ಧಾರಾವಿಯಲ್ಲಿ  ಹೆಚ್ಚುತ್ತಿರುವ ಕೋವಿಡ್: ಮನಪಾ ಎಚ್ಚರಿಕೆ ಕ್ರಮ


Team Udayavani, Mar 2, 2021, 4:47 PM IST

ಧಾರಾವಿಯಲ್ಲಿ  ಹೆಚ್ಚುತ್ತಿರುವ ಕೋವಿಡ್: ಮನಪಾ ಎಚ್ಚರಿಕೆ ಕ್ರಮ

ಮುಂಬಯಿ: ಧಾರಾವಿಯಲ್ಲಿ ಕೋವಿಡ್ ಸೋಂಕು ನಿಧಾನವಾಗಿ ಹೆಚ್ಚುತ್ತಿದ್ದು, ಎಚ್ಚರಗೊಂಡ ಮುಂಬಯಿ ಮುನ್ಸಿಪಲ್‌ ಕಾರ್ಪೊರೇಶನ್‌ ಮತ್ತೂಮ್ಮೆ ಮನೆಗಳಿಗೆ ಭೇಟಿ ನೀಡಿ ತಪಾಸಣೆ ಪ್ರಾರಂಭಿಸಿದೆ.

ಜನದಟ್ಟಣೆ ಇರುವ ಸ್ಥಳಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ನಾಗರಿಕರನ್ನು  ಪರೀಕ್ಷಿಸಲಾಗುತ್ತಿದೆ. ಕೊರೊನಾ ಪ್ರಕರಣ ಹೆಚ್ಚಳದಿಂದ ಸಾಂಸ್ಥಿಕ ಪ್ರತ್ಯೇಕ ಕೇಂದ್ರದಲ್ಲಿ  ಶಂಕಿತ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.

ಏಷ್ಯಾದ ಅತೀದೊಡ್ಡ ಕೊಳೆಗೇರಿ ಧಾರಾವಿಯಲ್ಲಿ ಕೊರೊನಾದ ಮೊದಲ ರೋಗಿಯನ್ನು  2020ರ ಎ. 1ರಂದು ಪತ್ತೆ ಮಾಡಲಾಯಿತು. ರೋಗಿಯ ಅದೇ ದಿನ ರಾತ್ರಿ ನಿಧನ ಹೊಂದಿದ್ದರು. ಅನಂತರ  ಪುರಸಭೆಯ ಜಿ-ನಾರ್ತ್‌ ವಿಭಾಗ ವಾರ್ಡ್‌ ಸಿಬಂದಿ ಮತ್ತು ಖಾಸಗಿ ವೈದ್ಯರ ತಂಡಗಳ ಮೂಲಕ ಸೋಂಕನ್ನು ನಿಯಂತ್ರಣಕ್ಕೆ ತರಲಾಯಿತು. ಈಗ ಮತ್ತೂಮ್ಮೆ  ರೋಗಿಗಳ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದೆ.

ಒಂದು ವಾರದ ಹಿಂದೆ ಧಾರಾವಿಯಲ್ಲಿ ಪ್ರತೀದಿನ 5ರಿಂದ 7 ಹೊಸ ಸೋಂಕಿತ ರೋಗಿಗಳು ಕಂಡುಬಂದಿದ್ದಾರೆ. ಕಳೆದ ವಾರದಲ್ಲಿ ರೋಗಿಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ಫೆ. 26ರಂದು ಕೊರೊನಾದಿಂದ 16 ಜನರು ಬಾಧಿತರಾಗಿದ್ದಾರೆ.

ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪುರಸಭೆಯು ಜಾಗರೂಕವಾಗಿದೆ. ಜನದಟ್ಟಣೆ ಇರುವ ಸ್ಥಳಗಳು ಮತ್ತು ಪೂಜಾ ಸ್ಥಳಗಳಿಗೆ ಹೋಗುವ ಜನರ ಮೇಲೆ ನಿಗಾ ಇಡಲಾಗುತ್ತಿದೆ. ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ಪರೀಕ್ಷಿಸಲಾಗುತ್ತಿದೆ. ಮತ್ತೂಮ್ಮೆ ಧಾರಾವಿಯ ಪ್ರತೀ ಮನೆಯ ನಿವಾಸಿಗಳ ಆರೋಗ್ಯ ತಪಾಸಣೆ ಪ್ರಾರಂಭವಾಗಿದೆ.

ಕೆಲವು ದಿನಗಳ ಹಿಂದೆ ದಾದರ್‌ನ ವನಿತಾ ಸಮಾಜ ಸಂಸ್ಥೆಯ ಪ್ರತ್ಯೇಕ ಕೇಂದ್ರದಲ್ಲಿ ಮೂರರಿಂದ ನಾಲ್ಕು ರೋಗಿಗಳು ಮಾತ್ರ ಇದ್ದರು. ಆದರೆ ಈಗ ಈ ಸಂಖ್ಯೆ 70ಕ್ಕೆ ತಲುಪಿದೆ. ಸೋಂಕಿತ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ ಹೆಚ್ಚಿನ ಅಪಾಯದ ಗುಂಪಿನಲ್ಲಿರುವ ಶಂಕಿತ ರೋಗಿ

ಗಳನ್ನು ಪ್ರತ್ಯೇಕವಾಗಿರಿಸಲಾಗುತ್ತಿದೆ. ಸೋಂಕಿತ, ಶಂಕಿತ ರೋಗಿಗಳನ್ನು ಪರೀಕ್ಷೆಯ ಮೂಲಕ ಪ್ರತ್ಯೇಕಿಸಲಾಗುತ್ತಿದೆ. ಇದರಿಂದ ಸೋಂಕನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ.

ಮುಂಬಯಿ ಮಹಾನಗರ ಪಾಲಿಕೆಯು ರೋಗಲಕ್ಷಣ ಹೊಂದಿರುವವರಿಗೆ ಹೆಚ್ಚಿನ ಸಂಖ್ಯೆಯ ತಪಾಸಣೆ ಮತ್ತು ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಮುಂಬಯಿಯಲ್ಲಿ ರೋಗಿಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ.

 ಮಾಸ್ಕ್  ನಿಯಮ ಉಲ್ಲಂಘನೆ: 34.62 ಕೋ. ರೂ. ದಂಡ :

ಬಿಎಂಸಿಯು ಮಾಸ್ಕ್ ಸರಿಯಾಗಿ ಧರಿಸದ ಮತ್ತು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದು, ಈ ವರೆಗೆ 17,13,385 ಮಂದಿಗೆ ದಂಡ ವಿಧಿಸಿದ್ದು, ಅವರಿಂದ 34,62,84,600 ರೂ.ಗಳನ್ನು  ವಸೂಲು ಮಾಡಿದೆೆ. ಮಹಾನಗರ ಪಾಲಿಕೆ, ಪೊಲೀಸ್‌ ಮತ್ತು ರೈಲ್ವೇ ಪೊಲೀಸರು ಶುಕ್ರವಾರ 19,849 ಜನರ ವಿರುದ್ಧ ಕ್ರಮ ಕೈಗೊಂಡಿದ್ದು, 39,69,800 ರೂ. ದಂಡ ವಸೂಲಿ ಮಾಡಿದೆ. ರೈಲ್ವೇಯ ಮೂರು ಮಾರ್ಗಗಳಲ್ಲಿ ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿದ್ದ ಒಟ್ಟು 2,263 ಪ್ರಯಾಣಿಕರಿಗೆ 4,52,600 ರೂ.ಗಳ ದಂಡ ವಿಧಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.