ಚಿಣ್ಣರ ಬಿಂಬ ಮುಂಬಯಿ: ನವಿ ಮುಂಬಯಿ ವಲಯದಿಂದ ಪಾಲಕರ ಸಭೆ


Team Udayavani, Jul 6, 2018, 3:02 PM IST

0507mum04.jpg

ನವಿಮುಂಬಯಿ: ಚಿಣ್ಣರ ಬಿಂಬ ಮುಂಬಯಿ ನವಿಮುಂಬಯಿ ವತಿಯಿಂದ ಪಾಲಕರ ಸಭೆಯು ಜು. 1 ರಂದು ಪೂರ್ವಾಹ್ನ  ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

ನೆರೂಲ್‌, ಘನ್ಸೋಲಿ, ಐರೋಲಿ ಶಿಬಿರದ ಪಾಲಕರು, ವಲಯ ಮುಖ್ಯಸ್ಥರು, ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ ಅವರು ಪಾಲಕರನ್ನು ಉದ್ದೇಶಿಸಿ ಮಾತ ನಾಡಿ, ನಾವು ನಮ್ಮ ನಾಡಿನ ಮಕ್ಕಳಿಗೆ ನಮ್ಮೂರಿನ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳು, ಕಟ್ಟುಕಟ್ಟಲೆಗಳು, ಶಿಸ್ತು, ಕಲೆಗಳ ಬಗ್ಗೆ ಅರಿವು ಮೂಡಿಸದೇ ಇದ್ದ ಪಕ್ಷದಲ್ಲಿ ಭವಿಷ್ಯದಲ್ಲಿ ಹೊಟ್ಟೆಗೆ ಪಾರ್ಸೆಲ್‌ ತಂದು ತಿನ್ನುವ ಕಾಲ ಬರಬಹುದು. ನಮ್ಮ ಮಕ್ಕಳು ಸುಸಂಸ್ಕೃತರಾಗಿ, ನಿಷ್ಠಾವಂತರಾಗಿ, ದೇಶಭಕ್ತರಾಗಿ ಬೆಳೆದು ಎಲ್ಲಾ ಪೋಷಕರಿಗೂ ಕೀರ್ತಿ ತರುವಂತಾಗಬೇಕು ಎಂಬುವುದೇ ಚಿಣ್ಣರ ಬಿಂಬದ ಮುಖ್ಯ ಉದ್ಧೇಶವಾಗಿದೆ. ಆದ್ದರಿಂದ ಪ್ರತಿಯೊಂದು ಶಾಖೆಗಳಲ್ಲಿ ತುಳು- ಕನ್ನಡಿಗರ ಮಕ್ಕಳ ಸಂಖ್ಯೆಯನ್ನು ವೃದ್ಧಿಸುವ ಕಾರ್ಯದಲ್ಲಿ ನಾವು ತೊಡಗಬೇಕು. ಪಾಲಕರು ಮಕ್ಕಳನ್ನು ಚಿಣ್ಣರ ಬಿಂಬದ ತರಗತಿಗಳಿಗೆ ಹೋಗುವಂತೆ ಪ್ರೇರೇಪಿಸಬೇಕು ಎಂದರು.

ಇನ್ನೋರ್ವ ಅತಿಥಿ ತುಳುಕೂಟ ಐರೋಲಿಯ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಅವರು ಮಾತನಾಡಿ, ಮಕ್ಕಳಿಗೆ ನಿಷ್ಠೆ ಹಾಗೂ ಶಿಸ್ತು ಮುಖ್ಯ. ಹಾಗೆಯೇ ಸಾಧಿಸುವ ಛಲ ಇರಬೇಕು. ಜೀವನದಲ್ಲಿ ಶ್ರೇಷ್ಟ ವ್ಯಕ್ತಿಗಳಾಗಬೇಕಾದರೆ ಇಂದಿನ ಮೊಬೈಲ್‌, ಫೇಸ್‌ಬುಕ್‌ ಇನ್ನಿತರ ಸಾಮಾಜಿಕ ಜಾಲತಾಣಗಳ ಚಟಕ್ಕೆ ಬಲಿಯಾಗಬಾರದು. ಜೀವನದಲ್ಲಿ ಒಳ್ಳೆಯ ಗುರಿ ಇಟ್ಟುಕೊಂಡು ಮುಂದುವರಿಯಲು ಶ್ರಮ ಅತ್ಯಗತ್ಯ ಎಂದು ನುಡಿದರು.

ಚಿಣ್ಣರ ಬಿಂಬ ಕಾರ್ಯಕಾರಿ ಸಮಿತಿಯ ಸದಸ್ಯ ತಾಳಿಪಾಡಿಗುತ್ತು ಭಾಸ್ಕರ ಶೆಟ್ಟಿ ಇವರು ಚಿಣ್ಣರ ಬಿಂಬದ ಧ್ಯೇಯೋದ್ದೇಶಗಳನ್ನು ವಿವರಿಸಿದರು. 

ಕಾರ್ಯಕಾರಿ ಸಮಿತಿಯ ಸದಸ್ಯ ವಿಜಯ ಕೋಟ್ಯಾನ್‌ ಅವರ ಉಪಸ್ಥಿತಿಯಲ್ಲಿ ಪ್ರಸ್ತುತ ವರ್ಷದ ವಲಯ ಮುಖ್ಯಸ್ಥೆಯಾಗಿ ಸಂಧ್ಯಾ ಮೋಹನ್‌ ಅವರನ್ನು ಆಯ್ಕೆ ಮಾಡಲಾಯಿತು. 

ನೂತನ ಶಿಬಿರಾಧಿಕಾರಿ, ಸಾಂಸ್ಕೃತಿಕ ಮುಖ್ಯಸ್ಥರು, ಶಿಕ್ಷಕ ರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ಗೀತಾ ಹೇರಳ ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ಮೋಹನ್‌ ವಂದಿಸಿದರು. ರೂಪಾ ಶೆಟ್ಟಿ, ರಾಜೇಶ್ವರಿ ಶೆಟ್ಟಿ, ಸುಕುಮಾರಿ ಶೆಟ್ಟಿ, ಅಮಿತಾ ಶೆಟ್ಟಿ ಇವರ ಸೇವಾಕೈಂಕರ್ಯಗಳನ್ನು ಗಣ್ಯರು ಶ್ಲಾಘಿಸಿದರು. ಚಿಣ್ಣರ ಬಿಂಬದ ಎಲ್ಲಾ ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಆಶಾ ಪೂಜಾರಿ, ವೀಣಾ ಭಟ್‌, ಭಾರತಿ ಹೆಗ್ಡೆ ಇವರನ್ನು ಶಿಬಿರಾಧಿಕಾರಿಗಳನ್ನಾಗಿ ನೇಮಿಸಿ ಅಭಿನಂದಿಸಲಾಯಿತು.

ಸ್ಮಿತಾ ಭಟ್‌, ಸುಜಾತಾ ಶೆಟ್ಟಿ, ಸುಚಿತ್ರಾ ಶೆಟ್ಟಿ ಅವರು ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾದರು.  ಮೋಹಿನಿ ಪೂಜಾರಿ, ಲಕ್ಷ್ಮೀ ದೇವಾಡಿಗ, ಯಶೋಧಾ ಕಾಂಚನ್‌, ಸತ್ಯವತಿ ಹಾಗೂ ಸುಪ್ರಿತಾ ಗೌಡ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ 60 ಕ್ಕೂ ಅಧಿಕ ಪಾಲಕ-ಪೋಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.