ಸಾಂಸ್ಕೃತಿಕ ನಗರಿಯಲ್ಲಿ ಹೊಟೇಲ್‌ ಉದ್ಯಮಕ್ಕೆ ಕೋವಿಡ್ ಪೆಟ್ಟು

ಹೊಟೇಲಿಗರ ಆಶಾಕಿರಣ ಪುಣೆ ರೆಸ್ಟೋರೆಂಟ್‌ ಆ್ಯಂಡ್‌ ಹೊಟೇಲಿಯರ್ ಅಸೋಸಿಯೇಶನ್‌

Team Udayavani, Oct 12, 2020, 6:28 PM IST

mumbai-tdy-1

ಸಾಂದರ್ಭಿಕ ಚಿತ್ರ

ಮುಂಬಯಿ, ಅ. 11:  ಕೋವಿಡ್ ಲಾಕ್‌ಡೌನ್‌ನಿಂದಾಗಿ ಎಲ್ಲ ಉದ್ಯಮಗಳು ನಷ್ಟ ಅನುಭವಿಸಿದ್ದು, ಅದರಲ್ಲೂ ಸಾಂಸ್ಕೃತಿಕ ನಗರಿ ಪುಣೆಯ ಹೊಟೇಲ್‌ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಪುಣೆಯಲ್ಲಿ ಸುಮಾರು ಎರಡೂವರೆ ಸಾವಿರಕ್ಕಿಂತಲೂ ಹೆಚ್ಚು ತುಳು-ಕನ್ನಡಿಗರ ಹೊಟೇಲ್‌ಗ‌ಳಿದ್ದು. ಹೊಟೇಲ್‌ ನಡೆಸುವವರ ಪಾಡು ಅಧೋಗತಿಗಿಳಿದಿದೆ. ಹೊಟೇಲ್‌ ನಡೆಸುವವರು ಹಾಕಿದ ಬಂಡವಾಳ ಕಳೆದುಕೊಂಡಿರುವುದಲ್ಲದೆ, ಲಾಕ್‌ಡೌನ್‌ ಸಮಯದಲ್ಲೂ ಮಾಲಕರು ಬಾಡಿಗೆಗಾಗಿ ಪಟ್ಟು ಹಿಡಿದಿದ್ದರಿಂದ ಹೊಟೇಲ್‌ಗ‌ಳ ಠೇವಣಿ ಕಳೆದುಕೊಂಡು ಉದ್ಯಮಕ್ಕೆ ತಿಲಾಂಜಲಿ ಇಟ್ಟಿದ್ದಾರೆ.

3 ಸಾವಿರ ಕೋಟಿ ರೂ. ನಷ್ಟ :

ಕಳೆದ ಆರೇಳು ತಿಂಗಳುಗಳಿಂದ ಸುಮಾರು ಮೂರು ಸಾವಿರ ಕೋ. ರೂ. ಗಳಷ್ಟು ವ್ಯವಹಾರ ನಷ್ಟಗೊಂಡಿರುವುದಲ್ಲದೆ, ಎರಡೂವರೆ ಲಕ್ಷ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಹೊಟೇಲ್‌ ವ್ಯವ ಹಾರಕ್ಕೆ ಸಂಬಂಧಪಟ್ಟ  ಸುಮಾರು 25ಕ್ಕೂ ಹೆಚ್ಚು ಇತರ ರೀತಿಯ ವ್ಯಾಪಾರಿಗಳೂ ನಷ್ಟ ಅನುಭವಿಸಿದ್ದಾರೆ. ಹೊಟೇಲ್‌  ಬಂದ್‌ ಇದ್ದರೂ  ಸರಕಾರ ಅಬಕಾರಿ ಶುಲ್ಕ ಭರಿಸಲು ಹೇಳುತ್ತಿರುವುದರಿಂದ ಹೊಟೇಲಿಗರು ಕಂಗಾಲಾಗಿದ್ದಾರೆ. ಸರ್ವಸ್ವ  ಕಳಕೊಂಡ ಹಲವು ಮಂದಿ ತುಳು, ಕನ್ನಡಿಗರು ಸಾಲದ ಸುಳಿಯಲ್ಲಿ ಸಿಕ್ಕಿ  ಕಷ್ಟ ಅನುಭವಿಸುತ್ತಿದ್ದರೆ, ಇನ್ನೊಂದೆಡೆ ನಗರದ ಇಬ್ಬರು ಪ್ರಸಿದ್ಧ ಹೊಟೇಲ್‌ ಉದ್ಯಮಿಗಳು ಆತ್ಮಹತ್ಯೆಗೆ ಶರಣಾಗಿರುವುದು ಹೊಟೇಲ್‌ ಉದ್ಯಮದ ದುರಂತ ಕತೆಗೆ ಸಾಕ್ಷಿಯಾಗಿದೆ.

ನೆಲ ಕಚ್ಚಿದ ಕ್ಯಾಂಟೀನ್‌ ಉದ್ಯಮ : ರಾಜ್ಯದಲ್ಲಿ ಪುಣೆಯು ಕಂಪೆನಿಗಳು ಮತ್ತು ಕೈಗಾರಿಕೆಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇಲ್ಲಿನ ಹೆಚ್ಚಿನ ಕಂಪೆನಿಗಳ ಕ್ಯಾಂಟೀನ್‌ಗಳು ಕನ್ನಡಿಗರಲ್ಲಿದೆ. ಕಂಪೆನಿಗಳು  ಬಾಗಿಲು ಮುಚ್ಚಿದ್ದರಿಂದ ಕಾಂಟ್ರಾಕ್ಟ್ ದಾರರು ಪರದಾಡುವಂತಾಗಿದೆ. ಐಟಿ ಕಂಪೆನಿಗಳ ಉದ್ಯೋಗಿಗಳು ಮನೆಯಲ್ಲಿ ಕೆಲಸ ಮಾಡುತ್ತಿದ್ದು,  ಡಿಸೆಂಬರ್‌ವರೆಗೂ ತೆರೆಯುವುದು ಅನುಮಾನ. ತೆರೆದರೂ ಮೊದಲಿನಂತೆ ಕ್ಯಾಂಟೀನ್‌ ಉದ್ಯಮ ಸರಿಹೊಂದಲು ಹಲವಾರು ತಿಂಗಳುಗಳೇ ಬೇಕಾಗಬಹುದು. ಶಾಲಾ-ಕಾಲೇಜು, ಹಾಸ್ಟೆಲ್‌ಗ‌ಳು ಈ ವರ್ಷ ತೆರೆಯುವಂತಿಲ್ಲ, ಈ ಎಲ್ಲ ರೀತಿಯ ಉದ್ಯಮದಲ್ಲಿ ತುಳು – ಕನ್ನಡಿಗರು ಒಂದಲ್ಲ ಒಂದು ರೀತಿಯಲ್ಲಿ  ನಷ್ಟವನ್ನು ಅನುಭವಿಸಿದ್ದಾರೆ. ಹೊಟೇಲ್‌ ಕಾರ್ಮಿಕರು  ಲಾಕ್‌ಡೌನ್‌ ಸಮಯದಲ್ಲಿ ಊರಿನ ದಾರಿ ಹಿಡಿದಿದ್ದು, ಕಾರ್ಮಿಕರ ಸಮಸ್ಯೆ ಎದುರಾಗಿದ್ದು, ಪ್ರಸ್ತುತ  ಶೇ. 10 ರಷ್ಟು ಕಾರ್ಮಿಕರು ಮಾತ್ರ ಲಭ್ಯರಿದ್ದಾರೆ.

3 ತಿಂಗಳಿನಿಂದ ಸತತ ಪ್ರಯತ್ನ : ಹೊಟೇಲ್‌ ಉದ್ಯಮವನ್ನು ಮರು ಪ್ರಾರಂಭಿಸುವಂತೆ ಸುಮಾರು ಮೂರು ತಿಂಗಳಿನಿಂದ ಪುಣೆ ರೆಸ್ಟೋರೆಂಟ್‌ ಆ್ಯಂಡ್‌  ಹೊಟೇಲಿಯರ್ ಅಸೋಸಿಯೇಶನ್‌ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಅಧ್ಯಕ್ಷ ಗಣೇಶ್‌ ಶೆಟ್ಟಿ ತಿಳಿಸಿದ್ದಾರೆ.  ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಅಬಕಾರಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧ‌ಪಟ್ಟ ಅಧಿಕಾರಿ ಗಳನ್ನು ಸಂಪರ್ಕಿಸಿ ಸಭೆ ನಡೆಸಿ  ಚರ್ಚಿಸಿ ಒತ್ತಡವನ್ನು ಹಾಕಿದ್ದೇವೆ.

ಇದೀಗ ಶೇ. 50ರಷ್ಟು ಉದ್ಯಮ ಪ್ರಾರಂಭಿಸುವುದಕ್ಕೆ ಅನುಮತಿ  ನೀಡಿರುವ ಸರಕಾರದ ನಡೆಯನ್ನು ಸ್ವಾಗತಿಸುತ್ತೇವೆ. ಸರಕಾರದ ಮಾರ್ಗ ಸೂಚಿಗಳು ಕಠಿನವಾಗಿದ್ದು, ಅದನ್ನು ಪಾಲಿಸುವುದು ಹೊಟೇಲಿಗರ ಕರ್ತವ್ಯ ವಾಗಿದೆ ಎಂದು ಗಣೇಶ್‌ ಶೆಟ್ಟಿ  ಅವರು ತಿಳಿಸಿದ್ದಾರೆ.

ಆರೋಗ್ಯದೆಡೆಗೆ ಎಚ್ಚರ ಅಗತ್ಯ :  ಈ ಹಿಂದೆ ಶೇ.  15ರಷ್ಟು ಹೊಟೇಲ್‌ಗ‌ಳು ಪಾರ್ಸೆಲ್‌ ವ್ಯವಹಾರ ಮಾಡುತ್ತಿದ್ದವು. ಪ್ರಸ್ತುತ ಹೊಟೇಲ್‌ ಪ್ರಾರಂಭ ಮಾಡಿದರೂ ಹೊಟೇಲಿಗರಿಗೆ ಲಾಭವಿಲ್ಲ. ವ್ಯಾಪಾರ ಆಗಬಹುದು ಎಂಬ ಭರವಸೆಯೂ ಇಲ್ಲ. ಕೆಲವು ಕಾರ್ಮಿಕರಿಗೆ ಕೆಲಸ  ಸಿಗಬಹುದು. ಆದರೆ ಹೊಟೇಲ್‌  ಉದ್ಯಮಿಗಳು ತಮ್ಮ ವ್ಯಾಪಾರ ವಹಿವಾಟಿನಲ್ಲಿ ಸರಿಯಾಗಿ ಹೊಂದಿಕೊಳ್ಳಲು ಇನ್ನೆಷ್ಟು ದಿನಗಳು ಹೋಗಬಹುದು  ಎಂದು ಹೇಳುವಂತಿಲ್ಲ. ನಮ್ಮ ಆರೋಗ್ಯದ ಜತೆಗೆ, ಕಾರ್ಮಿಕರ ಆರೋಗ್ಯ ಮತ್ತು  ಗ್ರಾಹಕರ ಅರೋಗ್ಯದೆಡೆಗೆ ಕೂಡ ಎಚ್ಚರ ವಹಿಸಬೇಕಾಗಿದೆ. ಸಮಸ್ಯೆಗಳ  ನಡುವೆ ಹೊಟೇಲ್‌ ಪ್ರಾರಂಭಿಸುವುದನ್ನು ಬಿಟ್ಟರೆ ಬೇರೆ ದಾರಿಯಿಲ್ಲ ಎಂದು ಗಣೇಶ್‌ ಶೆಟ್ಟಿ  ಅಭಿಪ್ರಾಯಪಟ್ಟಿದ್ದಾರೆ.

ಅಸೋಸಿಯೇಶನ್‌ ಹೊಟೇಲಿಗರ ಸಮಸ್ಯೆಗಳಿಗೆ ಸ್ಪಂದಿಸು ತ್ತಿದೆ. ಅದಕ್ಕಾಗಿ ಕಳೆದ ಮೂರು-ನಾಲ್ಕು ತಿಂಗಳುಗಳಿಂದ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದೆ. ಅಬಕಾರಿ ಶುಲ್ಕ, ಪುಣೆ ಮಹಾನಗರ ಪಾಲಿಕೆಯ ವಿವಿಧ ಲೈಸೆನ್ಸ್‌ಗಳ ಶುಲ್ಕ ಮನ್ನಾ ಅಥವಾ ಕಡಿತಗೊಳಿಸುವಂತೆ ಮನವಿ ಮಾಡಿದ್ದೇವೆ. ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ.  ಹೊಟೇಲ್‌ ಉದ್ಯಮ ಮತ್ತೆ ಹಳಿಯೇರಲು ಸ್ವಲ್ಪ ಸಮಯ ಹಿಡಿಯಬಹುದು. ಅಲ್ಲಿಯವರೆಗೆ  ತಾಳ್ಮೆ  ಮುಖ್ಯ. ಸಮಸ್ಯೆಗಳಿದ್ದರೆ   ಅಸೋಸಿಯೇಶನ್‌ ಮುಖಾಂತರ ಪರಿಹರಿಸೋಣ.  -ಗಣೇಶ್‌ ಶೆಟ್ಟಿ  ಅಧ್ಯಕ್ಷರು, ಪುಣೆ ರೆಸ್ಟೋರೆಂಟ್‌ ಆ್ಯಂಡ್‌  ಹೊಟೇಲಿಯರ್  ಅಸೋಸಿಯೇಶನ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.