ನಾಲ್ಕು ಹೊಸ ಜಂಬೋ ಆಸ್ಪತ್ರೆಗಳ ನಿರ್ಮಾಣ: ಬಿಎಂಸಿ


Team Udayavani, Jun 5, 2021, 1:01 PM IST

Construction of four new jumbo hospitals

ಮುಂಬಯಿ,: ಕೊರೊನಾದ ಮೂರನೇ ಅಲೆಯನ್ನು ನಿಭಾಯಿಸಲು ನಾಲ್ಕು ಹೊಸ ಜಂಬೋ ಆಸ್ಪತ್ರೆಗಳನ್ನು ನಿರ್ಮಿಸುವುದರೊಂದಿಗೆ ಇದನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಇರಿಸಿಕೊಳ್ಳಲಾಗುವುದು ಮತ್ತು ಈ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಕನಿಷ್ಠ 50 ಹಾಸಿಗೆಗಳನ್ನು ಮೀಸಲಿಡಲಾಗುವುದು ಎಂದು ಮುಂಬಯಿ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಮುಂಬಯಿಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಸಂಭಾವ್ಯ ಮೂರನೇ ಅಲೆಯನ್ನು ನಿಭಾಯಿಸಲು ಜಂಬೋ ಆಸ್ಪತ್ರೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಬಲಪಡಿಸುವ ಕೆಲಸವನ್ನು ಪುರಸಭೆ ಕೈಗೊಂಡಿದೆ. ಪ್ರಸ್ತುತ ಎಂಟು ಜಂಬೊ ಕೊರೊನಾ ಆಸ್ಪತ್ರೆಗಳಲ್ಲಿ 10,830 ಹಾಸಿಗೆಗಳಿವೆ. ಇದರಲ್ಲಿ ತೀವ್ರ ನಿಗಾ ಘಟಕದ 872 ಹಾಸಿಗೆ ಮತ್ತು ವೆಂಟಿಲೇಟರ್‌ ಸೌಲಭ್ಯವಿರುವ 574 ಹಾಸಿಗೆಗಳನ್ನು ಹೊಂದಿದೆ.

ಈ ಜಂಬೊ ಆಸ್ಪತ್ರೆಗಳನ್ನು ಸುಮಾರು ಆರು ತಿಂಗಳ ಅವಧಿಗೆ ಸ್ಥಾಪಿಸಲಾಯಿತು. ಇತ್ತೀಚೆಗಿನ ಚಂಡಮಾರುತಗಳ ಬಳಿಕ ಈ ಎಲ್ಲ ಎಂಟು ಜಂಬೊ ಕೊರೊನಾ ಆಸ್ಪತ್ರೆಗಳು ರಚನಾತ್ಮಕ ಲೆಕ್ಕಪರಿಶೋಧನೆ ಮತ್ತು ಅಗ್ನಿಶಾಮಕ ಲೆಕ್ಕಪರಿಶೋಧನೆಗೆ ಬಳಪಡಿಸಲಾಗುತ್ತಿದೆ. ಇವುಗಳಲ್ಲಿ ಬಿಕೆಸಿ, ನೆಸ್ಕೊ ಹಂತ ಒಂದು ಮತ್ತು ಎರಡು, ದಹಿಸಾರ್‌ ಎರಡು, ನೆಸ್ಕೊ, ಡೊಮ…, ಮುಲುಂಡ್‌ ಮತ್ತು ಸೆವೆನ್‌ ಹಿಲ್ಸ್ ಸೇರಿವೆ.ಮಕ್ಕಳಿಗೆ ಪ್ರತ್ಯೇಕ ವಿಭಾಗಮಲಾಡ್‌, ಕಾಂಜುರ್‌ಮಾರ್ಗ, ಸಯಾನ್‌ ಮಹಾಲಕ್ಷ್ಮೀಗಳಲ್ಲಿ ಹೊಸ ಜಂಬೋ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದ್ದು, ತೀವ್ರ ನಿಗಾ ಘಟಕಕ್ಕೆ ಶೇ. 70ರಷ್ಟು ಆಮ್ಲಜನಕ ಹಾಸಿಗೆಗಳನ್ನು ಕಾಯ್ದಿರಿಸಲಾಗುವುದು ಎಂದು ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಈ ಎಲ್ಲ ಸ್ಥಳಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಿಭಾಗಗಳನ್ನು ಸ್ಥಾಪಿಸಲಾಗುವುದು. ಆರಂಭದಲ್ಲಿ 25ರಿಂದ 50 ಹಾಸಿಗೆಗಳನ್ನು ಇಲ್ಲಿ ಒದಗಿಸಲಾಗುವುದು. ಈ ಮಕ್ಕಳಿಗೆ ಅಗತ್ಯವಾದ ಉಪಕರಣಗಳನ್ನು ಖರೀದಿಸಲಾಗುವುದು. ಅಗತ್ಯವಿದ್ದರೆ ಈ ಸ್ಥಳದಲ್ಲಿ 250 ಹಾಸಿಗೆಗಳನ್ನು ವ್ಯವಸ್ಥೆಗೊಳಿಸಬಹುದು ಎಂದು ಹೇಳಿದರು.

ಇಲಾಖಾವಾರು ಸಭೆ3ನೇ ಅಲೆಯಲ್ಲಿ ಮಕ್ಕಳು ಸೋಂಕಿಗೆ ಒಳಗಾಗುವ ಸಂಖ್ಯೆ ಹೆಚ್ಚಾಗುತ್ತದೆ ಎಂದು ತಜ್ಞರ ಹೇಳಿಕೆ ಯನ್ನು ಪರಿಗಣಿಸಿ, ನಾವು ಮುಂಬಯಿಯ 24ವಿಭಾಗಗಳಲ್ಲಿ ಮಕ್ಕಳ ವೈದ್ಯರು ಮತ್ತು ಇತರ ವೈದ್ಯರೊಂದಿಗೆ ಸಭೆ ಆರಂಭಿಸಿದ್ದೇವೆ. ಮಕ್ಕಳಿಗಾಗಿ ತಂಡವು ನೀಡಬೇಕಾದ ಸೂಚನೆಗಳು ಮತ್ತು ಚಿಕಿತ್ಸೆ ಯ ಬಗ್ಗೆ ಮುಂಬಯಿಯ ಎಲ್ಲ ಸಂಬಂಧಪಟ್ಟ ವೈದ್ಯರಿಗೆ ತಿಳಿಸಲಾಗುವುದು. ಮಕ್ಕಳ ತಜ್ಞರು ಮತ್ತು ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳ ಇಲಾಖಾವಾರು ಸಭೆಗಳು ಪ್ರಾರಂಭವಾಗಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.