ಹವ್ಯಾಸಿ ಕಲಾವೃಂದ ಪಿಂಪ್ರಿ -ಚಿಂಚ್‌ವಾಡ್‌: ಕರಾವಳಿ ಉತ್ಸವ


Team Udayavani, Jan 18, 2017, 4:51 PM IST

17-Mum01a.jpg

ಪುಣೆ: ಪುಣೆಯಲ್ಲಿ ಕನ್ನಡಿಗರ ಹತ್ತು ಹಲವು ಸಂಘ-ಸಂಸ್ಥೆಗಳಿದ್ದು ವಿವಿಧ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ತುಳು-ಕನ್ನಡಿಗರನ್ನು ಒಗ್ಗೂಡಿಸುವುದರಲ್ಲಿ ತೊಡಗಿಸಿಕೊಂಡಿವೆ. ಆದರೆ ಇದಕ್ಕೆ ವ್ಯತಿರಿಕ್ತವೆಂಬಂತೆ ಸದಾ ಹೊಸತನದ ಅನ್ವೇಷಣೆಯಲ್ಲಿ ತೊಡಗಿಕೊಂಡಿರುವ  ಹವ್ಯಾಸಿ ಕಲಾವೃಂದ ಪಿಂಪ್ರಿ -ಚಿಂಚಾÌಡ್‌ನ‌ ನೂತನ ಪರಿಕಲ್ಪನೆಯಲ್ಲಿ ಪಡಿಮೂಡಿದ ತುಳುನಾಡª ತಮ್ಮನ -ಕರಾವಳಿ ಉತ್ಸವವು ಜ. 8 ರಂದು ದೇಹುರೋಡ್‌ ಸಮೀರಾ ಲಾನ್ಸ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ತುಳುನಾಡಿನ ರೀತಿಯ ತೆಂಗಿನ ಗರಿಗಳಿಂದ ಅಲಂಕೃತ ಸ್ವಾಗತ ಕಮಾನಿನೊಂದಿಗೆ ಹಾಗೂ ಯಕ್ಷಗಾನ ವೇಷಧಾರಿ ಕಲಾವಿದರು ಚೆಂಡೆ, ಕೊಂಬು ವಾದ್ಯಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು. ಭವ್ಯವಾದ ವಿದ್ಯುದ್ದೀಪಗಳಿಂದಲಂಕೃತವಾದ ವೇದಿಕೆಯು ತುಳು-ಕನ್ನಡಿಗರ ಗಮನಸೆಳೆಯಿತು. ಪುಣೆಯ ವಿವಿಧ ಸಂಘ ಸಂಸ್ಥೆಗಳ ಗಣ್ಯಾತಿಗಣ್ಯರು ಅತಿಥಿಗಳು ಪ್ರಾರಂಭದಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಟ್ರಾಕ್ಟಿವ್‌ ಮೆಲೋಡೀಸ್‌ ಸಂಗೀತ ತಂಡ ಮಂಗಳೂರು ಕಲಾವಿದರಿಂದ ವೈವಿಧ್ಯಮಯ ತುಳು -ಕನ್ನಡ ಹಾಡುಗಳ ರಸಮಂಜರಿ ಕಾರ್ಯಕ್ರಮವು  ಸೇರಿದ್ದ ಕಲಾರಸಿಕರ ಮನಸೂರೆಗೊಂಡಿತ್ತು. ತುಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸುತ್ತಿರುವ ಪಿಲಿಬೈಲ… ಯಮುನಕ್ಕ  ಚಲನಚಿತ್ರದ ನಾಯಕ ನಟ ಪೃಥ್ವಿ ಅಂಬರ್‌, ನಟಿ ಸೋನಾಲಿ ಮೊಂತೆರೋ ಹಾಗೂ ಇಡೀ ಚಿತ್ರತಂಡದಿಂದ ಹಾಡು, ನೃತ್ಯ, ಹಾಸ್ಯ ಕಾರ್ಯಕ್ರಮಗಳು ನಡೆದವು. ಪುಣೆಯ ಪ್ರಸಿದ್ಧ ನೃತ್ಯ ಕಲಾವಿದ ಅಕ್ರಂ ಶೇಖ್‌ ಅವರಿಂದ ನೃತ್ಯ ಹಾಗೂ ಊರಿನ ಹುಲಿವೇಷ ತಂಡದಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಸುಧಾಕರ ಶೆಟ್ಟಿ ಪೆಲತ್ತೂರು ಮತ್ತು ಅರ್ಪಿತಾ ಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ವಿಶೇಷ ದೇಣಿಗೆ ನೀಡಿ ಸಹಕರಿಸಿದ ಗಣ್ಯರನ್ನು ಹವ್ಯಾಸಿ ಕಲಾವೃಂದದ ಸದಸ್ಯರು ಮೈಸೂರು ಪೇಟ ತೊಡಿಸಿ, ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಿದರು. ಹವ್ಯಾಸಿ ಕಲಾವೃಂದದ ಸದಸ್ಯರುಗಳಾದ ಜಯಾನಂದ ಶೆಟ್ಟಿ, ದಿನೇಶ್‌ ಶೆಟ್ಟಿ ಉಜಿರೆ, ಪ್ರಶಾಂತ್‌ ಶೆಟ್ಟಿ, ಅವಿನಾಶ್‌ ಶೆಟ್ಟಿ, ಸುಧಾಕರ ಶೆಟ್ಟಿ ಪೆಲತ್ತೂರು, ಚೇತನ್‌ ಶೆಟ್ಟಿ ಮೂಲ್ಕಿ, ಸಂತೋಷ್‌ ಶೆಟ್ಟಿ ಪೆರ್ಡೂರು, ಸತೀಶ್‌ ಶೆಟ್ಟಿ, ನಿಧೀಶ್‌ ಶೆಟ್ಟಿ ನಿಟ್ಟೆ, ಜೀವನ್‌ ಶೆಟ್ಟಿ ದೊಂಡೇರಂಗಡಿ, ದಿನೇಶ್‌ ಶೆಟ್ಟಿ ನಡಿಯೋಡಿಗುತ್ತು ಹಾಗೂ ತಾರಾನಾಥ ರೈ ಈಶ್ವರಮಂಗಲ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ರಾಕೇಶ್‌ ಶೆಟ್ಟಿ ಬೆಳ್ಳಾರೆ ಅವರು ವಿಶೇಷವಾಗಿ ಸಹಕರಿಸಿದರು.   

  ಕರಾವಳಿ ಉತ್ಸವದ ಮುಖ್ಯ ಅಂಗವಾದ ತುಳುನಾಡ ತಮ್ಮನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ತುಳುನಾಡಿನ ಸಾಂಪ್ರದಾಯಿಕ ಸಸ್ಯಾಹಾರಿ ಹಾಗೂ ಮಾಂಸಾಹಾರಿ ವ್ಯಂಜನಗಳ ವಿವಿಧ ಕೌಂಟರುಗಳು ಲಾನ್ಸ್‌ನ ಸುತ್ತಮುತ್ತ ಅಳವಡಿಸಲಾಗಿದ್ದು,  ಸೇರಿದ್ದ ಜನರಿಗೆ ಹೊಸ ಸವಿರುಚಿಯನ್ನು ನೀಡಿತು. ಮುಖ್ಯವಾಗಿ ವಿವಿಧ ರೀತಿಯ ಮೀನಿನ ವ್ಯಂಜನಗಳು, ಕೋರಿ ರೊಟ್ಟಿ, ಮರುವಾಯಿ ಪುಂಡಿ, ಆಪಂ, ನೀರ್‌ದೋಸೆ, ಸೇಮಿಗೆ, ಪತ್ರೊಡೆ, ವಿವಿಧ ರೀತಿಯ ಪಾಯಸಗಳು, ಗೆಂಡದಡ್ಡೆ, ಮೂಡೆ, ಬಂಗುಡೆ ಪುಳಿಮುಂಚಿ, ತಾಟೆಗಸಿ, ತಿಮರೆ  ಚಟ್ನಿ, ಎಟ್ಟಿ ಚಟ್ನಿ, ಕಡ್ಲೆ ಮನೋಳಿ, ಬಸಳೆಗಸಿ ಮೊದಲಾದ ಹಲವು ಖಾದ್ಯಗಳು ಸೇರಿದ್ದವು.     
  
   ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.