ರಾಜ್ಯದ 27 ಜೈಲುಗಳಲಿ 1,478 ಮಂದಿಗೆ ಸೋಂಕು
Team Udayavani, Aug 26, 2020, 7:32 PM IST
ಪುಣೆ, ಆ. 25: ರಾಜ್ಯದ ಪ್ರಮುಖ 27 ಜೈಲುಗಳಲ್ಲಿ ಒಟ್ಟು 1,478 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, ಈ ಪೈಕಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಜೈಲು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈವರೆಗೆ ಒಟ್ಟು 1,166 ಕೈದಿಗಳು ಮತ್ತು 312 ಜೈಲು ಸಿಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ ಆರು ಮಂದಿ ಕೈದಿಗಳು ಸಾವನ್ನಪ್ಪಿದ್ದಾರೆ. ಕೈದಿಗಳಿಗೆ ಸಂಬಂಧಿಸಿದಂತೆ 219 ಸೋಂಕಿನ ಪ್ರಕರಣಗಳಲ್ಲಿ ನಾಗಪುರ ಜೈಲು ಹೆಚ್ಚು ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಅದರ ಬಳಿಕ ಪುಣೆಯ ಯೆರವಾಡಾ ಜೈಲಿನಲ್ಲಿ ಒಟ್ಟು 190 ಕೈದಿಗಳು ಸೋಂಕಿಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಯಲು ಒಟ್ಟು 10,536 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಸ್ತುತ ಒಟ್ಟು 26,408 ಕೈದಿಗಳನ್ನು ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲಾಗಿದೆ.
ಎಲ್ಲಿ ಎಷ್ಟು ಪ್ರಕರಣ : ಮುಂಬಯಿಯ ಆರ್ಥರ್ ರೋಡ್ ಜೈಲಿ ನಲ್ಲಿ 182 ಮತ್ತು ಸಾಂಗ್ಲಿ ಜೈಲಿನಲ್ಲಿ 145 ಪ್ರಕರಣ ಪತ್ತೆಯಾಗಿವೆ. ಈವರೆಗೆ ನಾಗಪುರದಲ್ಲಿ 62, ಮುಂಬಯಿಯಲ್ಲಿ 46, ಥಾಣೆಯಲ್ಲಿ 35, ಔರಂ ಗಾಬಾದ್ನಲ್ಲಿ 34, ಕಲ್ಯಾಣ್ನಲ್ಲಿ 31 ಮತ್ತು ಯೆರಾವಾಡ ಜೈಲಿನಲ್ಲಿ 26 ಜೈಲು ಸಿಬಂದಿ ಸೋಂಕಿಗೆ ಒಳಗಾಗಿದ್ದಾರೆ. ಒಟ್ಟು 1,166 ಕೈದಿಗಳಲ್ಲಿ 848 ಕೈದಿಗಳು ಮತ್ತು 312 ಜೈಲು ಸಿಬಂದಿಗಳಲ್ಲಿ 272 ಸಿಬಂದಿಯನ್ನು ಗುಣಪಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ