ಪಾಲ್ಘರ್‌ ಜಿಲ್ಲೆಯ ಉಸ್ಗಾಂವ್‌ನಲ್ಲಿ ಪೀಡಿಯಾಟ್ರಿಕ್‌ ಕೋವಿಡ್‌ ಆಸ್ಪತ್ರೆ


Team Udayavani, May 24, 2021, 1:05 PM IST

covid hospital

ಮುಂಬಯಿ: ಬುಡಕಟ್ಟು ಪ್ರಾಬಲ್ಯದ ಪಾಲ್ಘರ್‌ ಜಿಲ್ಲೆಯ ಉಸ್ಗಾಂವ್‌ನಲ್ಲಿ ತನ್ನ ಮೊದಲ ಪೀಡಿಯಾಟ್ರಿಕ್‌ ಕೋವಿಡ್‌ -19 ಆಸ್ಪತ್ರೆ ಲೋಕಾರ್ಪಣೆಗೊಂಡಿದೆ ಎಂದು ಬುಡಕಟ್ಟು ಪರ ಸಂಘಟನೆ ಶ್ರಮಜೀವಿ ಸಂಘಟನೆಯ ಅಧ್ಯಕ್ಷ ವಿವೇಕ್‌ ಪಂಡಿತ್‌ ಅವರು ಹೇಳಿದ್ದಾರೆ.

ಇದು ವಿರಾರ್‌ ಪೂರ್ವದ ಸಿರ್ಸಾದ್‌ ಫಾಟಾದಿಂದ 4 ಕಿ. ಮೀ. ದೂರದಲ್ಲಿದೆ. ಸಾಂಕ್ರಾಮಿಕ ರೋಗದ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಆದ್ದರಿಂದ ಉಸ್ಗಾಂವ್‌ನಲ್ಲಿರುವ ನಮ್ಮ ಅಸ್ತಿತ್ವದಲ್ಲಿರುವ ಶ್ರಮಜೀವಿ ಆಸ್ಪತ್ರೆಯಲ್ಲಿ ಮಕ್ಕಳ ಹಾಸಿಗೆಗಳಿಗೆ ನಾವು ವ್ಯವಸ್ಥೆ ಮಾಡಿದ್ದೇವೆ. ವಾಡಾ, ಜವಾಹರ್‌, ಭಿವಾಂಡಿ, ವಸಾಯಿ ಮತ್ತು ತಾಲೂಕು ಮೊದಲಾದ ಸ್ಥಳಗಳ ರೋಗಿಗಳು ಇದರ ಸದುಪಯೋಗವನ್ನು ಪಡೆಯಲಿದ್ದಾರೆ.

ಬುಡಕಟ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅವರ ಮೇಲೆ ಕೊರೊನಾ ಮೂರನೇ ಅಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಾಲ್ಘರ್‌ ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆ ಅಥವಾ ಮಕ್ಕಳ ತಜ್ಞರು ಇಲ್ಲ. ಪಾಲ^ರ್‌ನಲ್ಲಿ ಬುಡಕಟ್ಟು ಮಕ್ಕಳು ಸೋಂಕಿಗೆ ಒಳಗಾದರೆ ಎಲ್ಲಿಗೆ ಹೋಗುತ್ತಾರೆ ಎಂಬ ಭಯ ನಮ್ಮಲ್ಲಿದ್ದು, ಇದೀಗ ಬಳಕೆಗೆ ಸಿದ್ಧವಾದ ಈ ಆಸ್ಪತ್ರೆ ಮಕ್ಕಳಲ್ಲಿ ಭವಿಷ್ಯದ ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸಲಿದೆ ಎಂದು ವಿವೇಕ್‌ ಪಂಡಿತ್‌ ಹೇಳಿದ್ದಾರೆ.

ಈ ಆಸ್ಪತ್ರೆಯಲ್ಲಿ ಒಟ್ಟು 137 ಹಾಸಿಗೆಗಳನ್ನು ವ್ಯವಸ್ಥೆ ಮಾಡಬಹುದು. ಈ ಮೊದಲು ನಾವು ವಯಸ್ಕರಿಗೆ 100 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯನ್ನು ನಡೆಸುತ್ತಿದ್ದೆವು. 10 ಆಮ್ಲಜನಕ ಹಾಸಿಗೆಗಳು ಮತ್ತು ಮಕ್ಕಳಿಗೆ ಎರಡು ವೆಂಟಿಲೇಟರ್‌ ಹಾಸಿಗೆಗಳು ಇರಲಿವೆ. ನಮ್ಮ ಆಸ್ಪತ್ರೆಯು ಎಲ್ಲ ಜಾತಿ ಮತ್ತು ಸಮುದಾಯಗಳ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದು, ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿದೆ. ಬುಡಕಟ್ಟು ಜನಾಂಗದವರೂ ಚಿಕಿತ್ಸೆಗಾಗಿ ಇಲ್ಲಿಗೆ ಬರಬಹುದು. ನಮ್ಮಲ್ಲಿ ಹಲ ವಾರು ಅನುಭವಿ ವೈದ್ಯರು ಮತ್ತು ದಾದಿಯರು ಇದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಬಹಳಷ್ಟು ರೋಗಿಗಳನ್ನು ಬ್ಯಾಡ್ಮಿಂಟನ್‌, ಚೆಸ್‌ ಮತ್ತು ಲುಡೋ ಮುಂತಾದ ಆಟಗಳೊಂದಿಗೆ ಆಕ್ರಮಿಸಿಕೊಳ್ಳಲಾಗುತ್ತಿದೆ. ಅವರು ಸಮಯವನ್ನು ಕಳೆಯಲು ಅವರಿಗೆ ಪುಸ್ತಕಗಳನ್ನೂ ನೀಡಲಾಗಿದೆ. ಉತ್ತಮ ಚೇತರಿಕೆಗಾಗಿ ರೋಗಿಗಳಿಗೆ ಆಸ್ಪತ್ರೆಯಲ್ಲಿ ಪ್ರೊಟೀನ್‌ ಭರಿತ ಆಹಾರವನ್ನು ನೀಡಲಾಗುತ್ತದೆ. ಚಿಕಿತ್ಸೆ ಉಚಿತವಾಗಿದ್ದರೂ ದೇಣಿಗೆಗಳಿಗೆ ಅವಕಾಶ ಇದೆ ಎಂದು ಪಂಡಿತ್‌ ಹೇಳಿದ್ದಾರೆ.

ರಾಜ್ಯ ಕ್ಯಾಬಿನೆಟ್‌ ಸಚಿವ ಏಕನಾಥ್‌ ಶಿಂಧೆ ಅವರು ಉಸ್ಗಾಂವ್‌ನ ಅದೇ ಸ್ಥಳದಲ್ಲಿ ಮತ್ತೂಂದು ಆಸ್ಪತ್ರೆಗೆ ಭೂಮಿ ಪೂಜೆ ನಡೆಸಿದ್ದಾರೆ. ಯೋಜಿತ ಆಸ್ಪತ್ರೆ 50 ಕಿ. ಮೀ. ವ್ಯಾಪ್ತಿಯಲ್ಲಿ ಜನರಿಗೆ ಸೇವೆ ಸಲ್ಲಿಸಲಿದೆ. ಸಾಂಕ್ರಾಮಿಕ ರೋಗವು ಮುಗಿದ ಬಳಿಕ ಯೋಗ್ಯ ಶುಲ್ಕದಲ್ಲಿ ಚಿಕಿತ್ಸೆಯೊಂದಿಗೆ ಪೂರ್ಣ ಪ್ರಮಾಣದ ಆಸ್ಪತ್ರೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಪಂಡಿತ್‌ ಹೇಳಿದರು.

 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.