ಲಸಿಕೆ ತೆಗೆದುಕೊಂಡರೆ ಅಪಾಯ ಕಡಿಮೆ: ರಾಜ್ಯಪಾಲ
Team Udayavani, Jul 9, 2021, 12:25 PM IST
ಮುಂಬಯಿ: ಕೊರೊನಾ ಮೊದಲ ಮತ್ತು ಎರಡನೆಯ ಅಲೆಯಲ್ಲಿ ದೇಶದ ಹಾಗೂ ರಾಜ್ಯದ ಜನರು ಅನೇಕ ಸಮಸ್ಯೆ ಗಳನ್ನು ಎದುರಿಸಬೇಕಾಯಿತು. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು ಮತ್ತು ಆದಾ ಯವನ್ನು ಕಳೆದುಕೊಂಡರು.
ಹೊಟೇಲ್ ಉದ್ಯಮದಲ್ಲಿ ಕೆಲಸ ಮಾಡುವವರು ಉದ್ಯೋಗ ಕಳೆದುಕೊಂಡರು, ಮಾಲಕರ ಆದಾಯ ಕುಸಿಯಿತು. ಈ ಕಷ್ಟದ ಸಮಯದಲ್ಲಂತೂ ಕೊರೊನಾ ವಾರಿಯರ್ಸ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇವತೆಗಳಂತೆಸೇವೆ ಸಲ್ಲಿಸಿದ್ದಾರೆ. ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಎಲ್ಲರಿಗೂ ಆದಷ್ಟು ಬೇಗ ಲಸಿಕೆ ಹಾಕಿಸಿದರೆ, ಮೂರನೇ ಅಲೆಯಲ್ಲಿ ಅಪಾಯ ಕಡಿಮೆಯಾಗುತ್ತದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ತಿಳಿಸಿದರು.
ರಾಜಭವನದಲ್ಲಿ 50 ಆ್ಯಂಬುಲೆನ್ಸ್ ಚಾಲಕರು, ವ್ಯವಸ್ಥಾಪಕರು, ಶಾಲಾ ಬಸ್ ಮಾಲಕರು ಮತ್ತು ಶಾಲಾ ಮತ್ತು ಕಂಪೆನಿ ಬಸ್ ಚಾಲಕರ ಸಂಘದ ಪದಾಧಿಕಾರಿಗಳನ್ನು ರಾಜ್ಯಪಾಲರು ಗೌರವಿಸಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಅಗತ್ಯವಿರುವ ರೋಗಿಗಳಿಗೆ ಶಾಲೆ ಮತ್ತು ಕಂಪೆನಿ ಬಸ್ಗಳು ಮತ್ತು ವಾಹನಗಳನ್ನು ಆ್ಯಂಬುಲೆನ್ಸ್ ಸೇವೆಗೆ ಬಳಸಿದ್ದಾರೆ.
ಚಾಲಕ ಅಥವಾ ಯಾವುದೇ ಕೆಲಸಗಾರನ ಕೆಲಸ ಮುಖ್ಯವಾಗಿದೆ ಎಂದು ಚಾಲಕರನ್ನು ಶ್ಲಾಘಿಸಿದರು.ಸ್ಕೂಲ್ ಮತ್ತು ಕಂಪೆನಿ ಬಸ್ ಮಾಲಕರ ಸಂಘದಿಂದ ಕೊರೊನಾ ವಾರಿಯರ್ಸ್ಗಳ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಅನಿಲ್ ಗರ್ಗರ್, ಕಾರ್ಯದರ್ಶಿ ದೀಪಕ್ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಮಣಿಯನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ