ಕೋವಿಡ್ ಮಹಾಮಾರಿ : ಮುಂಬಯಿಯಲ್ಲಿ 1 ತಿಂಗಳಲ್ಲಿ 1.49 ಲಕ್ಷ ಪ್ರಕರಣ
Team Udayavani, Apr 11, 2021, 12:48 PM IST
ಮುಂಬಯಿ: ಮುಂಬಯಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಂಕಿಅಂಶಗಳ ಪ್ರಕಾರ ಮುಂಬಯಿಯಲ್ಲಿ ಕಳೆದ ಒಂದು ತಿಂಗಳಲ್ಲಿ 1,49,196 ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಚೇತರಿಸಿಕೊಂಡವರ ಸಂಖ್ಯೆ ಕೇಲವ 77,560ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ಮುಂಬಯಿಯಲ್ಲಿ ಸಾವಿನ ಸಂಖ್ಯೆ ಕಳೆದ ವರ್ಷದ ಮೇ ಮತ್ತು ಜೂನ್ಗಿಂತ ಇಳಿಕೆಯಾಗಿದ್ದು, ಕಳೆದ ತಿಂಗಳಲ್ಲಿ 351 ಸಾವುಗಳು ಸಂಭವಿಸಿದ್ದವು. ಮುಂಬಯಿಯಲ್ಲಿ ನಿಯಂತ್ರಣದಲ್ಲಿದ್ದ ಸೋಂಕು ಫೆಬ್ರವರಿಯಿಂದ ಮತ್ತೆ ಹೆಚ್ಚಲಾರಂಭಿಸಿದೆ. ಈ ವರ್ಷದ ಮಾರ್ಚ್ ನಲ್ಲಿ ಕೋವಿಡ್ ಬೆಳವಣಿಗೆಯ ದರ ಅತೀ ಹೆಚ್ಚು ದಾಖಲಾಗಿದ್ದು, ಮಾರ್ಚ್ 7ರಂದು ಮುಂಬಯಿಯಲ್ಲಿ ಕೋವಿಡ್ 3,33,564 ಸೋಂಕಿತರಿದ್ದರು. ಇದು ಎಪ್ರಿಲ್ 7ಕ್ಕೆ 4,82,760ಕ್ಕೆ ತಲುಪಿದೆ. ಸಾವಿನ ಸಂಖ್ಯೆ ಕಡಿಮೆಯಾಗಿದ್ದು, ಮಾರ್ಚ್ 7ರ ವೇಳೆಗೆ 11,500 ಸಾವುಗಳು ಸಂಭವಿಸಿದ್ದು, ಎಪ್ರಿಲ್ 7ರಂದು ಈ ಸಂಖ್ಯೆ 11,851ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.
ಆರೋಗ್ಯ ಇಲಾಖೆಗೆ ಕಳವಳ :
ಈವರೆಗೆ 3.88ಲಕ್ಷ ಸೋಂಕಿತರು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಮಾರ್ಚ್ ಹೋಲಿಸಿದರೆ ಎಪ್ರಿಲ್ನಲ್ಲಿ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಆದ್ದರಿಂದ ಪುರಸಭೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಹೆಚ್ಚಿಸಿದೆ. ಎಪ್ರಿಲ್ ಮೊದಲ ವಾರದಲ್ಲಿ 58,246 ಸೋಂಕಿತರು ಕಂಡುಬಂದಿದ್ದು, ಇದು ಪುರಸಭೆಯ ಆರೋಗ್ಯ ಇಲಾಖೆಗೆ ಕಳವಳಕ್ಕೆ ಕಾರಣವಾಗಿದೆ.
ಹೋಮ್ ಕ್ವಾರಂಟೈನ್ನಲ್ಲಿ ಚಿಕಿತ್ಸೆ :
ಮುಂಬಯಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆ 81,886ಕ್ಕೆ ತಲುಪಿದೆ. ಈ ಪೈಕಿ ಸುಮಾರು ಶೇ.80ರಷ್ಟು ಮಂದಿ ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಆದ್ದರಿಂದ ಹೆಚ್ಚಿನವರು ಹೋಮ್ ಕ್ವಾರಂಟೈನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಆಸ್ಪತ್ರೆ ಮತ್ತು ಕೋವಿಡ್ ಕೇಂದ್ರಗಳ ಮೇಲಿನ ಒತ್ತಡ ಕಡಿಮೆಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್
Desi Swara:ಸಿಟಿ ಆಫ್ ವಿಂಡ್ಸ್ ಕ್ಯಾಸ್ಪಿಯನ್: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ
Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ