ಕೋವಿಡ್‌ ಹೆಸರಿನಲ್ಲಿ ಸೈಬರ್‌ ವಂಚನೆ: ಪೊಲೀಸರಿಂದ ಕಟ್ಟೆಚ್ಚರ


Team Udayavani, Jun 1, 2021, 10:48 AM IST

ಕೋವಿಡ್‌ ಹೆಸರಿನಲ್ಲಿ ಸೈಬರ್‌ ವಂಚನೆ: ಪೊಲೀಸರಿಂದ ಕಟ್ಟೆಚ್ಚರ

ಮುಂಬಯಿ: ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಸೈಬರ್‌ ವಂಚಕರು ಜನರನ್ನು ಮೋಸಗೊಳಿಸುವ ಸಾಧನ ವಾಗಿ ಕೋವಿಡ್‌ ಅನ್ನು ಬಳಸುತ್ತಿದ್ದಾರೆ ಎಂದು ನಗರ ಸೈಬರ್‌ ಕ್ರೈಂ ವಿಭಾಗದ ಪೊಲೀಸ್‌ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ವಂಚ ಕರು ಆಕ್ಸಿಜನ್‌ ಸಿಲಿಂಡರ್‌ ಒದಗಿಸಲು, ಆ್ಯಂಟಿ ವೈರಲ್‌ ಔಷಧಗಳನ್ನು ಒದಗಿಸುವ ಮೂಲಕ ಜನರನ್ನು ಮೋಸಗೊಳಿಸುತ್ತಿದ್ದು, ಕೋವಿಡ್‌ ಲಸಿಕೆಯ ಮುಂಚೂಣಿಯಲ್ಲಿರುವ ವಿದೇಶಿ ಕಂಪೆನಿಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸಗೊಳಿಸುತ್ತಿದ್ದಾರೆ ಎಂದು ನಗರ ಪೊಲೀಸರಿಂದ ಸಂಗ್ರಹಿಸಿದ ಅಂಕಿಅಂಶ ಬಹಿರಂಗಪಡಿಸಿದೆ.

ಅಂಕಿಅಂಶಗಳ ಪ್ರಕಾರ ಎ. 30ರ ವರೆಗೆ ಮುಂಬಯಿ ಪೊಲೀಸರು ನಗರದಾದ್ಯಂತ 777 ಸೈಬರ್‌ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದು, ರಾಜ್ಯ ಸೈಬರ್‌ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಆನ್‌ಲೈನ್‌ ಹಣಕಾಸು ವಹಿವಾಟು ಮಾಡುವಾಗ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಮೊದಲ ನಾಲ್ಕು ತಿಂಗಳಲ್ಲಿ ದಾಖಲಾದ ಹೆಚ್ಚಿನ ಪ್ರಕರಣಗಳು ಕ್ರೆಡಿಟ್‌ ಕಾರ್ಡ್‌ ಮತ್ತು ಆನ್‌ಲೈನ್‌ ವಂಚನೆಗಳಿಗೆ ಸಂಬಂಧಿಸಿದ್ದಾಗಿದ್ದು, ಇಂತಹ 181 ಅಪರಾಧಗಳು ದಾಖಲಾಗಿವೆ. 78 ಪ್ರಕರಣಗಳು ಅಶ್ಲೀಲ ಎಸ್‌ಎಂಎಸ್‌ ಮತ್ತು ಇ-ಮೇಲ್‌ ಪ್ರಕರಣಗಳಾಗಿವೆ. ಅಲ್ಲದೆ ಮಾರ್ಫಿಂಗ್‌ ಇ-ಮೇಲ್‌ಗ‌ಳು ಮತ್ತು ನಕಲಿ ಸೋಶಿಯಲ್‌ ಮೀಡಿಯಾ ಪ್ರೊಫೈಲಿಂಗ್‌ನ 18 ಪ್ರಕರಣಗಳು, ಫಿಶಿಂಗ್‌ನ ನಾಲ್ಕು ಪ್ರಕರಣಗಳು, ಮೂಲ ಕೋಡ್‌ ಅನ್ನು ಹಾಳು ಮಾಡಿದ ಎರಡು ಪ್ರಕರಣಗಳು ಹಾಗೂ ಇತರ ವಿಭಾಗಗಳಲ್ಲಿ  ಬರುವ 493 ಅಪರಾಧಗಳನ್ನು ಎಪ್ರಿಲ್‌ ಅಂತ್ಯದವರೆಗೆ ದಾಖಲಿಸಲಾಗಿದೆ.

1.58 ಲಕ್ಷ ರೂ. ಕಳೆದುಕೊಂಡ ಯುವಕ :

ಇತ್ತೀಚೆಗೆ ಚೆಂಬೂರಿನ 18 ವರ್ಷದ ಯುವಕನೋರ್ವ ಆನ್‌ಲೈನ್‌ನಲ್ಲಿ ಆಕ್ಸಿಜನ್‌ ಪೂರೈಕೆಗೆ ಆದೇಶಿಸುವಾಗ 1.58 ಲಕ್ಷ ರೂ. ಗಳನ್ನು ಕಳೆದುಕೊಂಡಿರುವ ಪ್ರಕರಣ ದಾಖಲಾಗಿದೆ. ಯುವಕ ತನ್ನ ಅನಾರೋಗ್ಯದ ಅಜ್ಜಿಗಾಗಿ ಆಮ್ಲಜನಕ ವ್ಯವಸ್ಥೆ ಮಾಡಲು ಆನ್‌ಲೈನ್‌ನಲ್ಲಿ ವಿತರಕನನ್ನು ಸಂಪರ್ಕಿಸಿದ್ದ. ವಿತರಕರು ಎರಡು ದಿನಗಳಲ್ಲಿ ವಿತರಣೆ ಮಾಡುವ ಭರವಸೆ ನೀಡಿದ್ದು, ಆರೋಪಿ ಸಂಪೂರ್ಣ ಪಾವತಿ ಮುಂಗಡವನ್ನು ಸ್ವೀಕರಿಸಿದರೂ ಆಮ್ಲಜನಕ ಸಿಲಿಂಡರ್‌ ತಲುಪಿಸಲಿಲ್ಲ. ಆರೋಪಿ ನೀಡಿದ ಜಿಎಸ್‌ಟಿ ಸಂಖ್ಯೆಯನ್ನು ಪರೀಕ್ಷಿಸಿದಾಗ ಅದು ಉಡುಪಿನ ಅಂಗಡಿಯದ್ದಾಗಿದೆ ಎಂದು ತಿಳಿದುಬಂದಿದೆ.

ಉದ್ಯಮಿಗೆ 1.7 ಕೋಟಿ ರೂ. ವಂಚನೆ :

ಒಂದೆರಡು ದಿನಗಳ ಹಿಂದೆ ದಕ್ಷಿಣ ಮುಂಬಯಿಯ ಉದ್ಯಮಿಯೊಬ್ಬರು 1.7 ಕೋಟಿ ರೂ. ಗಳ ವಂಚನೆಗೊಳಗಾಗಿದ್ದರು. ವಂಚಕರು ಕೋವಿಡ್‌ ಲಸಿಕೆಗಾಗಿ ಸುದ್ದಿಯಲ್ಲಿರುವ ಅಂತಾರಾಷ್ಟ್ರೀಯ ಔಷಧ ಕಂ±ಪೆನಿಯೊಂದರ ಖರೀದಿ ವ್ಯವಸ್ಥಾಪಕನೆಂದು ಹೇಳಿ ಕ್ಯಾನ್ಸರ್‌ ಔಷಧಕ್ಕಾಗಿ ಕಚ್ಚಾ ವಸ್ತುಗಳ ಮೇಲೆ ಹೂಡಿಕೆ ಮಾಡಲು ಉದ್ಯಮಿಗಳಿಗೆ ಆಮಿಷವೊಡ್ಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೋವಿಡ್‌ ಸಂಬಂಧಿತ ಔಷಧಗಳ ಕೊರತೆಯೊಂದಿಗೆ ರಾಜ್ಯಾದ್ಯಂತ ಹಲವಾರು ಮಂದಿ ಆನ್‌ಲೈನ್‌ ವಂಚನೆಗೊಳಗಾಗಿದ್ದು, ಈ ಬಗ್ಗೆ ನಾಗರಿಕರು ಎಚ್ಚರಿಕೆ ವಹಿಸುವಂತೆ ಸೈಬರ್‌ ಕ್ರೈಂ ವಿಭಾಗದ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.