ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯರಿಗೆ ಅಭಿನಂದನೆ


Team Udayavani, Jul 15, 2017, 4:35 PM IST

1400.jpg

ಸೊಲ್ಲಾಪುರ: ದೇಶದಲ್ಲಿ ಎಲ್ಲಿಯೇ ಕನ್ನಡ ಮಾಧ್ಯಮದಲ್ಲಿ 1 ರಿಂದ 10ನೇ ತರಗತಿಯವರೆಗೆ ಓದಿದವರಿಗೆ ಕರ್ನಾಟಕ ಸರಕಾರ ತನ್ನ ಸಾಮಾನ್ಯ ನೇಮಕಾತಿಗಳಲ್ಲಿ ಶೇ.5 ರಷ್ಟು ಮೀಸಲಾತಿ ನೀಡಿರುವುದನ್ನು ಸ್ವಾಗತಿಸುತ್ತ ಆದರ್ಶ ಕನ್ನಡ ಬಳಗದ ಸದಸ್ಯರು ಇತ್ತೀಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌. ಜಿ. ಸಿದ್ಧರಾಮಯ್ಯ ಅವರಿಗೆ ಸಮಸ್ತ ಹೊರನಾಡು ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸಿದರು.

ಹೊರನಾಡು ಕನ್ನಡಿಗರಿಗೆ ಕರ್ನಾಕಟದಲ್ಲಿ ಉದ್ಯೋಗಕ್ಕೆ ಅವಕಾಶವೇ ಇಲ್ಲವಾಗಿದ್ದ ಕಾರಣದಿಂದ ಹೊರನಾಡಿನ ಕನ್ನಡ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ತುಂಬ ನಿರಾಶರಾಗಿದ್ದರು. ಸರಕಾರ ಹೊರಡಿಸಿರುವ ಮೀಸಲಾತಿಯ ಸುತ್ತೋಲೆ ಹೊರನಾಡಿನಲ್ಲಿ ಮತ್ತೆ ಕನ್ನಡಪರ ವಾತಾವರಣ ನಿರ್ಮಿಸಿದೆ ಹಾಗೂ ಸಂಭ್ರಮವನ್ನು ಸೃಷ್ಟಿಸಿದೆ. ಕಳೆದ ಹಲವಾರು ವರ್ಷಗಳಿಂದ ಆದರ್ಶ ಕನ್ನಡ ಬಳಗವು ಮೀಸಲಾತಿಯ ಕುರಿತು ಹೋರಾಟ ನಡೆಸುತ್ತಿದ್ದು ಬೆಳಗಾವಿಯ ಅಧಿವೇಶನದಲ್ಲಿ  ಆಳಂದ ಶಾಸಕ ಬಿ. ಆರ್‌. ಪಾಟೀಲರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಭೇಟಿಯಾಗಿ ಈ ಬಗ್ಗೆ ಚರ್ಚಿಸಲಾಗಿತ್ತು. ಗ್ರಾಮೀಣಾಭಿವೃದ್ಧಿ ಸಚಿವ ಎಚ್‌. ಕೆ. ಪಾಟೀಲರೊಂದಿಗೆ ಬಳಗದ ಸದಸ್ಯರು ಕೂಲಂಕುಷವಾಗಿ ಚರ್ಚಿಸಿದ್ದರು. ಅಂದಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹನುಮಂತಯ್ಯನವರಿಗೆ ಸಮಸ್ಯೆಯ ಮನವರಿಕೆ ಮಾಡಿಕೊಡಲಾಗಿತ್ತು.

ತದನಂತರ ಬಳಗದ ಸದಸ್ಯರು ಬೆಂಗಳೂರಿಗೆ ತೆರಳಿ ಡಾ| ಬರಗೂರು ರಾಮಚಂದ್ರಪ್ಪ ಅವರಿಗೆ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದ ಈ ಬಗ್ಗೆ ಠರಾವು ಮಂಡಿಸುವಂತೆ ಒತ್ತಾಯಿಸಿತು. ಅಂತೆಯೇ ರಾಯಚೂರಿನ ಸಮ್ಮೇಳನದಲ್ಲಿ ಒಮ್ಮತದಲ್ಲಿ ಹೊರನಾಡ ಕನ್ನಡಿಗರಿಗೆ ಅವಕಾಶ ಕೊಡಬೇಕೆಂದು ನಿರ್ಣಯ ಕೈಗೊಳ್ಳಲಾಯಿತು. ಮುಂದೆ ಕಸಾಪ ಅಧ್ಯಕ್ಷ ಮನು ಬಳಿಗಾರ ಅವರು ಬರಗೂರು ಅವರ ನೇತೃತ್ವದಲ್ಲಿ ಸಭೆ ಕರೆದು ಆದರ್ಶ ಕನ್ನಡ ಬಳಗದ ಸದಸ್ಯರೊಂದಿಗೆ ಚರ್ಚಿಸಿ ಆಗಬೇಕಿದ್ದ ಕಾರ್ಯಗಳ ಪಟ್ಟಿಮಾಡಿದರು. ಅದರಲ್ಲಿ ಮುಖ್ಯವಾಗಿ ಹೊರನಾಡ ಕನ್ನಡಿಗರಿಗೆ ಮೀಸಲಾತಿಯ ಅಂಶವೂ ಇತ್ತು. ಹೀಗೆ ಆದರ್ಶ ಕನ್ನಡ ಬಳಗವು ಸುದೀರ್ಘ‌ವಾಗಿ ನಡೆಸಿದ ಹೋರಾಟದ ಫಲವಾಗಿ ಇಂದು ಸರಕಾರ ಮೀಸಲಾತಿ ಸುತ್ತೋಲೆಯನ್ನು ಹೊರಡಿಸಿದೆ.

ಈ ಮೀಸಲಾತಿಯು ಹೊರನಾಡ ಕನ್ನಡಿಗರಿಗೆ ಆಶಾಕಿರಣವಾಗಿ ಕಾಣುತ್ತಿದೆ. ಈ ನಿಮಿತ್ತ ಬೆಂಗಳೂರಿನ ವಿಧಾನಸೌಧದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದಲ್ಲಿ ಅಧ್ಯಕ್ಷರನ್ನು ಗೌರವಿಸಿದ ಆದರ್ಶ ಕನ್ನಡ ಬಳಗದ ಸದಸ್ಯರು ಇದೇ ಸಂದರ್ಭದಲ್ಲಿ ಹೊರನಾಡಿನ ಕನ್ನಡಿಗರ ಇನ್ನಿತರ ಸಮಸ್ಯೆಗಳ 
ಬಗ್ಗೆ ಚರ್ಚಿಸುತ್ತ ಯಾವುದೇ ಉದ್ಯೋಗಕ್ಕೆಂದು ಅರ್ಜಿ ಸಲ್ಲಿಸುವಾಗ ಸಾಫ್ಟ್‌ವೇರ್‌ನಲ್ಲಿ ಕರ್ನಾಟಕದ ಜಿಲ್ಲೆಗಳನ್ನು ಹೊರತುಪಡಿಸಿ ಹೊರನಾಡಿನ ಯಾವುದೇ ಪ್ರದೇಶದ ಉಲ್ಲೇಖವಿಲ್ಲ. ಹಾಗಿದ್ದಲ್ಲಿ ಹೊರನಾಡ ಕನ್ನಡಿಗರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಸಾಧ್ಯವೇ ಇಲ್ಲ. ಹೀಗಾಗಿ ಮೊಟ್ಟ ಮೊದಲಿಗೆ ಸಾಫ್ಟ್‌ವೇರ್‌ನಲ್ಲಿ ಸುಧಾರಣೆಗಳಾಗಬೇಕು ಹಾಗೂ ಹೊನಾಡಿನ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ಕರ್ನಾಟಕ ಸರಕಾರ ಕನ್ನಡಿಗರಿಗಾಗಿ ಹೊರಡಿಸಿದ ಶೇ. 5 ರಷ್ಟು ಮೀಸಲಾತಿಯ ಸುತ್ತೋಲೆಯನ್ನು ಆದರ್ಶ ಕನ್ನಡ ಬಳಗವು ಸ್ವಾಗತಿಸುತ್ತದೆ. ಇದು ಸರಿಯಾಗಿ ಕಾರ್ಯರೂಪದಲ್ಲಿ ಬರಬೇಕು. ಇದರಿಂದ ಹೊರನಾಡು ಕನ್ನಡಿಗರಿಗೆ ಎಷ್ಟರಮಟ್ಟಿಗೆ ಲಾಭವಾಗುತ್ತದೆ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಸರಕಾರ ಹೊರನಾಡು ಕನ್ನಡಿಗರಿಗಾಗಿ ವಿಶೇಷ ಮೀಸಲಾತಿ ನೀಡಬೇಕು. ಆಗ ಮಾತ್ರ ಹೊರನಾಡು ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಹಾಗೂ ಅವರ ಬದುಕಿಗೆ ಸ್ಥೈರ್ಯ ಬರುತ್ತದೆ ಎಂದು ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ್‌ ಶೇಖ್‌ ತಿಳಿಸಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.