10 ಸಾವಿರ ಪ್ರಕರಣ ಪಟ್ಟಿಗೆ ಅಂಧೇರಿ, ಮಲಾಡ್‌ ಸೇರ್ಪಡೆ


Team Udayavani, Sep 18, 2020, 8:15 PM IST

mumbai-tdy-1

ಸಾಂದರ್ಭಿಕ ಚಿತ್ರ

ಮುಂಬಯಿ, ಸೆ. 17: ನಗರದ ವಿಲೇಪಾರ್ಲೆಯಿಂದ ಬೊರಿವಲಿವರೆಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬೊರಿವಲಿಯೊಂದಿಗೆ ಪ್ರಸ್ತುತ ಮಲಾಡ್‌ ಮತ್ತು ಅಂಧೇರಿ ಕೂಡಾ ಹತ್ತು ಸಾವಿರ ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ಗುಂಪಿಗೆ ಸೇರಿದ್ದು, ಸಾರ್ವಜನಿಕ ಆರೋಗ್ಯ ಅಧಿಕಾರಿಗಳಿಗೆ ದೊಡ್ಡ ಚಿಂತೆಯಾಗಿ ಪರಿಣಮಿಸಿದೆ.

ಸೋಂಕು ಹರಡುತ್ತಿರುವ ಆರ್‌ ಸೆಂಟ್ರಲ್‌ ವಾರ್ಡ್‌ನ ಬೊರಿವಲಿಯಲ್ಲಿ ಈಗಾಗಲೇ ಹತ್ತು ಸಾವಿರ ಪ್ರಕರಣಗಳ ಗಡಿದಾಟಿದ್ದು, ಪಿ ನಾರ್ಥ್ ವಾರ್ಡ್‌ನ ಮಲಾಡ್‌ ಕೂಡಾ 10,079 ಪ್ರಕರಣಗಳನ್ನು ಹೊಂದಿದೆ. ಕೆ-ಈಸ್ಟ್‌ ವಾರ್ಡ್‌ನಲ್ಲಿರುವ ಜೋಗೇಶ್ವರಿ, ಅಂಧೇರಿ, ವಿಲೇಪಾರ್ಲೆ ಪೂರ್ವ ಭಾಗದಲ್ಲೂ 10,027 ಪ್ರಕರಣಗಳಿವೆ. ಮೇ-ಜೂನ್‌ ಅವಧಿಯಲ್ಲಿ ಕೋವಿಡ್‌ ಉತ್ತುಂಗದಲ್ಲಿದ್ದಾಗ ಈ ವಾರ್ಡ್ ಗಳು ದಕ್ಷಿಣ ಮಧ್ಯ ಮುಂಬಯಿಯ ಹಾಟ್‌ ಸ್ಪಾಟ್‌ಗಳಿಗಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ್ದವು. ಅಂಧೇರಿ ಪಶ್ಚಿಮ, ಭಾಂಡೂಪ್‌,ಮುಲುಂಡ್‌, ದಹಿಸಾರ್‌ ಮತ್ತು ಘಾಟ್ಕೊàಪರ್‌ ಒಳಗೊಂಡ ವಾರ್ಡ್‌ಗಳು ಆತಂಕದ ಇತರ ತಾಣಗಳಾಗಿವೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಹಾಟ್‌ಸ್ಪಾಟ್‌ಗಳಾದ ಐ ಸೌತ್‌ ವಾರ್ಡ್‌ನ ವರ್ಲಿ, ಎಂ-ಈಸ್ಟ್‌ ವಾರ್ಡ್‌ದ ಗೋವಾಂಡಿ, ಎಫ್‌ -ನಾರ್ತ್‌ ವಾರ್ಡ್‌ನ ವಡಾಲಾ, ಎಲ್‌ ವಾರ್ಡ್‌ನಲ್ಲಿರುವ ಕುರ್ಲಾ ಮತ್ತು ಎಚ್‌ ಈಸ್ಟ್‌ ವಾರ್ಡ್‌ನ ಬಾಂದ್ರಾದಲ್ಲೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಉತ್ತರ ಉಪನಗರಗಳಲ್ಲಿ ಕಳೆದ ತಿಂಗಳು ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಜನರು ಮುಖಗವಸು ಬಳಸದಿರುವುದು ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸೋಂಕಿತರು ಲಕ್ಷಣರಹಿತರಾಗಿದ್ದು, ಹರಡು ವಿಕೆಯನ್ನು ಪತ್ತೆಹಚ್ಚಲು ಅಥವಾ ನಿಲ್ಲಿಸಲು ಕಷ್ಟವಾಗುತ್ತದೆ ಎಂದು ಹಿರಿಯ ವಾರ್ಡ್‌ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಅಂತರ ಮತ್ತು ಮುಖಗವಸುಗಳ ಮಹತ್ವದ ಬಗ್ಗೆ ತಮ್ಮ ಸದಸ್ಯರಿಗೆ ತಿಳಿಸಲು ವಸತಿ ಕಟ್ಟಡಗಳನ್ನು ಸಂಪರ್ಕಿಸಲು ಬಿಎಂಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಕಾಂದಿವಲಿ, ಬೊರಿವಲಿ, ದಹಿಸರ್‌ ಪರಿಸರದಲ್ಲಿ ಪ್ರಕರಣಗಳು ಇದೇ ರೀತಿಯಲ್ಲಿ ಏರುತ್ತಲೇಹೋದರೆ ಬಿಎಂಸಿ ಸಂಪೂರ್ಣ ಕಟ್ಟಡಗಳನ್ನುಮೊದಲಿನಂತೆ ಮೊಹರು ಮಾಡುತ್ತದೆ. ಈ ಪ್ರದೇಶಗಳು ಬಿಎಂಸಿಯ ವಲಯ 7ರ ವ್ಯಾಪ್ತಿಗೆ ಬರುತ್ತವೆ. ವಲಯದ ಉಪ ಪುರಸಭೆ ಆಯುಕ್ತ ವಿಶ್ವಾಸ್‌ ಶಂಕರ್‌ವಾರ್‌, ಒಂದೇ ಆವರಣದಿಂದ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದರೆ ಕಟ್ಟಡಗಳಿಗೆಮೊಹರು ಹಾಕುವಂತಹ ಕಠಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದರು.

ಪರೀಕ್ಷಿಸುವ ಮತ್ತು ಚಿಕಿತ್ಸೆ ನೀಡುವ ನೀತಿಯನ್ನು ಇಲ್ಲಿ ಆಕ್ರಮಣಕಾರಿಯಾಗಿ ಅನುಸರಿಸಲಾಗುತ್ತದೆ. ನನ್ನ ಕುಟುಂಬ, ನನ್ನ ಜವಾಬ್ದಾರಿ ಎಂಬ ಹೊಸ ನಾಗರಿಕ ಅಭಿಯಾನವನ್ನು ಜಾರಿಗೆ ತರುವ ಬಿಎಂಸಿ ಜನದಟ್ಟಣೆ ಇರುವ ಸ್ಥಳಗಳಲ್ಲಿ ಮುಖಗವಸು ಧರಿಸದವರಿಗೆ ದಂಡ ವಿಧಿಸಲು ಪ್ರಾರಂಭಿಸಿದೆ. ಎರಡನೇ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪಿ ನಾರ್ತ್‌ನ ಮಲಾಡ್‌ ವಾರ್ಡ್ ನ ಸಹಾಯಕ ಮುನ್ಸಿಪಲ್‌ ಕಮಿಷನರ್‌ ಸಂಜೋಗ್‌ ಕಬ್ರೆ ಮಾತನಾಡಿ, ವಾರ್ಡ್‌ ಕಚೇರಿ ಆರಂಭಿಕ ಪತ್ತೆಹಚ್ಚುವಿಕೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ ಎಂದಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ವಿಫಲವಾದರೆ ಮೀನು ಮಾರುಕಟ್ಟೆಗಳನ್ನು ಮುಚ್ಚುವುದಾಗಿ ವಾರ್ಡ್‌ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.