ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿ: ದೀಪಾವಳಿ-ಗೋಪೂಜೆ


Team Udayavani, Nov 18, 2020, 8:00 PM IST

mumbai-tdy-1

ಮುಂಬಯಿ, ನ. 17: ಮೀರಾರೋಡ್‌ ಪೂರ್ವದ ಗೀತಾ ನಗರದಲ್ಲಿರುವ ಪ್ರತಿಷ್ಠಿತ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯ ಅವರಣದಲ್ಲಿ ನ. 15ರಂದು ಬೆಳಗ್ಗೆ ಗೋಪೂಜೆಯೊಂದಿಗೆ ವಿವಿಧ ಧಾರ್ಮಿಕ ಆಚರಣೆಗಳು ದಿನಪೂರ್ತಿ ಜರಗಿದವು.

ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ಅವರು ಗೋ ಮಾತೆಯನ್ನು ಹೂವಿನ ಹಾರಗಳಿಂದ ಶೃಂಗರಿಸಿ ಮಂದಿರದೊಳಗೆ ಬರಮಾಡಿ ಪ್ರದಕ್ಷಿಣೆಗೈದರು. ಅನಂತರ ತುಳುನಾಡಿನ ಸಂಪ್ರದಾಯದಂತೆ ಪೂಜಿಸಿ ಸನ್ನಿಧಿಯ ಪ್ರಸಾದ ನೀಡಿ ಗೋಮಾತೆಯನ್ನು ಗೌರವಿಸಿದರು. ಸಂಜೆ ಶ್ರೀ ಬಾಲಾಜಿ ಸನ್ನಿಧಿ ಯ ಮಹಿಳಾ ಸದಸ್ಯೆಯರಿಂದ ಭಜನೆ, ರಾಮರಾಜ್‌ ಅವರಿಂದ ಮಹಾಭಾರತ ಪ್ರವಚನ, ಪಲಿಮಾರು ಮಠದ ಟ್ರಸ್ಟಿ  ವಾಸು ದೇವ ಎಸ್‌. ಉಪಾಧ್ಯಾಯ ಅವರ ಪೌರೋ ಹಿತ್ಯದಲ್ಲಿ ಸಾಮೂಹಿಕ ಶ್ರೀ ಶನಿಮಹಾ ಪೂಜೆಯನ್ನು ಆಯೋಜಿಸಲಾಗಿತ್ತು.

ರಾತ್ರಿ ಶ್ರೀನಿವಾಸ ದೇವರಿಗೆ ರಂಗಪೂಜೆ ಮತ್ತು ಪರಿವಾರ ದೇವರಾದ ಶ್ರೀ ಗಣಪತಿ, ಹಿಮಾಲಯದ ಸ್ವಾಮಿಗಳಿಂದ ಪೂಜೆಯನ್ನು ಸ್ವೀಕರಿಸಿದ ಓಂಕಾರ ಇರುವ ಮಾಣಿಕ್ಯ ಲಿಂಗ ಶ್ರೀ ಮಂಗೇಶಿ ಮಹಾ ಮೃತ್ಯುಂಜಯ ರುದ್ರ ದೇವರು, ಶ್ರೀ ಪದ್ಮಾಂಬಿಕೆ, ಶ್ರೀ ಅಂಜನೇ ಯ, ಶ್ರೀ ನಾಗದೇವರು ನವಗ್ರಹ ದೇವರಿಗೆ ವಿಶೇಷ ಪೂಜೆಗಳು ನಡೆದವು.

ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಇಚ್ಛೆ ಮತ್ತು ಸಂಕಲ್ಪ ದೊಂದಿಗೆ ಟ್ರಸ್ಟಿ ಸಚ್ಚಿದಾನಂದ ರಾವ್‌ ನೇತೃ ತ್ವದಲ್ಲಿ ನ. 26ರ ವರೆಗೆ ರಾತ್ರಿ 7.30ರಿಂದ ತುಳಸಿ ಪೂಜೆ, ಲಕ್ಷ್ಮೀನಾರಾಯಣ ಸಂಕೀರ್ತ ನೆ, ನ. 27ರಂದು ಉತ್ಥಾನ ದ್ವಾದಶಿ ಪ್ರಯುಕ್ತ ಬೆಳಗ್ಗೆ ಮತ್ತು ರಾತ್ರಿ ತುಳಸಿ ಪೂಜೆ, ನಿರಂತರ ಪ್ರವಚನ ಮಾಲಿಕೆಯಲ್ಲಿ ಪ್ರತಿದಿನ ಸಂಜೆ 6ರಿಂದ 7ರ ವರೆಗೆ ಧರೆಗುಡ್ಡೆ ವಿದ್ವಾನ್‌ ಶ್ರೀàನಿವಾಸ ಭಟ್‌ ಮತ್ತು ರಾಮರಾಜ್‌ ದ್ವಿವೇದಿ ಅವರಿಂದ ಮಹಾಭಾರತ ಪ್ರವಚನ ನಡೆಯಲಿದೆ.

ವಿದ್ವಾನ್‌ ಕುಮಾರ ಸ್ವಾಮಿ ಭಟ್‌, ಪ್ರಶಾಂತ್‌ ಭಟ್‌, ಕೃಷ್ಣಮೂರ್ತಿ ಉಪಾಧ್ಯಾಯ ಮತ್ತಿತರರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಕರಮಚಂದ್ರ ಗೌಡ ಮತ್ತು ಶ್ರೀ ಬಾಲಾಜಿ ಭಜನ ಸನ್ನಿಧಿ ಸದಸ್ಯರು ಸಹಕರಿಸಿದರು. ಕೋವಿಡ್  ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮಗಳು ನಡೆದವು. ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ದೇವರ ದರ್ಶನ ಪಡೆದು  ಪ್ರಸಾದ ಸ್ವೀಕರಿಸಿದರು.

ಮೀರಾರೋಡ್‌ ಪಲಿಮಾರು ಮಠದಲ್ಲಿ  ಪ್ರತಿದಿನ ಸಂಜೆ ಭಜನೆ, ಪ್ರತಿ ಶನಿವಾರ ರಂಗಪೂಜೆ, ಪ್ರತಿ ತಿಂಗಳ ಏಕಾದಶಿ ದಿನದಲ್ಲಿ ವಿಷ್ಣು ಸಹಸ್ರನಾಮ, ತುಳಸಿ ಅರ್ಚನೆ, ಹುಣ್ಣಿಮೆ ದಿನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರತಿ ತಿಂಗಳ ಅಮಾವಾಸ್ಯೆ ದಿನ ಸಾರ್ವಜನಿಕ ಶನಿಪೂಜೆ, ಪಂಚಾಂಗಕ್ಕೆ ಅನುಗುಣವಾಗಿ ಗೋಕುಲಾಷ್ಠಮಿ, ಶ್ರೀ ಗಣೇಶ ಚತುರ್ಥಿ, ನವರಾತ್ರಿ, ಕಾರ್ತಿಕ ದೀಪೋತ್ಸವ, ಸುಬ್ರಹ್ಮಣ್ಯ ಷಷ್ಠಿ, ನಾಗರ ಪಂಚಮಿ, ಹನುಮಾನ್‌ ಜಯಂತಿ, ನವಗೃಹ ಪೂಜೆ, ಶಾಂತಿ, ಉಪನಯನ, ವಿವಾಹ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜೋತಿಷ, ಜಾತಕ ಮಾಡಿಸಲಾಗುವುದು. ನಾಡು – ನುಡಿಯ ವಿಭಿನ್ನ ಕಲಾಪ್ರಕಾರಗಳಿಗೆ ವೇದಿಕೆ ಸಿದ್ಧವಾಗಿದ್ದು, ನಿರ್ದಿಷ್ಟ ಸ್ಥಳದಲ್ಲಿ ಉತ್ತರಕ್ರಿಯೆ, ವೈಕುಂಠ ಸಮಾರಾಧನೆಗೆ ಅವಕಾಶಗಳನ್ನು ಕಲ್ಪಿಸಲಾಗಿದೆ. ತುಳು, ಕನ್ನಡಿಗ ಭಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ವಾಸುದೇವ ಎಸ್‌. ಉಪಾಧ್ಯಾಯ ಟ್ರಸ್ಟಿ , ಪಲಿಮಾರು ಮಠ

 

ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.