10 ಸಾವಿರ ಪ್ರಕರಣ ಪಟ್ಟಿಗೆ ಅಂಧೇರಿ, ಮಲಾಡ್‌ ಸೇರ್ಪಡೆ


Team Udayavani, Sep 18, 2020, 8:15 PM IST

mumbai-tdy-1

ಸಾಂದರ್ಭಿಕ ಚಿತ್ರ

ಮುಂಬಯಿ, ಸೆ. 17: ನಗರದ ವಿಲೇಪಾರ್ಲೆಯಿಂದ ಬೊರಿವಲಿವರೆಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬೊರಿವಲಿಯೊಂದಿಗೆ ಪ್ರಸ್ತುತ ಮಲಾಡ್‌ ಮತ್ತು ಅಂಧೇರಿ ಕೂಡಾ ಹತ್ತು ಸಾವಿರ ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ಗುಂಪಿಗೆ ಸೇರಿದ್ದು, ಸಾರ್ವಜನಿಕ ಆರೋಗ್ಯ ಅಧಿಕಾರಿಗಳಿಗೆ ದೊಡ್ಡ ಚಿಂತೆಯಾಗಿ ಪರಿಣಮಿಸಿದೆ.

ಸೋಂಕು ಹರಡುತ್ತಿರುವ ಆರ್‌ ಸೆಂಟ್ರಲ್‌ ವಾರ್ಡ್‌ನ ಬೊರಿವಲಿಯಲ್ಲಿ ಈಗಾಗಲೇ ಹತ್ತು ಸಾವಿರ ಪ್ರಕರಣಗಳ ಗಡಿದಾಟಿದ್ದು, ಪಿ ನಾರ್ಥ್ ವಾರ್ಡ್‌ನ ಮಲಾಡ್‌ ಕೂಡಾ 10,079 ಪ್ರಕರಣಗಳನ್ನು ಹೊಂದಿದೆ. ಕೆ-ಈಸ್ಟ್‌ ವಾರ್ಡ್‌ನಲ್ಲಿರುವ ಜೋಗೇಶ್ವರಿ, ಅಂಧೇರಿ, ವಿಲೇಪಾರ್ಲೆ ಪೂರ್ವ ಭಾಗದಲ್ಲೂ 10,027 ಪ್ರಕರಣಗಳಿವೆ. ಮೇ-ಜೂನ್‌ ಅವಧಿಯಲ್ಲಿ ಕೋವಿಡ್‌ ಉತ್ತುಂಗದಲ್ಲಿದ್ದಾಗ ಈ ವಾರ್ಡ್ ಗಳು ದಕ್ಷಿಣ ಮಧ್ಯ ಮುಂಬಯಿಯ ಹಾಟ್‌ ಸ್ಪಾಟ್‌ಗಳಿಗಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ್ದವು. ಅಂಧೇರಿ ಪಶ್ಚಿಮ, ಭಾಂಡೂಪ್‌,ಮುಲುಂಡ್‌, ದಹಿಸಾರ್‌ ಮತ್ತು ಘಾಟ್ಕೊàಪರ್‌ ಒಳಗೊಂಡ ವಾರ್ಡ್‌ಗಳು ಆತಂಕದ ಇತರ ತಾಣಗಳಾಗಿವೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಹಾಟ್‌ಸ್ಪಾಟ್‌ಗಳಾದ ಐ ಸೌತ್‌ ವಾರ್ಡ್‌ನ ವರ್ಲಿ, ಎಂ-ಈಸ್ಟ್‌ ವಾರ್ಡ್‌ದ ಗೋವಾಂಡಿ, ಎಫ್‌ -ನಾರ್ತ್‌ ವಾರ್ಡ್‌ನ ವಡಾಲಾ, ಎಲ್‌ ವಾರ್ಡ್‌ನಲ್ಲಿರುವ ಕುರ್ಲಾ ಮತ್ತು ಎಚ್‌ ಈಸ್ಟ್‌ ವಾರ್ಡ್‌ನ ಬಾಂದ್ರಾದಲ್ಲೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಉತ್ತರ ಉಪನಗರಗಳಲ್ಲಿ ಕಳೆದ ತಿಂಗಳು ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಜನರು ಮುಖಗವಸು ಬಳಸದಿರುವುದು ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸೋಂಕಿತರು ಲಕ್ಷಣರಹಿತರಾಗಿದ್ದು, ಹರಡು ವಿಕೆಯನ್ನು ಪತ್ತೆಹಚ್ಚಲು ಅಥವಾ ನಿಲ್ಲಿಸಲು ಕಷ್ಟವಾಗುತ್ತದೆ ಎಂದು ಹಿರಿಯ ವಾರ್ಡ್‌ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಅಂತರ ಮತ್ತು ಮುಖಗವಸುಗಳ ಮಹತ್ವದ ಬಗ್ಗೆ ತಮ್ಮ ಸದಸ್ಯರಿಗೆ ತಿಳಿಸಲು ವಸತಿ ಕಟ್ಟಡಗಳನ್ನು ಸಂಪರ್ಕಿಸಲು ಬಿಎಂಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಕಾಂದಿವಲಿ, ಬೊರಿವಲಿ, ದಹಿಸರ್‌ ಪರಿಸರದಲ್ಲಿ ಪ್ರಕರಣಗಳು ಇದೇ ರೀತಿಯಲ್ಲಿ ಏರುತ್ತಲೇಹೋದರೆ ಬಿಎಂಸಿ ಸಂಪೂರ್ಣ ಕಟ್ಟಡಗಳನ್ನುಮೊದಲಿನಂತೆ ಮೊಹರು ಮಾಡುತ್ತದೆ. ಈ ಪ್ರದೇಶಗಳು ಬಿಎಂಸಿಯ ವಲಯ 7ರ ವ್ಯಾಪ್ತಿಗೆ ಬರುತ್ತವೆ. ವಲಯದ ಉಪ ಪುರಸಭೆ ಆಯುಕ್ತ ವಿಶ್ವಾಸ್‌ ಶಂಕರ್‌ವಾರ್‌, ಒಂದೇ ಆವರಣದಿಂದ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದರೆ ಕಟ್ಟಡಗಳಿಗೆಮೊಹರು ಹಾಕುವಂತಹ ಕಠಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದರು.

ಪರೀಕ್ಷಿಸುವ ಮತ್ತು ಚಿಕಿತ್ಸೆ ನೀಡುವ ನೀತಿಯನ್ನು ಇಲ್ಲಿ ಆಕ್ರಮಣಕಾರಿಯಾಗಿ ಅನುಸರಿಸಲಾಗುತ್ತದೆ. ನನ್ನ ಕುಟುಂಬ, ನನ್ನ ಜವಾಬ್ದಾರಿ ಎಂಬ ಹೊಸ ನಾಗರಿಕ ಅಭಿಯಾನವನ್ನು ಜಾರಿಗೆ ತರುವ ಬಿಎಂಸಿ ಜನದಟ್ಟಣೆ ಇರುವ ಸ್ಥಳಗಳಲ್ಲಿ ಮುಖಗವಸು ಧರಿಸದವರಿಗೆ ದಂಡ ವಿಧಿಸಲು ಪ್ರಾರಂಭಿಸಿದೆ. ಎರಡನೇ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪಿ ನಾರ್ತ್‌ನ ಮಲಾಡ್‌ ವಾರ್ಡ್ ನ ಸಹಾಯಕ ಮುನ್ಸಿಪಲ್‌ ಕಮಿಷನರ್‌ ಸಂಜೋಗ್‌ ಕಬ್ರೆ ಮಾತನಾಡಿ, ವಾರ್ಡ್‌ ಕಚೇರಿ ಆರಂಭಿಕ ಪತ್ತೆಹಚ್ಚುವಿಕೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ ಎಂದಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ವಿಫಲವಾದರೆ ಮೀನು ಮಾರುಕಟ್ಟೆಗಳನ್ನು ಮುಚ್ಚುವುದಾಗಿ ವಾರ್ಡ್‌ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.