ಚೆಂಬೂರು ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ: ಬಸವ ಜಯಂತಿ
Team Udayavani, May 10, 2018, 5:13 PM IST
ಮುಂಬಯಿ: ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ 886 ನೇ ಬಸವಜಯಂತಿ ಆಚರಣೆಯು ಎ. 29 ರಂದು ಸಂಜೆ ಸಂಸ್ಥೆಯ ಬಸವೇಶ್ವರ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.
ಬಾಲ್ಕಿಯ ಚನ್ನಬಸವ ಪಟ್ಟದ ದೇವರು ಅವರ ಘನ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ| ಶಶಿಕಲಾ ಗುರುಪುರ ಹಾಗೂ ಶ್ರೀಗಳು ಬಸವೇಶ್ವರ ಭಾವಚಿತ್ರಕ್ಕೆ ಮಾಲಾಧಾರಣೆಗೈದು, ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಾಯಕ ಗಿರೀಶ್ ಸಾರವಾಡ ಇವರು ಪ್ರಾರ್ಥನೆಗೈದರು.
ಸಂಸ್ಥೆಯ ವಿಶ್ವಸ್ತ ಮಂಡಳಿಯ ಮನೋಹರ ಎಂ. ಕೋರಿ ಮತ್ತು ಸಂಸ್ಥೆಯ ಅಧ್ಯಕ್ಷ ಬಿ. ಜಿ. ಬಿರಾದಾರ್ ಇವರು ಅತಿಥಿ-ಗಣ್ಯರುಗಳನ್ನು ಗೌರವಿಸಿದರು. ಸಮಾಜದ ಹಿರಿಯರಾದ ಬಿ. ಎಸ್. ಹುರಿಗೇರಿ ಮಠ ಅವರನ್ನು ಶ್ರೀಗಳು ಗೌರವಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.
ಮುಖ್ಯ ಅತಿಥಿ ಡಾ| ಶಶಿಕಲಾ ಗುರುಪುರ ಇವರು ಮಾತನಾಡಿ, ಬಸವೇಶ್ವರರು ಸಮಾನತೆ, ಸ್ತಿÅà ಸ್ವಾತಂತ್ರÂ, ಕಾಯಕ ದಾಸೋಹದಂತಹ ಮಹತ್ವದ ಕ್ರಾಂತಿಯನ್ನು 12 ನೇ ಶತಮಾನದಲ್ಲಿ ಮಾಡಿದ್ದು, ಅದ್ಭುತ ಕಾರ್ಯವಾಗಿದೆ. ಜಗತ್ತಿನ ಪ್ರಥಮ ಮಹಾ ಮಾನವತಾವಾದಿ ಮಹತ್ಮಾ ಬಸವೇಶ್ವರರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸುವ ಅಗತ್ಯತೆಯಿದೆ ಎಂದು ನುಡಿದರು.
ಬಾಲ್ಕಿಯ ಚನ್ನಬಸವ ಪಟ್ಟದ ದೇವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರು ಬಸವೇಶ್ವರರ ವಾರೀಸುದಾರರಾಗಿದ್ದೇವೆ. ನಮ್ಮ ವಚನ ಸಂಗ್ರಹವನ್ನು ಪರಭಾಷಾ ಬಾಂಧವರಿಗೆ ಮುಟ್ಟಿಸಿ, ನಮ್ಮ ನಡೆ-ನುಡಿಗಳಲ್ಲಿ ಬದಲಾವಣೆಗಳನ್ನು ತಂದರೆ ಕಲ್ಯಾಣ ರಾಜ್ಯ ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಶಾಂತಿ ಕಾಪಾಡಲು ಬಸವ ತತ್ವಗಳಿಂದ ಸಾಧ್ಯವಿದೆ. ಆದ್ದರಿಂದ ಯುವ ಪೀಳಿಗೆಗೆ ಬಸವ ವಚನಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಾವು ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರಸಾದ ವಿತರಣೆಯ ಪ್ರಾಯೋಜಕತ್ವ ವಹಿಸಿದ್ದ ಶರಣ ಡಿ. ದಂಪತಿ, ಬಿ. ಎನ್. ಪಾಟೀಲ್ ಇವರನ್ನು ಶ್ರೀಗಳು ಗೌರವಿಸಿದರು. ವಿಶ್ವಸ್ಥ ಮಂಡಳಿಯ ಶಿವಾನಂದ ಅಮರಖೇಡ, ಎನ್. ಜಿ. ಮ್ಹಾತ್ರೆ, ಮನೋಹರ ಎಂ. ಕೋರಿ, ವಿದ್ಯಾಖಾಗೆ, ಅಧ್ಯಕ್ಷ ಬಿ. ಜಿ. ಬಿರಾದಾರ, ಕೋಶಾಧಿಕಾರಿ ರವಿ ಹಿರೇಮಠ, ಕಾರ್ಯದರ್ಶಿ ಎನ್. ಬಿ. ನಾವಳಸಂಗ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲಲಿತಾ ಅಂಗಡಿ ಕಾರ್ಯಕ್ರಮ ನಿರ್ವಹಿಸಿದರು. ಆರ್. ಭೀ. ಗೌಡರ ಅವರು ವಂದಿಸಿದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್