45 ದಿನಗಳಿಂದ ಕೋವಿಡ್ ಪಾಸಿಟಿವ್‌ ಪ್ರಕರಣಗಳಲ್ಲಿ ಕುಸಿತ: ಬೆಸ್ಟ್‌


Team Udayavani, Dec 28, 2020, 12:27 PM IST

45 ದಿನಗಳಿಂದ ಕೋವಿಡ್ ಪಾಸಿಟಿವ್‌ ಪ್ರಕರಣಗಳಲ್ಲಿ ಕುಸಿತ: ಬೆಸ್ಟ್‌

ಮುಂಬಯಿ, ಡಿ. 27: ಕಳೆದ 45 ದಿನಗಳಲ್ಲಿ ತನ್ನ ಸಿಬಂದಿಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣ ಕುಸಿತ ಕಂಡುಬಂದಿದ್ದು, ಆಪರೇಷನ್‌ ಝೀರೋ ಡೆತ್‌ ಕಾರಣದಿಂದಾಗಿ ಇದು ಸಾಧ್ಯವಾಗಿದೆ ಎಂದು ಬೆಸ್ಟ್‌ ಸಮೂಹ ಸಂಸ್ಥೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದು ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯನ್ನು ಒಳಗೊಂಡಿದ್ದು, ಇತ್ತೀಚೆಗಿನ ಅಂಕಿಅಂಶಗಳ ಪ್ರಕಾರ  2,887 ಬೆಸ್ಟ್‌ ಸಿಬಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಅವರಲ್ಲಿ 2,763 ಮಂದಿ ಗುಣಮುಖವಾದರೆ, ಪ್ರಸ್ತುತ 25 ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

5,198 ರೋಗಲಕ್ಷಣ  ರಹಿತ ಸಿಬಂದಿ ಪರೀಕ್ಷೆ :

ಕಳೆದ ಕೆಲವು ದಿನಗಳಲ್ಲಿ 57 ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ ಶಿಬಿರಗಳನ್ನು ವಿವಿಧ ಡಿಪೋಗಳು ಮತ್ತು ಕೆಲಸದ ಸ್ಥಳಗಳಲ್ಲಿ ಎಂಸಿಜಿಎಂ ಸಹಯೋಗದೊಂದಿಗೆ ಆಯೋ ಜಿಸಲಾಗಿತ್ತು. ಇದರ ಮೂಲಕ 5,198 ರೋಗಲಕ್ಷಣ ರಹಿತ ಸಿಬಂದಿಯನ್ನು ಪರೀಕ್ಷಿಸಲಾಯಿಗಿದೆ. ಇವರಲ್ಲಿ 32 ಮಂದಿ ಯಲ್ಲಿ  ಕೊರೊನಾ ದೃಢಪಟ್ಟಿದ್ದು, ಈಗಾಗಲೇ 25 ಸಿಬಂದಿಗೆ ಚಿಕಿತ್ಸೆ ನೀಡಲಾಗಿದೆ. ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರ ಆರೋಗ್ಯ ಸ್ಥಿರವಾಗಿದೆ ಎಂದು ಬೆಸ್ಟ್‌ ಸಮೂಹ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ| ಅನಿಲ್‌ ಕುಮಾರ್‌ ಸಿಂಗಲ್‌  ಶನಿವಾರ ತಿಳಿಸಿದ್ದಾರೆ.

ಚೇತರಿಕೆ ಮೇಲೆ ಉತ್ತಮ ಪರಿಣಾಮ :

ಕೋವಿಡ್‌ ಸೋಂಕನ್ನು ನಿಭಾಯಿಸುವಾಗ ಬೆಸ್ಟ್‌ ಸಂಸ್ಥೆಯು 40,000 ಸಿಬಂದಿಯ ಉತ್ತಮ ಆರೋಗ್ಯ ಮತ್ತು ಕ್ಷೇಮ ವಿಧಾನಕ್ಕಾಗಿ ಡಿಸೆಂಬರ್‌ ಆರಂಭದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಒ) ಮುಂಬಯಿಯ ಬೆಸ್ಟ್‌ ಅಂಡಟೇìಕಿಂಗ್‌ ಅನ್ನು ಪಡೆದುಕೊಂಡಿದೆ. ಟೆಲಿ ಮಾನಿಟರಿಂಗ್‌ ತೀವ್ರತೆಯ ಸ್ಕೋರ್‌ ವ್ಯವಸ್ಥೆಯನ್ನು ಆಂತರಿಕವಾಗಿ ಅಭಿವೃದ್ಧಿಪಡಿಸಲಾಗಿದ್ದು, ಇದರ ಅಡಿಯಲ್ಲಿ ಬೆಸ್ಟ್‌ನ ವೈದ್ಯರು ಕೋವಿಡ್‌ ರೋಗಿಗಳ ಆರೋಗ್ಯವನ್ನು ನಿಯತಕಾಲಿಕವಾಗಿ ಐದು ನಿಮಿಷಗಳ ಕರೆಗಳ ಮೂಲಕ ಮೇಲ್ವಿಚಾರಣೆ ಮಾಡುತ್ತಾರೆ. ಇದು ಕೋವಿಡ್‌ ರೋಗಿಗಳಲ್ಲಿ ಚೇತರಿಕೆಯ ಮೇಲೆ ಉತ್ತಮಪರಿಣಾಮ ಬೀರಿದೆ. ಈ ಕ್ರಮಗಳ ಪರಿಣಾಮವಾಗಿ 2020ರ ಎಪ್ರಿಲ್‌ ಮತ್ತು ಸೆಪ್ಟಂಬರ್‌ ನಡುವೆ 2,340 ಕೋವಿಡ್‌ ಪಾಸಿಟಿವ್‌ ಸಿಬಂದಿಯಲ್ಲಿ 2,125 ಮಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ತಂಡದ ಸನ್ನದ್ಧತೆ ಮತ್ತು ಅನುಸರಣೆಗಳು ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಲು ಸಹಾಯ ಮಾಡಿದೆ ಎಂದು ಸಿಂಗಲ್‌ ಹೇಳಿದ್ದಾರೆ.

ಪ್ರತಿದಿನ 500 ಸಿಬಂದಿ ಪರೀಕ್ಷೆ  :

ಡಬ್ಲ್ಯುಎಚ್‌ಒ ಮಾನದಂಡಗಳ ಪ್ರಕಾರ ಸಂಸ್ಥೆಯಲ್ಲಿ ಶೇ. 5 ಮತ್ತು ಅದಕ್ಕಿಂತ ಕಡಿಮೆ ಪಾಸಿಟಿವ್‌ ಪ್ರಕರಣಗಳು ಉತ್ತಮ ನಿಯಂತ್ರಣದ ಸಂಕೇತವಾಗಿದೆ ಎಂದು ಬೆಸ್ಟ್‌ ಸಮೂಹ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ| ಅನಿಲ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ. ಈ ಗುರಿಯನ್ನು ಸಾಧಿಸಲು ಪ್ರತಿದಿನ ಸರಾಸರಿ 500 ಸಿಬಂದಿಯನ್ನು ಪರೀಕ್ಷಿಸಲಾಗುತ್ತಿದೆ. ಜತೆಗೆ 4,000ಕ್ಕೂ ಹೆಚ್ಚು ಜಾಗೃತಿ ಉಪನ್ಯಾಸಗಳನ್ನು ನಡೆಸಲಾಗಿದೆ. 1,30,000ಕ್ಕೂ ಹೆಚ್ಚು ವಿಟಮಿನ್‌ ಸಿ, ಡಿ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧಗಳನ್ನು ಸಿಬಂದಿಗೆ ವಿತರಿಸಲಾಗಿದೆ. 2,000ಕ್ಕೂ ಹೆಚ್ಚಿನ ಅಪಾಯದ ಮತ್ತು 3,000 ಕಡಿಮೆ ಅಪಾಯದ ಸಂಪರ್ಕ ಸಿಬಂದಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.