ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆನ್ಲೈನ್‌ ಪ್ರತಿಭಟನೆ


Team Udayavani, May 29, 2020, 8:29 AM IST

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆನ್ಲೈನ್‌ ಪ್ರತಿಭಟನೆ

ಮುಂಬಯಿ, ಮೇ 28: ಪಕ್ಷದ ಮುಖಂಡ ರಾಹುಲ್‌ ಗಾಂಧಿ ಈ ಹಿಂದೆ ಪ್ರಸ್ತಾಪಿಸಿದ ನ್ಯಾಯ್‌ ಯೋಜನೆಗೆ ಅನುಗುಣವಾಗಿ ಬಡವರಿಗೆ ಕೇಂದ್ರದಿಂದ ಸಹಾಯವನ್ನು ಕೋರಿ ಮಹಾರಾಷ್ಟ್ರ ಕಾಂಗ್ರೆಸ್‌ ಆನ್ಲೈನ್‌ ಪ್ರತಿಭಟನೆ ನಡೆಸಿತು.

ರಾಜ್ಯ ಘಟಕದ ಮುಖ್ಯಸ್ಥ ಬಾಳಸಾಹೇಬ್‌ ಥೋರಟ್‌ ಅವರ ನೇತೃತ್ವದಲ್ಲಿ ನಡೆದ ಸ್ಪೀಕ್‌ ಅಪ್‌ ಇಂಡಿಯಾ ಹೆಸರಿನ ಈ ಆನ್‌ಲೈನ್‌ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಯೂಟ್ಯೂಬ್, ಫೇಸ್‌ಬುಕ್‌, ಟ್ವಿಟರ್‌ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ಗಳನ್ನು ಬಳಸಿ ಕೇಂದ್ರ ಸರಕಾರದ ವಿರುದ್ಧ ಟೀಕಾ ದಾಳಿ ನಡೆಸಿದರು. ಆರಂಭದಲ್ಲಿ ಬಡ ಕುಟುಂಬಕ್ಕೆ 10,000 ರೂ. ಮತ್ತು ಮುಂದಿನ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳನ್ನು ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದರು. ಪಕ್ಷದ ಕೇಂದ್ರ ನಾಯಕತ್ವದ ಸೂಚನೆಯ ಮೇರೆಗೆ ಈ ಆಂದೋಲನವನ್ನು ನಡೆಸಲಾಯಿತು ಎಂದು ಥೋರಟ್‌ ಹೇಳಿದ್ದಾರೆ.

ಕೋವಿಡ್ ವೈರಸ್‌ ಪ್ರೇರಿತ ಲಾಕ್‌ ಡೌನ್ನಿಂದಾಗಿ ಉದ್ಭವವಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಹೆಚ್ಚು ಹಾನಿಗೊಳಗಾದ ಬಡವರಿಗೆ ಹಣವನ್ನು ನೀಡುವುದರಿಂದ ಅವರಿಗೆ ಖರೀದಿ ಮಾಡಲು ಸಾಧ್ಯವಾಗುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಲಿದೆ ಎಂದು ಕಾಂಗ್ರೆಸ್‌ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಲೋಕಸಭಾ ಚುನಾವಣೆಗೆ ಮೊದಲು ರಾಹುಲ್‌ ಗಾಂಧಿ ನ್ಯಾಯ್‌ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಈ ಯೋಜನೆಯಡಿ ಬಡವರಿಗೆ ತಿಂಗಳಿಗೆ ಒಂದು ನಿರ್ದಿಷ್ಟ ಮೊತ್ತವನ್ನು ಪಾವತಿಸಲಾಗುವುದು ಎಂದು ಅವರು ಪ್ರಸ್ತಾಪಿಸಿದ್ದರು.

ಬಡವರ ಕೊಳ್ಳುವ ಸಾಮರ್ಥ್ಯವು ಕಾರ್ಖಾನೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಉದ್ಯೋಗಗಳ ಸೃಷ್ಟಿಗೂ ಕಾರಣವಾಗಲಿದೆ ಎಂದು ಗಾಂಧಿ ಹೇಳಿದ್ದಾರೆ. ಸಾಮಾನ್ಯ ಜನರು ಕೋವಿಡ್ ವೈರಸ್‌ ಬಿಕ್ಕಟ್ಟಿನಿಂದ ಹೆಚ್ಚು ಹಾನಿಗೊಳಗಾಗಿದ್ದಾರೆ. ಯಾವುದೇ ಆದಾಯದ ಮೂಲವಿಲ್ಲದೆ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ಮಹಾರಾಷ್ಟ್ರದ ಕಂದಾಯ ಸಚಿವರಾಗಿರುವ ಥೋರಟ್‌ ನುಡಿದಿದ್ದಾರೆ.

ಈ ಸಮಯದಲ್ಲಿ ನಾವು ಹೆಚ್ಚು ನೆನಪಿಸಿಕೊಳ್ಳುತ್ತಿರುವುದು ರಾಹುಲ್‌ ಜಿ ಅವರು ಪ್ರಸ್ತಾಪಿಸಿದ ನ್ಯಾಯ ಯೋಜನೆ. ನಾವು ಆರ್ಥಿಕತೆಗೆ ಆವೇಗವನ್ನು ನೀಡಲು ಬಯಸಿದರೆ ನಾವು ಬಡವರಿಗೆ ಸ್ವಲ್ಪ ಹಣವನ್ನು ನೀಡಬೇಕು. ಹಾಗಾಗಿ, ಕೇಂದ್ರವು ಈ ಪ್ರಸ್ತಾಪಿತ ಯೋಜನೆಗೆ ಅನುಗುಣವಾಗಿ ಬಡವರಿಗೆ ವಿತ್ತೀಯ ನೆರವು ನೀಡಬೇಕು ಎಂದವರು ಫೇಸ್‌ಬುಕ್‌ ಲೈವ್‌ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಾಗ ಹೇಳಿದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.