ಪುಣೆಯಲ್ಲಿ ಕಂಪೆನಿಗಳು ಮರು ಆರಂಭ: ಊರಿಗೆ ಮರಳುವ ನಿರ್ಧಾರ ಬದಲಾಯಿಸಿದ 380 ವಲಸೆ ಕಾರ್ಮಿಕರು


Team Udayavani, May 14, 2020, 11:32 AM IST

ಪುಣೆಯಲ್ಲಿ ಕಂಪೆನಿಗಳು ಮರು ಆರಂಭ

ಸಾಂದರ್ಭಿಕ ಚಿತ್ರ

ಪುಣೆ: ಪುಣೆಯಿಂದ ಮಧ್ಯಪ್ರದೇಶ ಮತ್ತು ಉತ್ತರಾಖಂಡಕ್ಕೆ ತೆರಳಲು ಶ್ರಮಿಕ್‌ ವಿಶೇಷ ರೈಲುಗಳಿಗೆ ಅರ್ಜಿ ಸಲ್ಲಿಸಿದ್ದರೂ ಕೂಡಾ 380 ವಲಸೆ ಕಾರ್ಮಿಕರು ರವಿವಾರ ರೈಲು ಹಿಡಿಯಲಿಲ್ಲ. ಈ ಪ್ರದೇಶದಲ್ಲಿ ಅನೇಕ ಕೈಗಾರಿಕೆಗಳನ್ನು ಪುನಃ ತೆರೆದಿರುವುದರಿಂದ ಕಾರ್ಮಿಕರು ರೈಲು ಹಿಡಿಯಲು ಹಿಂದೇಟು ಹಾಕಿರುವುದಾಗಿ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

1172 ಜನರಿಗೆ ಮಧ್ಯಪ್ರದೇಶಕ್ಕೆ ಹೋಗಲು ಅನುಮತಿ ನೀಡಲಾಗಿದೆ. ಆದರೆ ರೈಲು ಹೊರಡುವ ಹೊತ್ತಿಗೆ 300 ಕಾರ್ಮಿಕರು ದೌಂಡ್‌ ನಿಲ್ದಾಣವನ್ನು ತಲುಪಿಲ್ಲ ಅವರಲ್ಲಿ ಹೆಚ್ಚಿನವರು ಎಂಐಡಿಸಿ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ದೌಂಡ್‌ನ‌ ತಹಶೀಲ್ದಾರ್‌ ಸಂಜಯ್‌ ಪಾಟೀಲ್, ಈ ಜನರು ಇಲ್ಲಿನ ಎಂಐಡಿಸಿ ಪ್ರದೇಶದಲ್ಲಿ ಕೆಲಸ ಪಡೆಯುತ್ತಿರುವುದರಿಂದ ತಾವು ಪ್ರಯಾಣಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಾರ್ಮಿಕರು ಹೊರಹೋಗುವುದರಿಂದ ಅವರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಲ್ಲಿನ ಕಂಪೆನಿಗಳಿಗೆ ತಿಳಿದಿದೆ. ಆದ್ದರಿಂದ ಅವರಿಗೆ ಕೆಲವು ಪ್ರೋತ್ಸಾಹಧನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಉತ್ತರಾಖಂಡಕ್ಕೆ ತೆರಳಿದ ರೈಲು ಹತ್ತಲು 80 ಕಾರ್ಮಿಕರು ಬಂದಿಲ್ಲ. ಅವರೆಲ್ಲರೂ ಇಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ಆದ್ದರಿಂದ ಅವರು ತಮ್ಮ ಗ್ರಾಮಗಳಿಗೆ ತೆರಳಲು ಮನಸ್ಸು ಮಾಡಿಲ್ಲ ಎಂದು ಪಾಟೀಲ್‌ ತಿಳಿಸಿದ್ದಾರೆ. ಪುಣೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನೇವಲ್‌ ಕಿಶೋರ್‌ ರಾಮ್, ವಾಸ್ತವವಾಗಿ ಇದು ಸಕಾರಾತ್ಮಕ ಸಂಕೇತವಾಗಿದೆ. ಎಂಐಡಿಸಿ ಪ್ರದೇಶದಲ್ಲಿ ಕೈಗಾರಿಕೆಗಳನ್ನು ತೆರೆಯುವುದು ಮತ್ತು ನಿಷೇಧಿತ ಪ್ರದೇಶಗಳಲ್ಲಿ ನಿರ್ಮಾಣ ಕಾರ್ಯಗಳಿಗೆ ಅವಕಾಶ ನೀಡುವುದು ಕಾರ್ಮಿಕರಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ. ಅದಕ್ಕಾಗಿಯೇ ಅವರು ಇಲ್ಲೇ ನಿಲ್ಲಲು ಆದ್ಯತೆ ನೀಡುತ್ತಿ ದ್ದಾರೆ ಎಂದು ತಿಳಿಸಿದ್ದಾರೆ. ಮಂಜೂರಾದ ಸಾಮರ್ಥ್ಯಕ್ಕಿಂತ ಕಡಿಮೆ ರೈಲುಗಳು ಓಡದಂತೆ ನೋಡಿಕೊಳ್ಳಲು ಅಧಿಕಾರಿಗಳು ಕಾರ್ಮಿಕರಿಗಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ ಎಂದು ಪಾಟೀಲ್‌ ಹೇಳಿದರು.

ಮಧ್ಯ ಪ್ರದೇಶದ ರೈಲು ಹತ್ತದ 300 ಕಾರ್ಮಿಕರಲ್ಲಿ ಒಬ್ಬರಾದ ಜ್ವಾಲಾ ಪ್ರಸಾದ್‌, ಅವರು ಕೆಲಸ ಮಾಡುತ್ತಿದ್ದ ಕುರ್ಮುಖ್‌ ಎಂಐಡಿಸಿ ಸ್ಥಾವರದಲ್ಲಿ ಕೆಲಸ ಪ್ರಾರಂಭವಾದ ಕಾರಣ ಅವರು ಹೊರಡಲಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ಹತ್ತು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇನೆ. ನಾವು ಕಾರ್ಮಿಕರ ವಿಶೇಷ ರೈಲಿಗಾಗಿ ಫಾರ್ಮ್ ಅನ್ನು ಸಹ ಭರ್ತಿ ಮಾಡಿದ್ದೇವೆ. ಆದರೆ ನನ್ನ ಕಂಪೆನಿಯಲ್ಲಿ ಕೆಲಸದ ಪ್ರಾರಂಭವಾಗಿರುವುದರಿಂದ ಮರಳುವ ಯೋಜನೆಯನ್ನು ಕೈಬಿಟ್ಟೆವು ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.