ದೀಪಾವಳಿ ಬಳಿಕ 9 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಹೆಚ್ಚಳ


Team Udayavani, Dec 16, 2020, 7:39 PM IST

ದೀಪಾವಳಿ ಬಳಿಕ 9 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಹೆಚ್ಚಳ

ಮುಂಬಯಿ, ಡಿ. 15: ರಾಜ್ಯದ ಒಟ್ಟಾರೆ ಸಕ್ರಿಯ ಸೋಂಕುಗಳ ಸಂಖ್ಯೆ ಕಡಿಮೆ ಯಾಗಿದ್ದರೂ ಒಂಬತ್ತು ಜಿಲ್ಲೆಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇತ್ತೀಚಿನ ಈ ಪ್ರವೃತ್ತಿಯಿಂದ ರಾಜ್ಯದಲ್ಲಿ ವೈರಸ್‌ನ ಅಪಾಯಗಳು ಇನ್ನೂ ತಗ್ಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಸೋಮವಾರ ಮಹಾರಾಷ್ಟ್ರವು 2,949 ಹೊಸ ಪ್ರಕರಣಗಳೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 18.83 ಲಕ್ಷಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳಲ್ಲಿ 477 ಮುಂಬಯಿಯಿಂದವರದಿಯಾಗಿವೆ. ಮತ್ತೆ 60 ಸಾವುಗಳೊಂದಿಗೆ ರಾಜ್ಯದ ಸಾವಿನ ಸಂಖ್ಯೆ 48,269 ಕ್ಕೆ ಏರಿದೆ. ಸೋಮವಾರ ಮುಂಬಯಿಯಲ್ಲಿ ಕೋವಿಡ್ ದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ದೀಪಾವಳಿಯ ಬಳಿಕ ರತ್ನಗಿರಿ, ಸಿಂಧುದುರ್ಗ, ವಾಶಿಮ್‌, ಪುಣೆ, ಕೊಲ್ಲಾಪುರ, ನಾಸಿಕ್‌, ನಂದುರ್ಬಾರ್‌, ಅಕೋಲಾ ಮತ್ತು ನಾಗಪುರಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ.

ಶೇಕಡಾವಾರು ಪ್ರಕಾರ, ವಾಶಿಮ್‌, ಸಿಂಧುದುರ್ಗ, ಕೊಲ್ಲಾಪುರ, ಅಕೋಲಾ ಮತ್ತುನಾಗಪುರಗಳಲ್ಲಿ ಸಕ್ರಿಯ ಸೋಂಕುಗಳಲ್ಲಿ ಶೇ. 40 ಅಥವಾ ಅದಕ್ಕಿಂತ ಹೆಚ್ಚಿನ ಏರಿಕೆ ಕಂಡಿದೆ. ಪರಿಣಾಮ ರಾಜ್ಯ ಅಧಿಕಾರಿಗಳು ಈ ಜಿಲ್ಲೆಗಳನ್ನು ಸೂಕ್ಷ್ಮವಾಗಿ ಗಮನಹರಿಸುತ್ತಿದ್ದಾರೆ.

ಹಬ್ಬಗಳ ಸಮಯದಲ್ಲಿ ಹೆಚ್ಚಿದ ಚಲನವಲನವು ಈ ನಿರ್ದಿಷ್ಟ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಲು ಕಾರಣವಾಗಿರಬಹುದು ಅಥವಾ ಈ ಜಿಲ್ಲೆಗಳಲ್ಲಿ ಕೆಲವು ಕೋವಿಡ್‌ – 19 ಪ್ರಕರಣಗಳನ್ನು ಇತರ ಜಿಲ್ಲೆಗಳಿಗಿಂತ ಬಹಳ ಹಿಂದೆಯೇ ದಾಖಲಿಸಲು ಪ್ರಾರಂಭಿಸಿರುವುದು ಇದಕ್ಕೆ ಕಾರಣ ವಾಗಿರಬಹುದು ಎಂದು ಅಧಿಕಾರಿಗಳುಅಭಿಪ್ರಾಯಪಟ್ಟಿದ್ದಾರೆ. ಮುಂಬಯಿಯಲ್ಲಿ ಒಂದು ತಿಂಗಳಿನಿಂದ ಕೋವಿಡ್‌ -19ಪ್ರಕರಣಗಳಲ್ಲಿ ಏರಿಳಿತಗಳನ್ನು ಕಾಣುತ್ತಿದೆ.

ಡಿಸೆಂಬರ್‌ ಅಥವಾ ಜನವರಿಯೊಳಗೆ ಕೋವಿಡ್ ವೈರಸ್‌ನ ಎರಡನೇ ಅಲೆಯ ಸಾಧ್ಯತೆಯಿದ್ದು, ಸಕ್ರಿಯ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳನ್ನು ನಿರ್ವಹಿಸಲು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ರಷ್ಟು ಹಾಸಿಗೆ ಕಾಯ್ದಿರಿಸುವಿಕೆಯನ್ನು ಮುಂದು ವರಿಸಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಒತ್ತಾಯಿಸಿದೆ.

ಸಕ್ರಿಯ ಪ್ರಕರಣಗಳಲ್ಲಿ ಕುಸಿತ :  ಸಕ್ರಿಯ ಪ್ರಕರಣಗಳಲ್ಲಿ ಏರಿಕೆಗೆ ಸಾಕ್ಷಿಯಾದ ಒಂಬತ್ತು ಜಿಲ್ಲೆಗಳಿಗೆ ವ್ಯತಿರಿಕ್ತವಾಗಿ ಸಾಂಗ್ಲಿ,ಅಹ್ಮದ್‌ನಗರ, ಧುಳೆ, ಔರಂಗಾಬಾದ್‌, ಪರ್ಭಾಣಿ, ಹಿಂಗೋಲಿ, ನಾಂದೇಡ್‌,ಗೊಂಡಿಯಾ ಮತ್ತು ಚಂದ್ರಾಪುರಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಆದರೆ ಚಂದ್ರಾಪುರ, ಪರ್ಭಾಣಿ, ಹಿಂಗೋಲಿ ಮತ್ತು ಗೊಂಡಿಯಾದಲ್ಲಿ ಕಡಿಮೆ ಜನರು ಈವರೆಗೆ ವೈರಸ್‌ಗೆ ತುತ್ತಾಗಿರುವುದರಿಂದ ಈ ಜಿಲ್ಲೆಗಳು ಅಪಾಯದಲ್ಲಿವೆ ಎಂದು ರಾಜ್ಯ ಸರಕಾರದ ಕೋವಿಡ್‌-19 ತಾಂತ್ರಿಕ ಸಲಹೆಗಾರ ಡಾ| ಸುಭಾಷ್‌ ಸಾಳುಂಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.