ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ


Team Udayavani, Oct 16, 2021, 12:15 PM IST

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಬೊರಿವಲಿ: ಬೊರಿವಲಿ ಪಶ್ಚಿಮದ ವಜೀರ್‌ ನಾಕಾದ ಜೈರಾಜ್‌ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್‌ ಸಂಚಾಲಕ್ವದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ಶರನ್ನವರಾತ್ರಿ ಉತ್ಸವದ ಅಂಗವಾಗಿ ಸಾರ್ವಜನಿಕ ಚಂಡಿಕಾ ಹೋಮವು ಅ. 13ರಂದು ನಡೆಯಿತು.

ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸ್ಥಾಪಕ ವಂಶಸ್ಥ ಮೊಕ್ತೇಸರ ಜಯರಾಜ ಶ್ರೀಧರ ಶೆಟ್ಟಿ ಕಲ್ಲಮುಂಡ್ಕೂರು ಹರಿಯಾಳಗುತ್ತು, ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ, ಶಾಲಿನಿ ಪ್ರದೀಪ್‌ ಶೆಟ್ಟಿ, ಮೊಕ್ತೇಸರರಾದ ಜಯಪಾಲಿ ಅಶೋಕ್‌ ಶೆಟ್ಟಿ, ಡಾ| ಸಪ್ನಾ ಶೆಟ್ಟಿ ಅವರ ಮುಂದಾಳತ್ವದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಮಂದಿರದ ಅವರಣದಲ್ಲಿ  ಬೆಳಗ್ಗೆ ಪ್ರಾರ್ಥನೆ, ಪುಣ್ಯಾಹ ವಾಚನ, ಸಂಕಲ್ಪ, ಕಲ್ಪೋಕ್ತ ಪೂಜೆ ಪೂರ್ಣಾಹುತಿ, ಸುಹಾಸಿನಿ ಪೂಜೆ ನೆರವೇರಿತು.

ಭಕ್ತರು ಮಂಗಲ ದ್ರವ್ಯ, ಮಂಗಲ ವಸ್ತ್ರ, ಫಲಪುಷ್ಪ ಸುವಸ್ತುಗಳನ್ನು ಹೋಮ ಯಜ್ಞಕುಂಡಕ್ಕೆ ಸಮರ್ಪಿಸಿದರು. ಮಹಾ ಪೂಜೆ ಬಳಿಕ ಕೊರೊನಾ ಸಾಮಾಜಿಕ ಅಂತರ ಹಾಗೂ ಸುರಕ್ಷತೆಯಲ್ಲಿ ಅನ್ನ ಸಂತರ್ಪಣೆ ಜರಗಿತು. ಬಾಲಕೃಷ್ಣ ರೈ, ಜಗದೀಶ್‌ ಶೆಟ್ಟಿ, ಅನುಪ್‌ ಶೆಟ್ಟಿ, ಡಾ| ರಶ್ಮೀ ಶೆಟ್ಟಿ, ಪೇಟೆಮನೆ ಪ್ರಕಾಶ್‌ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.

ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ  ಭಕ್ತರನ್ನು ಸ್ವಾಗತಿಸಿ, ಕೊರೊನೊದಿಂದಾಗಿ ಸಾಂಕೇತಿ ಕವಾಗಿ ದಸರಾ ಸೇವೆ ಮಾಡಲಾಗಿದೆ. ಸಿಟ್ಟು, ದುರಾಸೆ, ವ್ಯಾಮೋಹ. ದ್ವೇಷ ಮೊದಲಾದ ಅಸುರೀ ಶಕ್ತಿಗಳನ್ನು ಮೆಟ್ಟಿ ದೈವೀಶಕ್ತಿಯನ್ನಾಗಿ ಪರಿವತಿಸುವ ಪರ್ವ ಕಾಲವೇ ದಸರಾ ಹಬ್ಬ. ದುಷ್ಟ ದಾನವರನ್ನು ಸಂಹರಿಸಿ ಮನುಕುಲವನ್ನು ಸಂರಕ್ಷಿಸಿದ ಅದಿಮಾಯೆಯನ್ನು ಪೂಜಿಸಿ ಮಾತೆಯ ಕೃಪೆಗೆ ಪಾತ್ರರಾಗೋಣ. ಭಕ್ತಿ, ಧರ್ಮ, ವೃತಾಚರಣೆ, ಸಂಸ್ಕೃತಿಯು ಸಂವರ್ಧಕ ದಿನಗಳಾಗಿವೆ. ಅದನ್ನು ಯಾಥಾ ಸ್ಥಿತಿಯಲ್ಲಿ  ಕಾಯ್ದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿವೆ. ಕೊರೊನಾ ಸಾಂಕ್ರಾಮಿಕವು ದೂರವಾಗಿ ಜನಜೀವನ ಸುಗಮವಾಗಿ ಸಾಗಲಿ ಎಂದು ಪ್ರಾರ್ಥಿಸಿದರು.

ದಸರಾ ಪ್ರಯುಕ್ತ ಪ್ರತೀನಿತ್ಯ ನವದುರ್ಗೆಯರ ಆರಾಧನೆ, ಪಂಚಾಮೃತ ಅಭಿಷೇಕ, ತನು ತಂಬಿಲ, ದೇವತಾ ಪ್ರಾರ್ಥನೆ, ಗಣಪತಿಹೋಮ, ನವಕ ಕಲಶಾಭಿಷೇಕ, ಪ್ರಧಾನ ಹೋಮ, ರಂಗಪೂಜೆ, ಭಜನೆ, ದುರ್ಗಾ ನಮಸ್ಕಾರ ಪೂಜೆ ಹಾಗೂ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸದಸ್ಯರಿಂದ ಸಂಜೆ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಶ್ರೀ ಕೊಯ್ಯೂರು ನಂದಕು ಮಾರ ತಂತ್ರಿ, ವಿದ್ವಾನ್‌ ದರೆಗುಡ್ಡೆ ಶ್ರೀನಿವಾಸ ಭಟ್‌, ಬೆಳ್ಮಣ್‌ ವೆಂಕಟ್ರಮಣ ತಂತ್ರಿ ಸಹಕರಿಸಿದರು. ಶ್ರೀಕ್ಷೇತ್ರದ ಪರಿವಾರ ದೇವರಾದ ಶ್ರೀಗಣಪತಿ, ಶ್ರೀ ಆಂಜನೇಯ, ನವಗ್ರಹ, ಶ್ರೀನಾಗ ದೇವರು ಹಾಗೂ ಕೊಡಮಣಿತ್ತಾಯ ದೈವಕ್ಕೆ ಪೂಜೆ ಸಲ್ಲಿಸಲಾಯಿತು.

ಭಕ್ತರ ಸಂಗಮ ತಾಣ :

ಭಕ್ತರ ಸಂಗಮ ತಾಣವಾಗಿರುವ ಬೊರಿವಲಿ ಪಶ್ಚಿಮದ ವಜೀರ್‌ನಾಕಾ , ಜೈರಾಜ್‌ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನವು ತುಳುನಾಡಿನ ಸಾಂಸ್ಕೃತಿಕ ವೈಭವ ಮತ್ತು ಆಧ್ಯಾತ್ಮಿಕ ಚಿಂತನೆಯ ಪವಿತ್ರ ಸ್ಥಳವಾಗಿದೆ. ಶಿಲಾಮಯ ಗರ್ಭಗುಡಿ, ಸ್ವರ್ಣ ಲೇಪಿತ ತೀರ್ಥ ಮಂಟಪ, ಆಕರ್ಷಕ ಕೆತ್ತನೆಯ ಶಿಲಾಕೃತಿ ಗಳು ಮನಸ್ಸಿನ ಪ್ರಪುಲ್ಲತೆಯನ್ನು ದ್ವಿಗುಣ

ಗೊಳಿಸುತ್ತದೆ. ನಾಡು ನುಡಿಯ ವಿವಿಧ ಕಲಾ ಪ್ರಕಾರಗಳಿಗೆ ಇಲ್ಲಿ ವೇದಿಕೆ ನೀಡಲಾಗಿ ದೆ. ಮದುವೆ, ಉಪನಯನ, ವಿವಿಧ ಪೂಜೆ ಪುನಸ್ಕಾರಗಳು, ಅಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ಜರಗುತ್ತಿವೆ.

-ಚಿತ್ರ-ವರದಿ : ರಮೇಶ ಅಮೀನ್‌

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.