ಚಾರ್ಕೋಪ್ ಕನ್ನಡಿಗರ ಬಳಗ ಮಹಿಳಾ ವಿಭಾಗ:ಅರಸಿನ ಕುಂಕುಮ
Team Udayavani, Feb 18, 2018, 11:01 AM IST
ಮುಂಬಯಿ: ಚಾರ್ಕೋಪ್ ಕನ್ನಡಿಗರ ಬಳಗದ ಮಹಿಳಾ ವಿಭಾಗದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಷಿಕ ಕುಂಕುಮಾರ್ಚನೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಜ. 27 ರಂದು ಸಂಜೆ ಬಳಗದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಮತ್ತು ಸಂಚಾಲಕಿಯಳಾದ ಶಾಂತಾ ಭಟ್ ಇವರ ನೇತೃತ್ವದಲ್ಲಿ ಜರಗಿದ ಈ ಕಾರ್ಯಕ್ರಮಕ್ಕೆ ಭಾರತಿ ರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಸೇರಿದ್ದ ಸುಮಂಗಳೆಯರಿಂದ ಕುಂಕುಮಾರ್ಚನೆ ಮತ್ತು ಲಲಿತಾ ಸಹಸ್ರ ನಾಮಾರ್ಚನೆ ಪಠಿಸಲಾಯಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಳಗದ ಮಹಿಳಾ ವಿಭಾಗದ ಕಾರ್ಯದರ್ಶಿ ಪದ್ಮಾವತಿ ನಾಯಕ್ ಮತ್ತು ಸದಸ್ಯೆರಾದ ರಾಜೀವಿ ಕೋಟ್ಯಾನ್, ಚೇತನಾ ಶೆಟ್ಟಿ, ವನಜಾ ಶೆಟ್ಟಿ, ರಾಜ್ ಕುಮಾರಿ ಶೆಟ್ಟಿ, ಸುಮಿತ್ರಾ ಕಾಂಚನ್, ಲಕ್ಷಿ¾ ಆಚಾರ್ಯ, ವನಜಾ ಕಾಂಚನ್, ಯಮುನಾ ಸಾಲ್ಯಾನ್ ಹಾಗೂ ಬಳಗದ ಸಹ ಕೋಶಾಧಿಕಾರಿ ಲತಾ ಬಂಗೇರ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ರೂಪಾ ಭಟ್ ಮತ್ತು ತನುಜಾ ಭಟ್ ಮತ್ತು ಬಳಗದವರು ಸಹಕರಿಸಿದರು.
ವಿಜಯಲಕ್ಷಿ¾ ಶೆಟ್ಟಿ, ರಜನಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮತ್ತು ಅವರ ಸಹವರ್ತಿಗಳು ಲಘು ಉಪಾಹಾರವನ್ನು ಆಯೋಜಿಸಿದ್ದರು. ಬಳಗದ ಅಧ್ಯಕ್ಷರಾದ ಮಂಜುನಾಥ ಬನ್ನೂರು, ಕಾರ್ಯದರ್ಶಿ ರಘನಾಥ ಎನ್ ಶೆಟ್ಟಿ ಮತ್ತು ವಿಶ್ವಸ್ಥರಾದ ಎಂ. ಎನ್. ರಾವ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಕೃಷ್ಣ ಅಮೀನ್ ಮತ್ತು ಕೃಷ್ಣ ಶೆಟ್ಟಿ ಈ ಕಾರ್ಯಕ್ರಮಕ್ಕೆ ಸಹಕರಿಸಿದರು.
ವಿಶ್ವಸ್ಥರಾದ ಎಂ. ಎನ್. ರಾವ್ ಅವರು ಉಪಯುಕ್ತ ಸಲಹೆ ನೀಡಿದರು. ಅರಸಿನ ಕುಂಕುಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬ ಮಹಿಳೆಯರಿಗೂ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಹಣೆಗೆ ಹಚ್ಚಿ, ಹೂ ಮತ್ತು ಎಳ್ಳುಂಡೆ ನೀಡಲಾಯಿತು. ಪ್ರತಿಯೊಬ್ಬ ಮಹಿಳೆಗೂ ಬಳಗದ ವತಿಯಿಂದ ಕೊಡುಗೆಗಳನ್ನು ನೀಡಿ ಬೀಳ್ಕೊಡಲಾಯಿತು. ತುಳು-ಕನ್ನಡಿಗ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ