ಮಕ್ಕಳಿಗೆ ಲಲಿತ ಕಲೆಯ ಬಗ್ಗೆ ಅರಿವು ಮೂಡಿಸಬೇಕು: ನರೇಂದ್ರ


Team Udayavani, Dec 6, 2019, 5:41 PM IST

mumbai-tdy-1

ಮುಂಬಯಿ, ಡಿ. 4: ಹೊರನಾಡ ಕನ್ನಡ ಸಂಘಟನೆಗಳಲ್ಲಿ ಹಿರಿಯರ ದಂಡೇ ಹೆಚ್ಚಾಗಿರುವಾಗ ಯುವಕಯುವತಿಯರೇ ತುಂಬಿದ ಪಲವಾ ಕನ್ನಡಿಗರ ಸಂಘ ಯುವ ಪಡೆಯ ಕನ್ನಡಾಭಿಮಾನವನ್ನು ಕಂಡಾಗ ಹೆಮ್ಮೆಯಾಗುತ್ತಿದೆ. ಈ ಯುವಕರ ಕಾರ್ಯ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ ಎಂದು ರಂಗಭೂಮಿಯ ಹಿರಿಯ ನಟ, ನಿರ್ದೇಶಕ ಸುಭಾಷ್‌ ನರೇಂದ್ರ ಅವರು ನುಡಿದರು.

ಡಿ. 1ರಂದು ಸಂಜೆ ಡೊಂಬಿವಲಿಯ ಹೊರವಲಯದ ಪಲವಾ ಸಿಟಿಯ ಪಲವಾ ಕನ್ನಡಿಗರ ಸಂಘದ ವತಿಯಿಂದ ಸ್ಥಳೀಯ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮೂರು ಲಕ್ಷಕ್ಕೂ ಅಧಿಕ ಕನ್ನಡಿಗರು ವಾಸಿಸುತ್ತಿರುವ ಡೊಂಬಿವಲಿ ಪರಿಸರದಲ್ಲಿ 32ಕ್ಕೂ ಹೆಚ್ಚು ಕನ್ನಡಪರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಕಂಡಾಗ ನಾಡುನುಡಿಯ ಬಗ್ಗೆ ಕನ್ನಡಿಗರಿಗೆ ಇರುವ ಅಭಿಮಾನವನ್ನು ಸೂಚಿಸುತ್ತದೆ.ಭಾರತೀಯ ನಾಗರಿಕತೆಗೆ ನಾಲ್ಕು ಸಾವಿರ ವರ್ಷಗಳ ಇತಿಹಾಸವಿದ್ದು, ಹರಪ್ಪಾ ಮೊಹೆಂಜೋದಾರೋ ಸಂಸ್ಕೃತಿಯ ಇತಿಹಾಸವನ್ನು ಗಮನಿಸಿದಾಗ ನಮ್ಮ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸ ಇರುವುದು ಕಂಡು ಬರುತ್ತದೆ. ನಮ್ಮನ್ನು ಅನೇಕ ಅರಸರು ಆಳಿ ಹೋಗಿದ್ದು, ಅವರೆಲ್ಲರೂ ಕನ್ನಡ ನಾಡಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.

ವಿಜಯ ನಗರದ ಅರಸರು ವಿಶ್ವದ ಅತ್ಯಂತ ಶ್ರೀಮಂತರೆನಿಸಿದರೆ, ಶ್ರೀ ಕೃಷ್ಣದೇವರಾಯರ ಕಾಲಘಟ್ಟದಲ್ಲಿ ಕನ್ನಡಿಗರ ಪಾಲಿಗೆ ಸುವರ್ಣ ಯುಗ ವಾಗಿತ್ತು. ಅನೇಕ ಸಂಸ್ಕೃತಿಗಳ ಆಗರವಾದ ನಮ್ಮ ಕರ್ನಾಟಕದ ಕನ್ನಡ ಭಾಷೆ ಬರೆದಂತೆ ಮಾತನಾಡುವ, ಮಾತನಾಡಿದಂತೆ ಬರೆಯುವ ಏಕೈಕ ಭಾಷೆಯಾಗಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬದುಕ ಬೇಕೆಂದರೆ ನಮ್ಮ ಮಕ್ಕಳಿಗೆ ಲಲಿತ ಕಲೆಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದು ನುಡಿದರು.

ಗೌರವ ಅತಿಥಿಯಾಗಿ ಪಾಲ್ಗೊಂಡ ಹಿರಿಯ ಸಾಹಿತಿ ಡಾ| ಸುಮಾ ದ್ವಾರಕಾನಾಥ್‌ ಅವರು, ಅನೇಕ ವರ್ಷ ಗಳಿಂದ ಕನ್ನಡಪರ ಚಟುವಟಿಕೆ ಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನನಗೆ ಹೆಚ್ಚಿನ ಕಾರ್ಯಕ್ರಮಗಳಲ್ಲಿ

ಹಿರಿಯರೇ ಕಂಡು ಬರುತ್ತಿರುವುದರಿಂದ ನಮ್ಮ ಪೀಳಿಗೆಯ ಜತೆಗೆ ಹೊರನಾಡಿನಲ್ಲಿ ಕನ್ನಡ ಮಾಯವಾಗುತ್ತದೊ ಎಂಬ ಆತಂಕವಿತ್ತು. ಆದರೆ ಪಲವಾ ಕನ್ನಡಿಗರ ಕನ್ನಡಾಭಿಮಾನ ಯುವಕರ ಕಾರ್ಯವೈಖರಿ ಕಂಡು ಕನ್ನಡ ಭಾಷೆಗೆ ಅಳಿವಿಲ್ಲ, ಕನ್ನಡ ಭಾಷೆ ನಿತ್ಯ ನಿರಂತರ ಎಂಬ ವಿಶ್ವಾಸ ಮೂಡುತ್ತಿದೆ. ಕೇವಲ ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಸಂಸ್ಥೆಯ ಕಾರ್ಯವೈಖರಿ ಅಭಿನಂದನೀಯ. ಸಂಸ್ಥೆಯು ನೂರಾರು ವರ್ಷಗಳ ಕಾಲ ಕನ್ನಡದ ಕಂಪನ್ನು ಬೀರುತ್ತಿರಲಿ ಎಂದು ನುಡಿದು ಶುಭಹಾರೈಸಿದರು.

ಇದೇ ಸಂದರ್ಭ ಗಣ್ಯರನ್ನು ಶಾಲುಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಂಘದ ಪದಾಧಿಕಾರಿಗಳು ಗೌರವಿಸಿದರು.

ಕವಿತಾ ದೇಶಪಾಂಡೆ ಮತ್ತು ಪ್ರತಿಭಾ ಜೋಶಿ ತಂಡದವರು ಹಚ್ಚೇವು ಕನ್ನಡದ ದೀಪ ಗೀತೆಯನ್ನು ಹಾಡಿದರು. ಸುಹಾಸ್‌ ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಗಣ್ಯರನ್ನು ಪರಿಚಯಿಸಿದರು. ಡಾ| ಸೌಮ್ಯಾ ರಾವ್‌, ಮೋಹನ್‌ ಸಿ. ಜಿ. ಕಾರ್ಯಕ್ರಮ ನಿರ್ವಹಿಸಿದರು. ವರುಣ್‌ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಅವಿನಾಶ್‌ ಸಿದ್ಧಯ್ಯ ವಂದಿಸಿದರು.

ಕನ್ನಡ ಭಾಷೆ, ಸಂಸ್ಕೃತಿಯನ್ನು ಪರಿಚಯಿಸುವ ಸಾಕ್ಷ್ಯಚಿತ್ರ ಪ್ರದ ರ್ಶನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಏಕಪಾತ್ರಾಭಿನಯ, ಭರತನಾಟ್ಯ, ಯಕ್ಷಗಾನ ನೃತ್ಯ ರೂಪಕ, ಅಂತ್ಯಾಕ್ಷರಿ, ಮಕ್ಕಳಾದ ಖುಷಿ ನಾಯಕ್‌, ಸ್ವಪ್ನಾ ನಾಯಕ್‌ ಅವರಿಂದ ನೃತ್ಯ, ಭರತ್‌ ಶೆಟ್ಟಿ ಅವರಿಂದ ಏಕಪಾತ್ರಾಭಿನಯ ಗಮನ ಸೆಳೆಯಿತು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಪ್ರತಿಭೆಗಳನ್ನು ಗಣ್ಯರು ಗೌರವಿಸಿದರು. ನೂರಾರು ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಂತಾರಾಮ್‌ ಶೆಟ್ಟಿ, ಚರಣ್‌ ಶೆಟ್ಟಿ, ವರುಣ್‌, ಸಂದೀಪ್‌, ಮೋಹನ್‌ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.