲ್ಫೆàರ್‌ ಅಸೋಸಿಯೇಶನ್‌ನ ಮಹಿಳಾ ವಿಭಾಗ ಡೊಂಬಿವಲಿ ಪೂರ್ವದ ಮಾನ್‌ಪಾಡಾ ರಸ್ತೆಯ ಮುಖ್ಯಾಲಯದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ಆಯೋಜಿಸಿದ್ದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸವಿತಾ ಸಾಲ್ಯಾನ್‌ ಅವರು ಅರಸಿನ ಕುಂಕುಮ ಪರಂಪರೆಯ ಹಿನ್ನೆಲೆ ವಿವರಿಸಿ, ಹಿಂದೆ ಉತ್ತರ ಕರ್ನಾಟಕದ ಶ್ರೀಕ್ಷೇತ್ರ ಗಾಣಗಾಪುರದ ಶ್ರೀದತ್ತಾತ್ರೇಯರ ಅವತಾರ ಎಂದು ಖ್ಯಾತರಾದ ವಲ್ಲಭ ಮಹಾಸ್ವಾಮಿಗಳು ಭೀಮಾ ನದಿಯ ದಡದಲ್ಲಿ ನಾರಾಯಣಿ ಯಾಗವನ್ನು ಮಾಡಿ ಸುಮಂಗಲೆಯರಿಗೆ ಭಸ್ಮ, ಅರಸಿನ ಕುಂಕುಮ ಹಾಗೂ ಸೀರೆ ಕುಪ್ಪಸ ವನ್ನು ನೀಡಿದರಂತೆ. ಅಂದಿನಿಂದ ಸುಮಂಗ ಲೆಯರು ಪರಸ್ಪರರಲ್ಲಿ ಅರಸಿನ ಕುಂಕುಮ ಹಚ್ಚಿ ಶುಭ ಕೋರುವ ಪರಂಪರೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದಲ್ಲಿ ಪ್ರಾರಂಭವಾಯಿತೆಂಬ ಉಲ್ಲೇಖ ದೊರೆಯುತ್ತದೆ ಎಂದು ತಿಳಿಸಿದರು.

ಅರಸಿನ ಕುಂಕುಮ ನಮ್ಮ ಸನಾತನ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಅಲ್ಲದೆ ಇದೊಂದು ದಿವ್ಯ ಔಷಧಿಯೂ ಹೌದು. ಅರಸಿನ ಕುಂಕುಮ ಪರಸ್ಪರ ಹಚ್ಚಿ ನಮಲ್ಲಿನ ಸ್ನೇಹ ಸೌಹಾರ್ದದ ಕೊಂಡಿ ಯನ್ನು ಗಟ್ಟಿಯಾಗಿಸಿ ನಮ್ಮ ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸೋಣ ಎಂದು ಅವರು ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತುಳು ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರು ತುಳು ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿಯ ವಿಶೇಷವಾಗಿ ಮಹಿಳಾ ವಿಭಾಗದ ಕಾರ್ಯವೈಖರಿಯನ್ನು ಹಾಗೂ ತುಳು ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಮತ್ತು ತುಳು ಶ್ರೀ ಕ್ರೆಡಿಟ್‌ ಸೊಸೈಟಿ ವತಿಯಿಂದ ಕೋವಿಡ್ ಸಂತ್ರಸ್ತರಿಗೆ ನೆರವು ನೀಡಿದ್ದನ್ನು ವಿವರಿಸಿ, ಮಹಿಳಾ ವಿಭಾಗದ ಸಮಸ್ತ ಚಟುವಟಿಕೆಗಳಿಗೆ ಆಡಳಿತ ಮಂಡಳಿಯ ಅಮೂಲ್ಯ ಸಹಕಾರವೇ ಕಾರಣ. ನಮ್ಮ ಸಂಪ್ರದಾಯದಲ್ಲಿ ಅರಸಿನ ಕುಂಕುಮಕ್ಕೆ ಅತ್ಯಂತ ಮಹತ್ವ ಇದ್ದು, ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿ ಶುಭ ಕೋರಿದರು.

ಇದನ್ನೂ ಓದಿ:ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ

ಇದೇ ಸಂದರ್ಭದಲ್ಲಿ ಅತಿಥಿ ನೃತ್ಯಗುರು ಸವಿತಾ ಚಂದ್ರಶೇಖರ ಸಲ್ಯಾನ್‌ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲವಸ್ತು ಹಾಗೂ ಸ್ಮರಣಿಕೆ ನೀಡಿ ಸಮ್ಮಾನಿಸಲಾಯಿತು. ಅಸೋಸಿಯೇಶ ನ್‌ನ ಗೌರವ ಅಧ್ಯಕ್ಷ ಲಕ್ಷ್ಮಣ್‌ ಸುವರ್ಣ ಹಾಗೂ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ತಾಯಿ ಶ್ರೀ ವರಮಹಾಲಕ್ಷ್ಮೀಯ ವಿಶೇಷ ಪೋಜೆಯನ್ನು ಅರ್ಚಕ ಗಂಗಾಧರ ಶೆಟ್ಟಿಗಾರ್‌ ವಿದ್ಯುಕ್ತವಾಗಿ ನಡೆಸಿಕೂಟ್ಟರು. ಶ್ರೀಲಕ್ಷ್ಮೀ ಭಜನ ಮಂಡಳದ ಸದಸ್ಯರು ದೇವರ ನಾಮಾಮೃತವನ್ನು ಭಜನೆಗಳ ಮೂಲಕ ಪ್ರಸ್ತುತಪಡಿಸಿದರು.

ಮಹಿಳೆಯರು ಪರಸ್ಪರ ಅರಸಿನ ಕುಂಕುಮ ಹಚ್ಚಿಕೊಂಡು ಶುಭಾಶಯಗಳ ವಿನಿಮಯ ಮಾಡಿಕೊಂಡರು. ಶ್ರೀ ವರಮಹಾಲಕ್ಷ್ಮೀಯ ಮಹಾ ಮಂಗಳಾರತಿಯ ಬಳಿಕ ಮಹಾಪ್ರಸಾದ ವಿತರಿಸಲಾಯಿತು.

ಗಣ್ಯರಾದ ವಿನೋದಾ ಡಿ. ಶೆಟ್ಟಿ, ಸವಿತಾ ಚಂದ್ರಶೇಖರ್‌ ಸಾಲ್ಯಾನ್‌, ಲಕ್ಷ್ಮಣ್‌ ಸಾಲ್ಯಾನ್‌, ಲಕ್ಷ್ಮಣ್‌ ಮೂಲ್ಯ, ಪ್ರಕಾಶ್‌ ಅಮೀನ್‌ ಮತ್ತಿತರರು ಉಪಸ್ತಿತರಿದ್ದರು.ಸಂಸ್ಥೆಯ ಹಿರಿಯ ಸದಸ್ಯರಾದ ದೇವದಾಸ್‌ ಕುಲಾಲ್‌, ವಸಂತ ಸುವರ್ಣ, ಚಂದ್ರಾನಾಯಕ್‌ ಮೊದಲಾದವರು ಉಪಸ್ಥಿತರಿದ್ದರು. ವಿನೋದಾ ಪಿ. ಪುತ್ರನ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ರೇಖಾ ಮೂಲ್ಯ ಗಣ್ಯರನ್ನು ಪರಿಚಯಿಸಿದರು.

ಚಿತ್ರ-ವರದಿ: ಗುರುರಾಜ್‌ ಪೋತನೀಸ್‌

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.