ಧರ್ಮ ಸಂರಕ್ಷಣೆಗೆ ಸಹಕಾರ ಅಗತ್ಯ: ಪಲಿಮಾರು ಶ್ರೀ 


Team Udayavani, Oct 3, 2017, 11:40 AM IST

30-Mum02a.jpg

 ಮುಂಬಯಿ: ಇತಿಹಾಸ ಪ್ರಸಿದ್ಧ ಭಾರತದ ಅತೀ ಪುರಾತನ ಹಾಗೂ ವಿಶ್ವದಾದ್ಯಂತ ಅಸಖ್ಯಾಂತ ಭಕ್ತಾದಿಗಳ ಸಂಗಮ ಕ್ಷೇತ್ರ ಉಡುಪಿ ಶ್ರೀ ಕೃಷ್ಣ ದೇವಾಲಯ. ಶ್ರೀ ಮಧ್ವಾಚಾರ್ಯರ ತತ್ವದಾರ್ಶ ಹಾಗೂ ಆಧ್ಯಾತ್ಮಿಕವಾಗಿ ಸಂಪದ್ಭರಿತವಾಗಿರುವ ಶ್ರೀ ಕ್ಷೇತ್ರ ನಂಬಿಕೆ, ಶ್ರದ್ಧೆ, ಸಂಸ್ಕಾರ ಮಾನವೀಯ ಧರ್ಮಗಳನ್ನು ಬೋಧಿಸುವ ತಾಣವಾಗಿದೆ. ಸನಾತನ ಧರ್ಮ, ಪೌರಾಣಿಕ ಕಥೆಗಳ ಮೂಲಕ ವಿಕೃತ ಮನಸ್ಸುಗಳನ್ನು ಜಾಗೃತಗೊಳಿಸಿ ಧರ್ಮ ಸಂರಕ್ಷಣೆಗೆ ತಾವೆಲ್ಲರು  ಕೈಜೋಡಿಸಬೇಕು ಎಂದು ದ್ವಿತೀಯ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ  ನುಡಿದರು.

ಸೆ. 29ರಂದು ಬೊರಿವಲಿ ಪಶ್ಚಿಮದ ಜೈರಾಜ್‌ ನಗರದಲ್ಲಿರುವ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ತುಳುನಾಡಿನ ಆರಾಧನಾ ಪದ್ಧತಿ, ಸಾಂಸ್ಕೃತಿಕ ವೈಭವ, ಆಧ್ಯಾತ್ಮಿಕ ಚಿಂತನೆ ಆಡಳಿತ ಮೊಕ್ತೇಸರ ಪ್ರದೀಪ್‌ ಸಿ. ಶೆಟ್ಟಿ ಅವರ ನೇತೃತ್ವದಲ್ಲಿ ನಿರಂತರವಾಗಿ ಜರಗುತ್ತಿದೆ ಎಂಬುವುದಕ್ಕೆ ಇಲ್ಲಿನ ಜನ ಸಂದಣಿಯ ಭಕ್ತರೆ ನಿದರ್ಶನವಾಗಿದ್ದಾರೆ. ದಿನನಿತ್ಯ ವಿವಿಧ ಪೂಜಾ ಕೈಂಕರ್ಯ, ಹೋಮ, ಜಪಯಜ್ಞ, ಅನ್ನಸಂತರ್ಪಣೆಯಿಂದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಂಬಿಕೆ, ಶ್ರದ್ಧೆಗಳಿಂದ ಪಾವಿತ್ರÂ ಹೊಂದಿದೆ. ಪರ್ಯಾಯ ಉತ್ಸವದಲ್ಲಿ ಆಯೋಜಿಸಲಾಗಿರುವ ಲಕ್ಷ ತುಳಸಿ ಅರ್ಚನೆ, ಅಖಂಡ ಭಜನ ನಾಮಾರ್ಚನೆಯಲ್ಲಿ ಮುಂಬಯಿಯ ಜನತೆ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಬೇಕು ಎಂದರು.

ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ್‌ ಸಿ. ಶೆಟ್ಟಿ ದಂಪತಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾರಾರ್ಪಣೆಗೈದು, ಫಲಪುಷ್ಪಾದಿಗಳಿಂದ ಗೌರವಪೂರ್ವಕವಾಗಿ ಸ್ವಾಗತಿಸಿ, ಮಂತ್ರಾಕ್ಷತೆಯೊಂದಿಗೆ ಆಶೀರ್ವಾದ ಪಡೆದರು. ಪ್ರಬಂಧಕ ಬೆಳ್ಮಣ್‌ ವೆಂಕಟ್ರಮಣ ತಂತ್ರಿ ಅವರು ಪಲಿಮಾರು ಶ್ರೀಗಳಿಗೆ ತುಳಸಿಮಾಲೆ ಹಾಕಿ ಗೌರವಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ್‌ ಸಿ. ಶೆಟ್ಟಿ ಸ್ವಾಗತಿಸಿ, ಪಲಿಮಾರು ಶ್ರೀಗಳ ಪರ್ಯಾಯ ಸಂದರ್ಭದಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕು. ಶ್ರೀ ಮಹಿಷಮರ್ದಿನಿ ದೇವ ಸ್ಥಾನದಲ್ಲಿ ಜರಗಲಿರುವ ವರ್ಷದ ಜಾತ್ರೆ, ಬಲಿ ಉತ್ಸವ, ನಾಗರ ಪಂಚಮಿ, ನವರಾತ್ರಿ, ದೀಪಾವಳಿ ಮೊದಲಾದ ವಿಶೇಷ ಹಬ್ಬಹರಿದಿನಗಳು ತುಳುನಾಡಿನ ಆಚರಣೆಯೊಂದಿಗೆ ಆಯೋಜಿಸಲಾಗುತ್ತದೆ. ಶುಭಕಾರ್ಯ ವಿವಾಹ, ಹಾಗೂ ವಿವಿಧ ಪೂಜಾ ಸಂಕಲ್ಪಗಳನ್ನು ದೇವಸ್ಥಾನದಲ್ಲಿ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ತುಳು-ಕನ್ನಡಿಗರೆಲ್ಲರು ಪಡೆದುಕೊಳ್ಳಬೇಕು ಎಂದರು.

ಮೊಕ್ತೇಸರ ಜಯರಾಜ ಶ್ರೀಧರ ಶೆಟ್ಟಿ  ದಂಪತಿ, ಸಂತೋಷ್‌ ಕುಮಾರ್‌ ಭಟ್‌, ಪಲಿಮಾರು ಮಠದ ಸಂಚಾಲಕ ಶ್ರೀಶ ಭಟ್‌, ಗುರುರಾಜ ಉಪಾಧ್ಯಾಯ, ಗಿರೀಶ್‌ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಅನೇಕ ಗಣ್ಯರು, ತುಳು-ಕನ್ನಡಿಗರು ಉಪಸ್ಥಿತರಿದ್ದು ಶ್ರೀಗಳ ಆಶೀರ್ವಾದ ಪಡೆದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.