ಚಿಣ್ಣರ ಬಿಂಬ: ಮಕ್ಕಳ ಸಾಂಸ್ಕೃತಿಕ ಉತ್ಸವ 2017ಕ್ಕೆ ಚಾಲನೆ 


Team Udayavani, Nov 21, 2017, 3:23 PM IST

20-Mum02a.jpg

ಮುಂಬಯಿ: ಕರ್ಮಭೂಮಿ ಮತ್ತು ಮಾತೃಭೂಮಿಯ ವಿಕಸನಕ್ಕೆ ನಾವೆಲ್ಲರೂ ಪ್ರಯತ್ನಿಸ ಬೇಕು. ಅಂತಹ ಭಾಷಾಭಿಮಾನವನ್ನು ಹುಟ್ಟಿಸುವ ಕಾರ್ಯ ಪ್ರಕಾಶ್‌ ಭಂಡಾರಿ ಅವರ ನೇತೃತ್ವದ ಚಿಣ್ಣರ ಬಿಂಬ ಮಾಡುತ್ತಿದೆ. ಜೊತೆಗೆನೆ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವ ಕೆಲಸ ಪಾಲಕರದ್ದೂ ಆಗಿರುತ್ತದೆ. ಪಾಲಕರು ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗಬಾರದು ಎಂದು ಕರ್ನಾಟಕ ಸಂಘ ಡೊಂಬಿವಲಿ ಇದರ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ  ಅವರು ನುಡಿದರು. 

ಕಲ್ಯಾಣ್‌ನ ಮಾತೋಶ್ರೀ ಸಭಾಗೃಹದಲ್ಲಿ ಚಿಣ್ಣರ ಬಿಂಬ ಕಲ್ಯಾಣ್‌- ಡೊಂಬಿವಲಿ- ಭಿವಂಡಿ ಶಾಖೆಗಳ ಮಕ್ಕಳ ಸಾಂಸ್ಕೃತಿಕ ಉತ್ಸವ 2017 ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಣ್ಣರ ಬಿಂಬವು ಕಳೆದ ಹದಿನೈದು ವರ್ಷಗಳಿಂದ ಮಾಡುತ್ತಿರುವ ಸಾಂಸ್ಕೃತಿಕ ಆರಾಧನೆ ಮೆಚ್ಚುವಂತದ್ದು. ಇಂತಹ ಮಹಾನ್‌ ಸಂಸ್ಥೆಯಲ್ಲಿ ಕಲಿಯುತ್ತಿರುವ ಮಕ್ಕಳು ಧನ್ಯರು. ಚಿಣ್ಣರ ಬಿಂಬದ ನಾಡು-ನುಡಿ ಸೇವೆಗೆ ಡೊಂಬಿವಲಿ ಕರ್ನಾಟಕ ಸಂಘದ ಪ್ರೋತ್ಸಾಹ ಸದಾಯಿದೆ. ತುಳು- ಕನ್ನಡಿಗರ ಮಕ್ಕಳು ಹೆಚ್ಚು ಹೆಚ್ಚಾಗಿ ಸಂಸ್ಥೆಯಲ್ಲಿ ಸೇರಿಕೊಂಡು ಸಂಸ್ಕಾರವಂತರಾಗಿ ಬೆಳೆದು ಭಾಷಾಭಿಮಾನವನ್ನು ಬೆಳೆಸಿಕೊಳ್ಳುವಂತಾಗಲಿ ಎಂದು ಹೇಳಿದರು. 

ಗೌರವ ಅತಿಥಿಗಳಾಗಿ ಹೊಟೇಲ್‌ ಉದ್ಯಮಿ ಕಲ್ಲಡ್ಕ ಕರುಣಾಕರ ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರಾಜೀವ್‌ ಭಂಡಾರಿ, ಹೊಟೇಲ್‌ ಉದ್ಯಮಿಗಳಾದ ವೇಣುಗೋಪಾಲ್‌ ರೈ, ವಿಜೀತ್‌ ಶೆಟ್ಟಿ, ತುಕರಾಮ್‌ ರೈ, ಚಿಣ್ಣರ ಬಿಂಬದ ರೂವಾರಿಗಳಾದ ಸುರೇಂದ್ರ ಕುಮಾರ್‌ ಹೆಗ್ಡೆ, ಕಾರ್ಯನಿರ್ವಾಹಕ ಸತೀಶ್‌ ಸಾಲ್ಯಾನ್‌, ಶಿಕ್ಷಕ ಮೇಘರಾಜ್‌ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸರಕಾರ ಮಾಡದೇ ಇರುವ ಕಾರ್ಯವನ್ನು ಚಿಣ್ಣರ ಬಿಂಬ ಮಾಡುತ್ತಿದೆ  ಅತಿಥಿ ಕಲ್ಲಡ್ಕ ಕರುಣಾಕರ ಶೆಟ್ಟಿ ಅವರು ಮಾತನಾಡಿ, ಒಂದು ಸರಕಾರ ಮಾಡದೇ ಇರುವ ಕಾರ್ಯವನ್ನು ಚಿಣ್ಣರ ಬಿಂಬ ಮಾಡುತ್ತಿದೆ. ನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಸಂಪ್ರದಾಯಗಳು ಚಿಣ್ಣರ ಬಿಂಬದ ಮಕ್ಕಳಿಂದ ತಿಳಿಯಬಹುದು. ಈ ಕಾರ್ಯಕ್ಕೆ ನಾವೆಲ್ಲರೂ ಸದಾ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದರು. 

ಅತಿಥಿಗಳನ್ನು ಶ್ರದ್ಧಾ ಬಂಗೇರ, ಶ್ರೀ ರಕ್ಷಾ ಹೆಗ್ಡೆ ಅವರು ಪರಿಚಯಿಸಿದರು. ಥಾಣೆ ಶಿಬಿರದ ವಿದ್ಯಾರ್ಥಿನಿ ಕೀರ್ತಿ ಹರೀಶ್‌ ಅವರು ಪ್ರಾರ್ಥನೆಗೈದು ಪ್ರಾಸ್ತಾವಿಕವಾಗಿ ನುಡಿದರು. ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಚಿಣ್ಣರ ಬಿಂಬದ ಧ್ಯೇಯೋದ್ಧೇಶಗಳನ್ನು ವಿವರಿಸಿದರು. ರವಿ ಹೆಗ್ಡೆ ಅವರು ಕಾರ್ಯಕ್ರಮ ನಿರ್ವಹಿಸಿದರು. ಆನಂತರ ಮಕ್ಕಳಿಗೆ ಛದ್ಮವೇಷ, ಭಾಷಣ, ಸಂಗೀತ, ಏಕಪಾತ್ರಾಭಿನಯ, ಪಾಲಕರಿಗೆ ಚರ್ಚಾ ಕಾರ್ಯಕ್ರಮ ನಡೆಯಿತು. 

ಡೊಂಬಿವಲಿ ಶಿಬಿರದ ಮುಖ್ಯಸ್ಥೆಯರಾದ ಮಂಜುಳಾ ಎಸ್‌. ಶೆಟ್ಟಿ, ಶಿಕ್ಷಕಿ ಸಂಧ್ಯಾ ಜೈನ್‌, ದೀಪಾ ಶೆಟ್ಟಿ, ಸಾಂಸ್ಕೃತಿಕ ಮುಖ್ಯಸ್ಥೆಯರಾದ ಶಾಂತಾ ಅಮೀನ್‌, ಸುನೀತಾ ಶೆಟ್ಟಿ, ಶಶಿ ಶೆಟ್ಟಿ, ಕಲ್ಯಾಣ್‌ ಶಿಬಿರದ ಮುಖ್ಯಸ್ಥೆ ರೇಖಾ ಆಚಾರ್ಯ, ಶಿಕ್ಷಕಿ ಮಂಗಳಾ ಶೆಟ್ಟಿ, ಸಾಂಸ್ಕೃತಿಕ ಮುಖ್ಯಸ್ಥೆ ಶುಭಲಕ್ಷಿ³à ಕೊಪ್ಪಲ್‌, ಭಜನ ಮುಖ್ಯಸ್ಥೆ ಆಶಾ ನಾಯ್ಕ, ವಿಭಾಗದ ಮುಖ್ಯಸ್ಥರಾದ ಗೋಪಾಲ್‌ ಶೆಟ್ಟಿ, ಸವಿತಾ ಶೆಟ್ಟಿ, ಕಾರ್ಯಕತೆರ್ಯರಾದ ಗೌರಿ ಶೆಟ್ಟಿ, ಆಶಾ ಶೆಟ್ಟಿ, ಸುಧೀರ್‌ ಭಂಡಾರಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಚಿಣ್ಣರಲ್ಲಿ ನಾಗರೀಕತೆ ರೂಪಿಸುವಲ್ಲಿ ತಾಯ್ನಾಡ ಭಾಷೆಯ ಪಾತ್ರ ಮಹತ್ತರವಾದುದು. ಇಂತಹ ಕಾರ್ಯವನ್ನು ಚಿಣ್ಣರ ಬಿಂಬ ಮಾಡುತ್ತಿರುವುದು ಅಭಿನಂದನೀಯ. ಈ ಸಂಸ್ಥೆಯ ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರವಿರಲಿ. ಪ್ರತಿಯೋರ್ವ ತನ್ನ ಭಾಷೆ ಮತ್ತು ಸಂಸ್ಕೃತಿಯ ಮೇಲೆ ವ್ಯಾಮೋಹವನ್ನು ಹೊಂದಿರಬೇಕು. ಭಾಷೆ, ಸಂಸ್ಕೃತಿ, ಸಂಸ್ಕಾರ, ಆಚಾರ -ವಿಚಾರಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬುವ ಕೆಲಸವನ್ನು ಚಿಣ್ಣರ ಬಿಂಬ ಮಾಡುತ್ತಿದೆ. ಇಂತಹ ಉತ್ತಮ ಉದ್ಧೇಶವನ್ನು ಹೊಂದಿರುವ ಸಂಸ್ಥೆ ನನ್ನ ಬೆಂಬಲ, ಸಹಕಾರ ಸದಾಯಿದೆ 
– ಗುರುದೇವ್‌ ಭಾಸ್ಕರ್‌ ಶೆಟ್ಟಿ (ಹೊಟೇಲ್‌ ಉದ್ಯಮಿ). 

ನಾಡು-ನುಡಿಯ ಅಂದ-ಚಂದ ಮಕ್ಕಳಲ್ಲಿ ಕಾಣುವಾಗ ಮನಸ್ಸಿಗೆ ಬಹಳಷ್ಟು ಸಂತೋಷವಾಗುತ್ತಿದೆ. ಇಂತಹ ಒಂದು ಉತ್ತಮ ಕಾರ್ಯದಲ್ಲಿ ತೊಡಗಿರುವ ಪ್ರಕಾಶ್‌ ಭಂಡಾರಿ ಮತ್ತು ಅವರ ತಂಡದ ಕಾರ್ಯ ಅಭಿನಂದನೀಯವಾಗಿದೆ. ಇಂತಹ ಒಂದು ವ್ಯವಸ್ಥಿತವಾದ ಸಂಸ್ಥೆ ನಾವು ಸಣ್ಣವರಿದ್ದಾಗ ಇರಲಿಲ್ಲ. ಆದ್ದರಿಂದ ನಮ್ಮ ಮಕ್ಕಳನ್ನು ಈ ಸಂಸ್ಥೆಗೆ ಕಳುಹಿಸಿ ನಾಡಿನ ಸಂಸ್ಕೃತಿ, ಸಂಸ್ಕಾರಗಳೊಂದಿಗೆ ಮಿಳಿತಗೊಳ್ಳುವಂತೆ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ 
– ರಾಜೀವ ಭಂಡಾರಿ (ಕಾರ್ಯಾಧ್ಯಕ್ಷರು : ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ). 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.