ಆತಂಕ, ಖನ್ನತೆಗೆ ಒಳಗಾಗುತ್ತಿರುವ ಕೋವಿಡ್ ಸೋಂಕಿತರು


Team Udayavani, Mar 13, 2021, 5:47 PM IST

ಆತಂಕ, ಖನ್ನತೆಗೆ ಒಳಗಾಗುತ್ತಿರುವ ಕೋವಿಡ್ ಸೋಂಕಿತರು

ಮುಂಬಯಿ: ನಗರದಲ್ಲಿ ಇತ್ತೀಚೆಗೆ ವರದಿಯಾದ ಕೋವಿಡ್ ಸೋಂಕಿತರಲ್ಲಿ ಹೆಚ್ಚಿನವರು ಆತಂಕ ಮತ್ತು ಖನ್ನತೆಯಲ್ಲಿರುವುದನ್ನು ಗಮನಿಸಿರುವು ದಾಗಿ ನಗರದ ಮನೋವೈದ್ಯರು ಮತ್ತು ಮನಃಶಾಸ್ತ್ರಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಫೆ. 17ರಿಂದ ಕೋವಿಡ್‌ ದೈನಂದಿನ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಂಡಿದ್ದು, ಫೆಬ್ರವರಿ ಮೊದಲ ವಾರಕ್ಕೆ ಹೋಲಿಸಿದರೆ ಪ್ರಸ್ತುತ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ ಸುಮಾರು ಶೇ. 89ರಷ್ಟು ಹೆಚ್ಚಾಗಿದೆ. ಇದರ ಪರಿಣಾಮವಾಗಿ ನಗರದಲ್ಲಿ ಮತ್ತೂಂದು ಲಾಕ್‌ಡೌನ್‌ ಬಗ್ಗೆ ವದಂತಿಗಳಿದ್ದು, ಇದು ಅನೇಕರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮನೋವೈದ್ಯರು ಹೇಳಿದ್ದಾರೆ.

ಅತಿಯಾದ ಊಹೆ :

ಲಾಕ್‌ಡೌನ್‌ ಸಡಿಲಿಕೆ ಬಳಿಕ ಸ್ವಲ್ಪ ವಿಶ್ರಾಂತಿ ಮತ್ತು ಲೋಕಲ್‌ ರೈಲು ಸೇವೆಗಳ ಪುನರಾ ರಂಭದೊಂದಿಗೆ ಮುಂಬಯಿಯಲ್ಲಿ ಅನೇಕ ಕಚೇರಿಗಳು ಮತ್ತು ವ್ಯವಹಾರಗಳು ತೆರೆದಿವೆ.  ಅನೇಕರು ಪ್ರಯಾಣದ ಆತಂಕ ಎದುರಿಸುತ್ತಿರಬಹುದು. ಕೆಟ್ಟ ಪರಿಸ್ಥಿತಿಗಳನ್ನು ಅತಿಯಾಗಿ ಊಹೆಯಿಂದ ಆತಂಕ, ಖನ್ನತೆ ಸಂಭವಿಸುತ್ತದೆ. ಕೆಟ್ಟ ಘಟನೆ ಅವರೊಂದಿಗೆ ಅಥವಾ ಅವರ ಕುಟುಂಬದೊಂದಿಗೆ ಸಂಭವಿಸಬಹುದು ಎಂದು ನಿರೀಕ್ಷಿಸುತ್ತಾರೆ ಎಂದು ಮಸಿನಾ ಆಸ್ಪತ್ರೆಯ ಸಲಹೆಗಾ ರರಾದ ಮನಶಾಸ್ತ್ರಜ್ಞ ಮತ್ತು ಮಾನಸಿಕ ಚಿಕಿತ್ಸಕ ಡಾ| ಸಾಹಿರ್‌ ಜಮಾತಿ ತಿಳಿಸಿದ್ದಾರೆ.

ಅನಾರೋಗ್ಯಕ್ಕೆ ತುತ್ತಾಗಿದ್ದೇನೆ :

ಬೊರಿವಲಿಯ 34ರ ಹರೆಯದ ಯುವ ಕನೋರ್ವ ಮತ್ತೂಂದು ಲಾಕ್‌ಡೌನ್‌ ಬಗ್ಗೆ ಆತಂಕದಿಂದ ಮನೋ ವೈದ್ಯರ ಮೊರೆ ಹೋಗಿದ್ದಾನೆ. ಕಳೆದ ವರ್ಷ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಘೋಷಿಸಿದಾಗ ಯುವಕನ ವ್ಯವಹಾರವು ಸ್ಥಗಿತಗೊಂಡಿತು. ಅನ್ಲಾಕ್‌ಗೊಂಡ ಬಳಿಕ ಅವರ ಕೆಲಸವು ಪುನರಾರಂಭ ಗೊಂಡಿತು. ಪ್ರಸ್ತುತ ಲಾಕ್‌ಡೌನ್‌ ಆತಂಕದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ.

ಮತ್ತೂಂದು ಲಾಕ್‌ಡೌನ್‌ ಭಯ :

ನನ್ನ ವ್ಯವಹಾರವು ಈಗಷ್ಟೇ ಪ್ರವರ್ಧ ಮಾನಕ್ಕೆ ಬಂದಿದ್ದರಿಂದ 2018ರಲ್ಲಿ 56 ಲಕ್ಷ ರೂ. ಗಳಿಗೆ ಖರೀದಿಸಿದ ಫ್ಲ್ಯಾಟ್‌ಗಾಗಿ 36,000 ರೂ. ಬ್ಯಾಂಕ್‌ ಸಾಲವನ್ನು ಮಾಸಿಕಕಂತಿನಂತೆ ಪಾವತಿಸಬೇಕಾಗಿದೆ. ಲಾಕ್‌ಡೌನ್‌ ಕಾರಣ ನಾನು 15 ಲಕ್ಷ ರೂ. ನಷ್ಟವನ್ನು ಅನುಭವಿಸಿದೆ. ಈಗ ನನ್ನ ವ್ಯವಹಾರವು ಮತ್ತೆ ಹಳಿಗೆ ಬರುತ್ತಿದ್ದಾಗ ಮತ್ತೂಂದು ಲಾಕ್‌ಡೌನ್‌ ಭಯವು ರಾತ್ರಿ ಎಚ್ಚರವಾಗಿರಿಸುತ್ತದೆ. ನನಗೆ ನಿದ್ರೆ ಬರುತ್ತಿಲ್ಲ. ಭಯ ಮತ್ತು ಆತಂಕದಿಂದಾಗಿ ನನಗೆ ವಾಕರಿಕೆ ಮತ್ತು ತಲೆತಿರುಗುವಿಕೆ ಇದೆ ಎಂದು  ಯುವಕನೋರ್ವ ಯುವಕ ತಿಳಿಸಿದ್ದಾನೆ.

ಸೋಂಕು ಹರಡುವಿಕೆ ಕಡಿಮೆಯಾದಾಗ ಕೊರೊನಾ ಸಂಪೂರ್ಣವಾಗಿ ಮುಗಿದೇ ಹೋಯಿತೋ ಎಂಬ ನಂಬಿಕೆ ಇತ್ತು. ಆದರೆ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದಂತೆ ಆತಂಕದ ಮಟ್ಟ ಹೆಚ್ಚುತ್ತಿದೆ. ಅನೇಕರು ತಮ್ಮ ಉದ್ಯೋಗ ವನ್ನು ಕಳೆದುಕೊಳ್ಳುತ್ತೇವೆ ಅಥವಾ ಮತ್ತೆ ಪ್ರತ್ಯೇಕವಾಗುವ ಭಯವನ್ನು ವ್ಯಕ್ತಪಡಿಸುತ್ತಿದ್ದಾರೆ.-ಡಾ| ಸಾಗರ್‌ ಮುಂಡಾಡಾ ಮನೋವೈದ್ಯರು, ಮುಂಬಯಿ

ನನ್ನ ರೋಗಿಗಳನ್ನು ಅಗತ್ಯವಿದ್ದಾಗ ಮಾತ್ರ ಪ್ರಯಾಣಿಸುವಂತೆ ಕೇಳಿ ಕೊಳ್ಳುತ್ತೇನೆ. ತಮ್ಮ ಪ್ರಯಾಣದ ಸಮಯದಲ್ಲಿ ಸಂಗೀತ, ಹಾಸ್ಯ  ಪುಸ್ತಕ, ಕಾಮಿಡಿ ಶೋಗಳನ್ನು ನೋಡುವಂತೆ ತಿಳಿಸುತ್ತೇನೆ. ಕೊರೊನಾ ತತ್‌ಕ್ಷಣ ನಮ್ಮನ್ನು ಬಿಟ್ಟು ಹೋಗುವಂಥದ್ದಲ್ಲ. ಇದಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ಏನೂ ಮಾಡಲಾಗುವುದಿಲ್ಲ. -ಡಾ| ಹರೀಶ್‌ ಶೆಟ್ಟಿ ಮನೋವೈದ್ಯರು, ಪೊವಾಯಿ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.