ಶತಾಯುಷಿ ಹಿರೇಬೆಟ್ಟು ವಿಟ್ಠಲ ನಾಯಕ್‌ಗೆ ಅಭಿನಂದನೆ


Team Udayavani, Oct 25, 2017, 10:45 AM IST

24-Mum06a.jpg

ನವಿ ಮುಂಬಯಿ: ರಾಜಾಪುರ ಸಾರಸ್ವತ ಸಂಘ ಮುಂಬಯಿ ವತಿಯಿಂದ ಸಮಾಜ ಸೇವಕ ಶತಾಯುಷಿ ಹಿರೇಬೆಟ್ಟು ವಿಟ್ಠಲ ಕೃಷ್ಣ ನಾಯಕ್‌ ಅವರಿಗೆ ವಿಶೇಷ ಅಭಿನಂದನ  ಕಾರ್ಯಕ್ರಮವು ಇತ್ತೀಚೆಗೆ ಸೀವುಡ್ಸ್‌ನಲ್ಲಿ ನಡೆಯಿತು.

ಸದಾನಂದ ಪಾಟ್ಕರ್‌ ಪನ್ವೇಲ್‌, ಆರ್‌. ಕೆ. ನಾಯಕ್‌, ರಾಜಾಪುರ ಸಾರಸ್ವತ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಡಿ. ಬೋರ್ಕರ್‌ ಅವರು, ನಾಯಕ್‌ ಅವರನ್ನು ಶಾಲು ಹೊದೆಸಿ, ತಿಲಕವನ್ನಿಟ್ಟು, ಮಲ್ಲಿಗೆ ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ವಿಶೇಷ ರೀತಿಯಲ್ಲಿ ಸಮ್ಮಾನಿಸಿ ಅಭಿನಂದಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ  ರಾಜಾಪುರ ಸಾರಸ್ವತ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಡಿ. ಬೋರ್ಕರ್‌ ಅವರು, ಇಲ್ಲಿಯವರೆಗೆ ಶತಾಯುಷಿ ಎಂಬುದು ಅಲ್ಲಿ ಇಲ್ಲಿ ಕೇಳಿದ ವಿಷಯವಾಗಿತ್ತು. ಆದರೆ ಇಂದು ಪ್ರತ್ಯಕ್ಷವಾಗಿ ನಮ್ಮವರೊಬ್ಬರು 100 ವರ್ಷಗಳನ್ನು ಪೂರೈಸಿರುವುದು ಸಂತೋಷದ ಸಂಗತಿಯಾಗಿದೆ. ಶತಾಯುಷಿ ಸಾಧಕರೊಬ್ಬರನ್ನು ಸಮ್ಮಾನಿಸುವ ಸೌಭಾಗ್ಯ ನನಗೆ ಒದಗಿ ಬಂದಿರುವುದು ನನ್ನ ಭಾಗ್ಯವಾಗಿದೆ ಎಂದು ನುಡಿದು ಅಭಿನಂದಿಸಿ ಶುಭ ಹಾರೈಸಿದರು.

ಅತಿಥಿಯಾಗಿದ್ದ ರಾಮಣ್ಣ ಶೆವಡೆ ಅವರು ಮಾತನಾಡಿ, ಇಂದಿನ ಕಾರ್ಯಕ್ರಮವು ನಾನು ಜೀವಮಾನದಲ್ಲೇ ನೋಡಿರದ ಅಪೂರ್ವ ಅನುಭವ, ಕ್ಷಣವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೆ ಒಂದು ರೀತಿಯ ಸೌಭಾಗ್ಯವಾಗಿದೆ ಎಂದು ನುಡಿದು ಅಭಿನಂದಿಸಿದರು.

ಅತಿಥಿಯಾಗಿ ಪಾಲ್ಗೊಂಡ ಡಹಾಣೂವಿನ ಪಿ. ಆರ್‌. ರವಿಶಂಕರ್‌ ಮಾತನಾಡಿ, ಶತ
ಮಾನದ ಹಿಂದಿನ ವೃಕ್ಷದ ಬೇರುಗಳಿಗೆ ನೀರುಣ್ಣಿಸಿ ಗೌರವಿಸುವ ರೀತಿ ಒಂದು
ರೀತಿಯ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ನಮ್ಮ ಹಿರಿಯರಿಗೆಲ್ಲಾ ಸಂದ ಗೌರವವಾಗಿದೆ. ಇಂತಹ ಅರ್ಥ ಪೂರ್ಣ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಪಾಲ್ಗೊಳ್ಳುವಂತೆ ಮಾಡಿದಾಗ ಹಿರಿಯರನ್ನು ಹೇಗೆ ನೋಡಿಕೊಳ್ಳಬೇಕು ಎಂಬುದರ ಬಗ್ಗೆ ಅವರಿಗೆ ಅರಿವಾಗುತ್ತದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಪೂಜಾ ಜೆ. ಕಾಮತ್‌ ಅವರು ಸಮ್ಮಾನಿತ ನಾಯಕ್‌ ಅವರನ್ನು ಪರಿಚಯಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಂತಾ ಎಸ್‌. ನಾಯಕ್‌, ಲತಾ ಗೋಪಾಲ ನಾಯಕ್‌, ಸುನೀಲ್‌ ಚಿಂಬಾಳ್ಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸದಾನಂದ ವಿ. ನಾಯಕ್‌ ಅವರು ವಂದಿಸಿದರು. ವಿಟuಲ ಕೃಷ್ಣ ನಾಯಕ್‌ ಅವರನ್ನು ಮಹಿಳಾ ವಿಭಾಗದ ಸದಸ್ಯೆಯರು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರೇಬೆಟ್ಟು ವಿಟ್ಠಲ ಕೃಷ್ಣ ನಾಯಕ್‌ ಅವರು, ನಿಮ್ಮೆಲ್ಲರ ಅಭಿಮಾನ, ಗೌರವಕ್ಕೆ ಋಣಿಯಾಗಿದ್ದೇನೆ. ಇಂದಿನ ದಿನವು ನನ್ನ ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯುವ ಕ್ಷಣವಾಗಿದೆ. ನಿಮ್ಮೆಲ್ಲರ ಗೌರವ, ಅಭಿಮಾನ, ಪ್ರೀತಿ ಇದೇ ರೀತಿಯಲ್ಲಿರಲಿ ಎಂದು ಆಶಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.