ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌


Team Udayavani, Jan 23, 2022, 11:01 AM IST

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

ಪನ್ವೇಲ್‌:ಕರಾವಳಿ ಸ್ಪೋರ್ಟ್ಸ್ ಆ್ಯಂಡ್‌ ಎಜುಕೇಶನಲ್‌ ಅಕಾಡೆಮಿ ಪನ್ವೆಲ್‌ ಇದರ ದಶಮಾನೋತ್ಸವ ಸಂಭ್ರಮವು ಜ. 14ರಂದು ಸಂಜೆ ನ್ಯೂಪನ್ವೆಲ್‌ ಪಶ್ಚಿಮದ ರಾಯನ್‌ ಹೈಸ್ಕೂಲ್‌ ಸಮೀಪದ ಸೆಕ್ಟರ್‌-10, ನೀಲ್‌ ಆರ್ಚಿಡ್‌ನ‌ ಶಾಪ್‌ ನಂಬರ್‌ 14ರಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ರಸಾಯನಿಯ ಮಹಾಬಲ ಟಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಹತ್ತು ವರ್ಷಗಳನ್ನು ಪೂರೈಸಿದ್ದು, ಇದರ ಅಂಗವಾಗಿ ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಪನ್ವೇಲ್‌ ಮಹಾನಗರ ಪಾಲಿಕೆಯ ಮೇಯರ್‌ ಡಾ| ಕವಿತಾ ಚೌತ್ಮೋಲ್‌ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪನ್ವೆಲ್‌ ಮಹಾನಗರ ಪಾಲಿಕೆಯ ಡೆಪ್ಯೂಟಿ ಮೇಯರ್‌ ಸೀತಾತಾಯಿ ಪಾಟೀಲ್‌, ಪಿಸಿಎಂಸಿಯ ನಗರ ಸೇವಕ, ಸ್ಥಾಯಿ ಸಮಿತಿಯ ಕಾರ್ಯಾಧ್ಯಕ್ಷ, ಕನ್ನಡಿಗ ಸಂತೋಷ್‌ ಜಿ. ಶೆಟ್ಟಿ, ಪಿಸಿಎಂಸಿಯ ಸ್ಥಳೀಯ ನಗರ ಸೇವಕ ಏಕನಾಥ್‌ ಗಾಯಕ್ವಾಡ್‌, ಸಂಸ್ಥೆಯ ಅಧ್ಯಕ್ಷ ಮಹೇಶ್‌ ಜಿ. ಹೆಗ್ಡೆ ಹಾಗೂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ. ತಾರನಾಥ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರತ್ನಾ ಚೌಟ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ವಿಕಾಸ್‌ ಪಾಟೀಲ್‌ ಅವರು ಸ್ವಾಗತಿಸಿ, ಕಾರ್ಯ ಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯ ದರ್ಶಿ ತಾರನಾಥ ಶೆಟ್ಟಿ ಅವರು ಪ್ರಾಸ್ತಾ ವಿಕವಾಗಿ ಮಾತನಾಡಿ, ಕರಾವಳಿ ನ್ಪೋರ್ಟ್ಸ್ ಆ್ಯಂಡ್‌ ಎಜುಕೇಶನಲ್‌ ಅಕಾಡೆಮಿ ಕಳೆದ ಒಂದು ದಶಕಗಳ ಕಾಲ ಸಲ್ಲಿಸಿದ ಸೇವೆ ಯನ್ನು ಹಾಗೂ ಸಾಧನೆಗಳನ್ನು ವಿವರಿಸಿ, ಸಂಸ್ಥೆಯು ದಶ ಮಾನೋ ತ್ಸವ ಆಚರಿಸಲು ಕಾರಣಿಕರ್ತ ರಾದ ಸಂಸ್ಥೆಯ ಎಲ್ಲ ಸದಸ್ಯರನ್ನು, ಆಡಳಿತ ಮಂಡಳಿಯನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

ಪನ್ವೇಲ್‌ ಮಹಾನಗರ ಪಾಲಿಕೆಯ ಮೇಯರ್‌ ಡಾ| ಕವಿತಾ ಚೌತ್ಮೋಲ್‌ ಅವರು ಮಾತನಾಡಿ, ಸಂಸ್ಥೆಯ ಸಿದ್ಧಿ-ಸಾಧನೆಗಳಿಗೆ ಅಭಿನಂದನೆ ಸಲ್ಲಿಸಿ ದರು. ಸಂಸ್ಥೆಯ ಕಳೆದ ಹತ್ತು ವರ್ಷಗಳ ಕಠಿನ ಪರಿಶ್ರಮ ಮತ್ತು ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿ ಗಾಗಿ ಶ್ರಮಿಸುತ್ತಿರುವ ಈ ಸಂಸ್ಥೆಯು ಭವಿಷ್ಯದಲ್ಲಿ ಯಶಸ್ಸಿನ ಶಿಖರವನ್ನೇರಲಿ ಎಂದು ಹಾರೈಸಿದರು.

ಪಿಸಿಎಂಸಿ ಆಗಿ ಹೊಸದಾಗಿ ನಿಯುಕ್ತಿಗೊಂಡ ಸೀತಾತಾಯಿ ಪಾಟೀಲ್‌ ಅವರನ್ನು ಸಂಸ್ಥೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಸೇವಕ ಸಂತೋಷ್‌ ಜಿ. ಶೆಟ್ಟಿ ಅವರು ಮಾತನಾಡಿ, ಸಂಸ್ಥೆಯ ಪ್ರಗತಿಗಾಗಿ ತನ್ನ ಸಹಾಯ, ಸಹಕಾರ ಸದಾಯಿದೆ ಎಂದು ನುಡಿದು ಶುಭಹಾರೈಸಿದರು.

ವೇದಿಕೆಯಲ್ಲಿ ಉತ್ತರ ರಾಯಗಢ ಜಿಲ್ಲಾ ಬಿಜೆಪಿ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ ಶ್ರೀನಿವಾಸ ಕೊಡೂರು, ಉದ್ಯಮಿ ಪಿ. ಪ್ರಶಾಂತ್‌ ಅವರು ಉಪಸ್ಥಿತರಿದ್ದು ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಭಜನ ಕಾರ್ಯಕ್ರಮ ಮತ್ತು ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು. ಜತೆ ಕಾರ್ಯದರ್ಶಿ ಪ್ರಸಾದ್‌ ದಲಾಲ್‌ ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.