ಸ್ಪರ್ಧಾತ್ಮಕ ಯುಗದಲ್ಲಿಜ್ಞಾನಾರ್ಜನೆ ಬಹಳ ಮುಖ್ಯ: ಶಂಕರ್‌ ಬಿ. ಶೆಟ್ಟಿ


Team Udayavani, Aug 24, 2017, 2:51 PM IST

24-NRK-6.jpg

ಥಾಣೆ: ನವೋದಯ ಜ್ಯೂನಿಯರ್‌ ಕಾಲೇಜಿನ ಸಭಾಂಗಣದಲ್ಲಿ ಪ್ರಸ್ತುತ ವರ್ಷ ಪ್ರಾರಂಭವಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ತರಗತಿಗಳ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಬಂಟರ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ ಇವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಜ್ಞಾನದ ಜೊತೆಗೆ ಇತರ ಪಠ್ಯೇತರ ವಿಷಯದ ಬಗ್ಗೆಯೂ ಜ್ಞಾನವನ್ನು ಅರ್ಜಿಸುವುದು ಇಂದಿನ ಸ್ಪರ್ಧಾತ್ಮಕ ದಿನದಲ್ಲಿ ಬಹಳ ಅಗತ್ಯವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಒಂದು ಪ್ರಮುಖ ಉದ್ದೇಶವನ್ನಿಟ್ಟುಕೊಂಡು ಅದನ್ನು ಸಾಧಿಸಲು ಸತತ ಪ್ರಯತ್ನ ಪಟ್ಟರೆ ಯಶಸ್ಸು ಖಂಡಿತವಾಗಿಯೂ ಲಭಿಸುವುದು. ಒಳ್ಳೆಯ ವಿಷಯದ ಬಗ್ಗೆ ಪ್ರಾರಂಭಗೊಂಡ ಚಿಂತನೆಯನ್ನು ಸತತ ಪ್ರಯತ್ನದಿಂದ ಕಾರ್ಯರೂಪಕ್ಕೆ ತರುವುದು ಬಹಳ ಮುಖ್ಯ ಇದಕ್ಕೆ ಒಳ್ಳೆಯ ನಿದರ್ಶನ ನಮ್ಮ ನವೋದಯ ಕನ್ನಡ ಸೇವಾ ಸಂಘವಾಗಿದೆ ಎಂದು ನುಡಿದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭ ಹಾರೈಸಿದರು. 

ನವೋದಯ ಆಂಗ್ಲ ಮಾಧ್ಯಮ ಶಾಲೆಯ ಮಾಧ್ಯಮಿಕ ವಿಭಾಗದ ಮಕ್ಕಳ ಪ್ರಾರ್ಥನೆಯೊಂದಿಗೆ ಸಮಾರಂಭವು ಪ್ರಾರಂಭಗೊಂಡಿತು. ಡೆಲ್ಫಿನ್‌ ಆಂಡ್ರೆಡ್‌ ಕಾರ್ಯಕ್ರಮ ನಿರ್ವಹಿಸಿದರು. ಮಾಧ್ಯಮಿಕ ವಿಭಾಗದ ಶಿಕ್ಷಕಿಯಾದ ಅಂಬಿಲಿ ಪ್ರಭಾತ್‌ ಸ್ವಾಗತಿಸಿದರು. ನವೋದಯ ಕನ್ನಡ ಸೇವಾ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ್‌ ಎಸ್‌. ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯು ಚಾರಿಟೆಬಲ್ ಟ್ರಸ್ಟ್‌ ಆಗಿದ್ದು ಅತೀ ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ದರ್ಜೆಯ ಶಿಕ್ಷಣವನ್ನು ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಈ ಸಂಸ್ಥೆಯು ಸುರಕ್ಷತೆಯನ್ನು ನೀಡುವುದಾಗಿ ಭರವಸೆ ನೀಡಿದರು. ಕಾಲೇಜಿಗೆ ಬೇಕಾದ ಆಧುನಿಕ ಸೌಲಭ್ಯಗಳಲ್ಲಿ ಮುಖ್ಯವಾದ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರಗಳ ಸುಸಜ್ಜಿತವಾಗಿ ತಯಾರಾದ ಲ್ಯಾಬ್‌ಗಳ ಕಾರ್ಯವ್ಯವಸ್ಥೆಗೆ ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿಯರ ಸಹಕಾರವನ್ನು
ಶ್ಲಾಘಿಸಿದರು. 

ನವೋದಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಅನುರಾಧಾ ಅರ್ಜುನ್‌ ವಾಡ್ಕರ್‌ ಅವರು ನವೋದಯ ಕನ್ನಡ ಸೇವಾ ಸಂಘದ ಸತತ ಪ್ರಯತ್ನದಿಂದ ನೂತನವಾಗಿ ಸ್ಥಾಪನೆಗೊಂಡ ಜೂನಿಯರ್‌ ಕಾಲೇಜಿನ ಮೊದಲ ಬ್ಯಾಚಿನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಮಾಧ್ಯಮಿಕ ಹಾಗೂ ಜ್ಯೂನಿಯರ್‌ ಕಾಲೇಜಿನ ಮುಖ್ಯ ಶಿಕ್ಷಕಿ ಅಜಿತಾ ಪ್ರದೀಪ್‌ ಕುಮಾರ್‌ ಅವರು ಮಾತನಾಡಿ, ಇವರು ನಮ್ಮ ಶಾಲೆಯು ಉತ್ತಮ ಮಟ್ಟದ ವಿದ್ಯಾಭ್ಯಾಸವನ್ನು ಒದಗಿಸುತ್ತಿದ್ದು ಇನ್ನು ಮುಂದೆ ಜೂನಿಯರ್‌ ಕಾಲೇಜಿನಲ್ಲಿಯೂ ಇದೇ ರೀತಿಯ ಉತ್ತಮ
ಗುಣಮಟ್ಟದ ವಿದ್ಯೆಯನ್ನು ಒದಗಿಸುವುದಕ್ಕೆ ಶಿಕ್ಷಕರ ಹಾಗೂ ಸಂಘದ ಜೊತೆ ಪಾಲಕರ ಸಹಾಯವೂ ತುಂಬಾ ಮುಖ್ಯವಾಗಿರುವುದು ಎಂದು ತಿಳಿಸಿದರು.

ನವೋದಯ ಕನ್ನಡ ಸೇವಾ ಸಂಘದ ಅಧ್ಯಕ್ಷ ಜಯ ಕೆ. ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಿಸನ್‌ನಗರ ಪರಿಸರದಲ್ಲಿ ಮಧ್ಯಮ ವರ್ಗದ ಜನ ಸಮುದಾಯದೊಂದಿಗಿರುವ ನಮ್ಮ ಈ ನವೋದಯ ಆಂಗ್ಲ ಮಾಧ್ಯಮ ಶಾಲೆಯು ಗುಣಮಟ್ಟದ ವಿದ್ಯಾಭ್ಯಾಸವನ್ನು ಕನಿಷ್ಠ ಶುಲ್ಕದಲ್ಲಿ ಒದಗಿಸುತ್ತಾ ಬಂದಿದ್ದು, ಸಮಾಜದ ಗಣ್ಯರ ನೇತೃತ್ವದಲ್ಲಿ, ದಾನಿಗಳ ಹಾಗೂ ಪಾಲಕ ಪೋಷಕರ, ಶಿಕ್ಷಕರೆಲ್ಲರ ಸಹಕಾರ, ಪ್ರೋತ್ಸಾಹ ಇಂದು ಜೂನಿಯರ್‌ ಕಾಲೇಜನ್ನು ತೆರೆಯುವಲ್ಲಿ ಯಶಸ್ವಿಯಾಗಿದೆ.

ಈ ಯಶಸ್ಸಿಗೆ ಸಹಕರಿಸಿದ ಕೊಡುಗೈ ದಾನಿಗಳನ್ನು ಮತ್ತು ಸಹಕರಿಸಿದ ಪಾಲಕ ಪೋಷಕರನ್ನು ತುಂಬು ಹೃದಯದಿಂದ ಅಭಿನಂದಿಸಿದರು. ಶಿಕ್ಷಕಿ ರುಚಿ ಖರತ್‌ ವಂದಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.