ಚಿಣ್ಣರ ಬಿಂಬ ಐರೋಲಿ ಮಕ್ಕಳ ವಾರ್ಷಿಕ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆ


Team Udayavani, Sep 23, 2018, 3:56 PM IST

m-4.jpg

ಮುಂಬಯಿ: ಚಿಣ್ಣರ ಬಿಂಬ ಇದರ ಐರೋಲಿ ಶಿಬಿರದ ಮಕ್ಕಳ ವಾರ್ಷಿಕ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆಯು ಸೆ. 16ರಂದು ಅಪರಾಹ್ನ ಐರೋಲಿ ಸೆಕ್ಟರ್‌ 6 ರಲ್ಲಿರುವ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆಯಿತು.
ದೀಪಪ್ರಜ್ವಲನೆಯ ಮೂಲಕ ಚಿಣ್ಣರ ಬಿಂಬದ ಮಕ್ಕಳ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಐರೋಲಿ ಶ್ರೀ ವಿಷ್ಣು ಸಹಸ್ರ ನಾಮ ಮಂಡಳಿಯ ಮುಖ್ಯಸ್ಥ ಸತೀಶ್‌ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ, ಸಲಹಾ ಸಮಿತಿಯ ಸದಸ್ಯ ಭಾಸ್ಕರ ಶೆಟ್ಟಿ ತಾಳಿಪಾಡಿಗುತ್ತು, ಶಿಕ್ಷಕಿಯರಾದ ರೂಪಾ ಶೆಟ್ಟಿ, ಗೀತಾ ಹೇರಳ,  ಶಿಬಿರದ ಮುಖ್ಯಸ್ಥೆ ಆಶಾ ಪೂಜಾರಿ, ಸಾಂಸ್ಕೃತಿಕ ಮುಖ್ಯಸ್ಥೆ ಸುಜಾತಾ ಉದಯ ಶೆಟ್ಟಿ ಉಪಸ್ಥಿತರಿದ್ದರು. ಚಿಣ್ಣರ ಬಿಂಬದ ಮಕ್ಕಳು ಪ್ರಾರ್ಥನೆಗೈದರು.

ಸತೀಶ್‌ ಶೆಟ್ಟಿ ಇವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲಿ ಒಳ್ಳೆಯ ಸಂಸ್ಕಾರ ಕಲಿಸಬೇಕು. ಈಗ ಸಂಸ್ಕಾರದ ಮೌಲ್ಯ ಕಡಿಮೆಯಾಗಿದೆ. ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ನಾನು ಎಂಬ ಅಹಂನ್ನು ಬಿಟ್ಟು ನಾವೆಲ್ಲರೂ ಎಂಬ ಭಾವನೆ ಯನ್ನು ಬೆಳೆಸಿಕೊಳ್ಳಬೇಕು. ತಪ್ಪು ಮಾಡಿದರೆ ಕ್ಷಮೆ ಕೇಳುವ ಒಳ್ಳೆಯ ಗುಣವನ್ನು ಕಲಿಸಬೇಕು. ಆಗ ನಮ್ಮ ಸಮಾಜ ಶ್ರೇಷ್ಠ ಸಮಾಜವಾಗುತ್ತದೆ ಎಂದು ನುಡಿದರು.

ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ ಇವರು ಮಾತನಾಡಿ, ಚಿಣ್ಣರ ಬಿಂಬದಲ್ಲಿ ಪಾಲಕರೇ ಆಧಾರಸ್ತಂಭ. ನಮ್ಮ ಸಂಸ್ಥೆ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಅವರ ನಿಸ್ವಾರ್ಥ ಸೇವೆಯೇ ಕಾರಣವಾಗಿದೆ. ಸಮಯ ಪರಿಪಾಲನೆಯಿಂದ ಇದರ ಅಭಿವೃದ್ದಿಯಾಗುತ್ತದೆ. ಮಕ್ಕಳನ್ನು ತಿದ್ದಿ ತೀಡುವಲ್ಲಿ ಶಿಕ್ಷಕರೊಂದಿಗೆ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ನುಡಿದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಗೀತಾ ಹೇರಳ ಅವರು, ತನ್ನ ಶಿಬಿರದ ಚಿಣ್ಣರು, ಪಾಲಕರ ಸಹಕಾರವನ್ನು ಶ್ಲಾಘಿಸಿದರು. ರೂಪಾ ಶೆಟ್ಟಿ ಅವರು ಮಾತನಾಡಿ, ಮಕ್ಕಳು ಚೆನ್ನಾಗಿ ಮಾತನಾಡುವುದು ನೋಡಿದರೆ ಆಶ್ಚರ್ಯವಾಗುತ್ತದೆ. ಮಕ್ಕಳಿಗೆ ಸಭಾ ಕಂಪನ ನೀಗಿಸಲು ಇದೊಂದು ಒಳ್ಳೆಯ ವೇದಿಕೆಯಾಗಿದೆ ಎಂದರು.

ಅತಿಥಿ-ಗಣ್ಯರನ್ನು ಚಿಣ್ಣರು ಗೌರವಿಸಿದರು. ಶ್ರೇಯಾ ಕಾಂಚನ್‌, ಸಾನಿಕಾ ಶೆಟ್ಟಿ, ಶ್ರಾವಣಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಶಿಬಿರದ ಮುಖ್ಯಸ್ಥೆ ಆಶಾ ಪೂಜಾರಿ ವಂದಿಸಿದರು. ಪ್ರತಿಭಾ ಸ್ಪರ್ಧೆಯಲ್ಲಿ ಚಿಣ್ಣರಿಗೆ ಶ್ಲೋಕ ಪಠಣ, ಚರ್ಚಾ ಸ್ಪರ್ಧೆ, ಭಾವಗೀತೆ, ಜಾನಪದ ಗೀತೆ, ಏಕ ಪಾತ್ರಾಭಿನಯ ಹಾಗೂ ಪಾಲಕರಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಿರ್ಣಾಯಕರಾಗಿ ಭಾರತಿ ಹೆಗ್ಡೆ ನೆರೂಲ್‌, ಶುಭಾ ಶೆಟ್ಟಿ ಅವರು ಸಹಕರಿಸಿದರು. ಚಿಣ್ಣರು ತೀರ್ಪು ಗಾರರನ್ನು ಗೌರವಿಸಿದರು. ಭಾರತಿ ಹೆಗ್ಡೆ ಅವರು ಮಾತನಾಡಿ, ಚಿಣ್ಣರು ಒಳ್ಳೆಯ ಪ್ರತಿಭೆಯನ್ನು ಹೊಂದಿದ್ದಾರೆ. ಕೆಲವು ಹಾಡು ಮೈಸೂರು ದಸರಾದ ನೆನಪನ್ನು ತಂದುಕೊಟ್ಟಿದೆ ಎಂದರು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಂಜಿನಿಯರ್‌ ವಸಂತ ಕುಮಾರ್‌ ಶೆಟ್ಟಿ ಅವರು ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲಿಯೇ ಕಷ್ಟ ಸಹಿಸಿಕೊಳ್ಳುವು ದನ್ನು ಕಲಿಸಬೇಕು. ಶ್ರಮ, ಛಲವಿಲ್ಲದೆ ಯಾವುದೇ ರೀತಿಯ ಸಾಧನೆಯನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳ ಪ್ರತಿಭೆ ನೋಡಿ ಆನಂದವಾಯಿತು. ಇದು ಮುಂಬಯಿಯಲ್ಲಿ ನಡೆಯುತ್ತಿ ದೆಯೇ ಎಂದು ಭಾಸ ವಾಗುತ್ತಿದೆ. ನಿಮ್ಮ ರೂವಾರಿಗಳು ಶ್ರೇಷ್ಠರು. ನನಗೊಂದು ಅಪರೂಪದ ಅವಕಾಶ ದೊರೆಯಿತು ಎಂದರು.

ತುಳುಕೂಟ ಐರೋಲಿಯ ಮಾಜಿ ಅಧ್ಯಕ್ಷ, ಚಿಣ್ಣರ ಬಿಂಬದ ಸಲಹಾ ಸಮಿತಿಯ ಸದಸ್ಯ ಹರೀಶ್‌ ಶೆಟ್ಟಿ ಪಡುಬಿದ್ರೆ ಮಾತನಾಡಿ, ಚಿಣ್ಣರ ಬಿಂಬದ ತರಗತಿಗೆ ಮಕ್ಕಳು ಬಂದರೆ ಶಾಲಾ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಚಿಣ್ಣರ ಬಿಂಬದ ಮಕ್ಕಳು ಅಧಿಕ ಅಂಕಗಳನ್ನು ಪಡೆದು ಸಾಧಿಸಿ ತೋರಿಸಿದ್ದಾರೆ. ಎಲ್ಲದಕ್ಕೂ ಶ್ರಮ, ಛಲ, ನಿಷ್ಠೆ, ಶಿಸ್ತು ಅಗತ್ಯವಾಗಿದೆ. ಅಧಿಕ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತಿಭೆಯನ್ನು ಮೆರೆಯಬೇಕು ಎಂದು ನುಡಿದರು.

ವಿಜೇತ ಮಕ್ಕಳಿಗೆ ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ವಿಜೇತರ ಯಾದಿಯನ್ನು ಉದಯ ಶೆಟ್ಟಿ ವಾಚಿಸಿದರು. ಚಿಣ್ಣರ ಬಿಂಬದ ಅನಿರುದ್ಧ್ ಶೆಟ್ಟಿ, ಅನುಶ್ರೀ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಸುಜಾತಾ ಶೆಟ್ಟಿ ಸ್ಪರ್ಧಿಗಳ ಹೆಸರು ವಾಚಿಸಿದರು. ಅನಂತ್‌ರಾಜ್‌ ಶೆಟ್ಟಿ ಹಾಗೂ ಪಾಲಕರನ್ನು ಗೌರವಿಸಲಾಯಿತು. ಅತ್ಯುತ್ತಮ ವಿದ್ಯಾರ್ಥಿಯಾಗಿ ದಿಶಾ ರವಿ ಶೆಟ್ಟಿ ಅವರನ್ನು ಆಯ್ಕೆ ಮಾಡಿ ಗೌರವಿಸಲಾಯಿತು. ರವಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಅಶ್ವಿ‌ನಿ ಗೌಡ ಅವರು ಸಹಕರಿಸಿದರು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.