ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ


Team Udayavani, Jul 20, 2021, 10:02 AM IST

ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ

ಥಾಣೆ: ಮನಪಾ ಪ್ರದೇಶದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಎರಡು ದಿನಗಳಲ್ಲಿ ಮತ್ತೆ ಒಂದು ಸಾವಿರಕ್ಕೆ ಇಳಿದಿದ್ದು, ಈ ಮಧ್ಯೆ ನಗರದಲ್ಲಿ ದಿನಂಪ್ರತಿ ನೂರು ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ರೋಗಿಗಳ ಚೇತರಿಕೆ ಪ್ರಮಾಣವು ಶೇ. 97.82ಕ್ಕೆ ತಲುಪಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೇಳಿದ್ದಾರೆ.

ಜೂನ್‌ ಕೊನೆಯಲ್ಲಿ ಥಾಣೆ ಮನಪಾ ಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕಲ್ವಾ ಪ್ರದೇಶದಲ್ಲಿ ಸುಮಾರು 15 ರೋಗಿಗಳು ಪತ್ತೆಯಾಗಿದ್ದಾರೆ. ಜೂ. 21ರಂದು ಈ ಪ್ರದೇಶದಲ್ಲಿ 37 ರೋಗಿಗಳು ಕಂಡುಬಂದಿದ್ದರೆ, ನಗರದ ಉಳಿದ ಭಾಗಗಳಲ್ಲಿ 20ಕ್ಕಿಂತ ಕಡಿಮೆ ರೋಗಿ ಗಳಿದ್ದಾರೆ. ಕಲ್ವಾದ ಕೆಲವು ಭಾಗಗಳಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾ ಗುತ್ತಿರುವುದರಿಂದ ಮನಪಾಹೆಚ್ಚಿನ ಎಚ್ಚರಿಕೆಯನ್ನು ಹೊಂದಿತ್ತು. ಇದರ ಬಳಿಕ ಕಲ್ವಾ ಪ್ರದೇಶದಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಮನಪಾ ಆಡಳಿತ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಎರಡು ಮೂರು ದಿನಗಳಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಯಿತು.

ಜುಲೈ ಮೊದಲ ವಾರದಲ್ಲಿ ನಗರದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಒಂದು ಸಾವಿರದೊಳಗೆ ಇತ್ತು. ಜು. 7ರ ಬಳಿಕ ನಗರದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿ ಒಂದು ಸಾವಿರವನ್ನು ಮೀರಿತು. ಈ ಅಂಕಿಅಂಶ ವನ್ನು ಸತತವಾಗಿ ಮೂರು ದಿನಗಳವರೆಗೆ ನಿರ್ವಹಿಸಲಾಗಿದೆ. ರೋಗಿಗಳ ಸಂಖ್ಯೆ ಯಲ್ಲಿ  ಹಠಾತ್‌ ಹೆಚ್ಚಳದಿಂದಾಗಿ ಆಡಳಿತ ವನ್ನು ಎಚ್ಚರಿಸಲಾಯಿತು. ಹೆಚ್ಚುತ್ತಿರುವ ಕೊರೊನಾ ಪ್ರಮಾಣ ತಡೆಯಲು ಆಡಳಿತವು ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತ್ತು. ಆದರೆ ಮೂರು ದಿನಗಳ  ಬಳಿಕ ರೋಗಿಗಳ ಸಂಖ್ಯೆ ಮತ್ತೆ ಕಡಿಮೆಯಾಗಲು ಪ್ರಾರಂಭಿಸಿದೆ. ಈಗ ನಗರದಲ್ಲಿ ಸುಮಾರು 900 ಸಕ್ರಿಯ ರೋಗಿಗಳಿದ್ದರೆ, ನಗರದಲ್ಲಿ ಪ್ರತೀದಿನ ಸುಮಾರು 90ರಿಂದ 96 ರೋಗಿಗಳು ಕಂಡುಬರುತ್ತಿದ್ದಾರೆ. ದಿನಕ್ಕೆ ಒಂದರಿಂದ ಎರಡು ಸಾವುಗಳು ವರದಿಯಾಗುತ್ತಿವೆ. ಇದರ ಪರಿಣಾಮವಾಗಿ ನಗರದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮನಪಾ  ಮೂಲಗಳು ತಿಳಿಸಿವೆ.

357 ಹೊಸ ಪ್ರಕರಣ :

ಥಾಣೆ ಜಿಲ್ಲೆಯಲ್ಲಿ ಕೋವಿಡ್ ಹೊಸದಾಗಿ 357 ಪ್ರಕರಣ ಸೇರ್ಪಡೆ ಯೊಂದಿಗೆ ಒಟ್ಟು ಸೋಂಕಿನ ಸಂಖ್ಯೆ 5,40,677ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೊರೊನಾದಿಂದ 8 ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10,912ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ. ಥಾಣೆಯಲ್ಲಿ ಕೋವಿಡ್‌-19 ಮರಣ ಪ್ರಮಾಣವು ಶೇ. 2.01ರಷ್ಟಿದೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.