ಸೋಲು-ಗೆಲುವು ಮುಖ್ಯವಲ್ಲ, ಕ್ರೀಡಾಭಿಮಾನ ಮುಖ್ಯ: ರೋಹನ್‌ ಶೆಟ್ಟಿ


Team Udayavani, Dec 29, 2019, 6:06 PM IST

mumbai-tdy-1

ಪುಣೆ, ಡಿ. 28: ಕ್ರೀಡಾ ಕ್ಷೇತ್ರ ಎಂಬುವುದು ಸ್ಪರ್ಧಾತ್ಮಕ ಕಣವಾಗಿದೆ. ಈ ಸ್ಪರ್ಧಾತ್ಮಕ ಕಣದಲ್ಲಿ ಗೆಲ್ಲುವ ಪಣವನ್ನು ತೊಟ್ಟೇ ಭಾಗವಹಿಸುವ ಮನೋಸ್ಥೈರ್ಯ ಎಲ್ಲರಲ್ಲಿಯೂ ಇರಬೇಕು. ತಮ್ಮಲ್ಲಿರುವ ದೈಹಿಕ ಶಕ್ತಿಯಿಂದ, ಛಲದಿಂದ ಮನೋಬಲದಿಂದ ಆಯ್ದುಕೊಂಡಂತಹ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತೇನೆ ಎಂಬ ದೃಢವಾದ ಸಂಕಲ್ಪ ಇರಬೇಕು. ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ.ಅಭಿಮಾನ ಮುಖ್ಯವಾಗಬೇಕು.  ಸೋಲೇ ಗೆಲುವಿಗೆ ಮೂಲವಾಗಿದ್ದು, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡೆಯಲ್ಲಿ ಕೂಡಾ ನಿರಂತರ ಭಾಗ ವಹಿಸುವುದರಿಂದ ದೈಹಿಕ ಶಕ್ತಿಯನ್ನು ಉತ್ತಮ ಮಟ್ಟದಲ್ಲಿ ನಾವು ಪಡೆಯಬಹುದು. ಯಾವುದೇ ಸಮಾಜ ಅಥವಾ ಸಂಘಟನೆ ತಮ್ಮಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದ್ದೇವೆ. ದೇವಾಡಿಗ ಸಂಘವು ಕೂಡಾ ಅದೇ ಉದ್ದೇಶವನ್ನು ಇಟ್ಟುಕೊಂಡು ವರ್ಷಂಪ್ರತಿ ಇಂತಹ ಕ್ರೀಡಾಕೋಟವನ್ನು ಆಯೋಜಿಸುತ್ತಿದ್ದೇವೆ. ಸಮಾಜ ಬಾಂಧವರು ಇಚ್ಛಾಸ್ಫೂರ್ತಿಯಿಂದ ಭಾಗವಹಿಸುವುದು ಮುಖ್ಯ. ಇಲ್ಲಿ ಮನಸ್ಸುಗಳು ಹತ್ತಿರವಾಗಿ ಸ್ನೇಹ ಸಂಬಂಧ ಬೆಳೆಯುತ್ತದೆ ಎಂದು ಪುಣೆ ತುಳು ಕೂಟದ ಯುವ ವಿಭಾಗದ ಅಧ್ಯಕ್ಷರಾದ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ ನುಡಿದರು.

ಡಿ. 22ರಂದು ಬೆಳಗ್ಗೆ ಪುಣೆಯ ಯೆರವಾಡ ಮೋಜೆ ಹೈಸ್ಕೂಲ್‌ ಮೈದಾನದಲ್ಲಿ ಪುಣೆ ದೇವಾಡಿಗ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ಆಯೋಜಿಸಿರುವ 8ನೇ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ದೀಪ ಬೆಳಗಿಸಿ ಬಲೂನ್‌ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಸಮಾಜದ ಮಕ್ಕಳು ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ವ್ಯಾಯಾಮ ಮತ್ತು ಕ್ರೀಡೆಗೆ ಮಹತ್ವವನ್ನು ಕೊಡಬೇಕು. ಮಕ್ಕಳಿಗೆ ಹಿರಿಯರ ಪ್ರೋತ್ಸಾಹ ಕೂಡ ಸಿಗಬೇಕು. ಇದರಿಂದ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವ ಮನಸ್ಸು ಮೂಡಿಬರುತ್ತದೆ. ಪುಣೆ ದೇವಾಡಿಗ ಸಂಘದ ಕಾರ್ಯ ಯೋಜನೆಗಳಲ್ಲಿ ಕ್ರೀಡೆಗೆ ಕೂಡ ಮಹತ್ವ ನೀಡಿ ಪ್ರತಿಭೆಗಳಿಗೆ ಅವಕಾಶವನ್ನು ಒದಗಿಸಿಕೊಟ್ಟಿದೆ. ಇದು ನಿರಂತರ ನಡೆಯುತ್ತಿರಲಿ ಎಂದರು.

ಪುಣೆ ದೇವಾಡಿಗ ಸಂಘದ ಅಧ್ಯಕ್ಷ ನಾರಾಯಣ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಸಲಹೆಗಾರ ನರ ಸಿಂಹ ದೇವಾಡಿಗ, ಉಪಾಧ್ಯಕ್ಷ ಸುಧಾಕರ ಜಿ. ದೇವಾಡಿಗ, ಪ್ರಧಾನ ಕಾರ್ಯದರ್ಶಿ ನವೀನ್‌ ದೇವಾಡಿಗ, ಕೋಶಾಧಿಕಾರಿ ಸುರೇಶ್‌ ಶ್ರೀಯಾನ್‌, ಕ್ರೀಡಾ ಕಾರ್ಯದರ್ಶಿ ಯಶವಂತ್‌ ದೇವಾಡಿಗ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುನಿತಾ ವಿ. ದೇವಾಡಿಗ ಪ್ರಾರ್ಥನೆಗೈದರು. ಶಶಿಕಾಂತಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ಸಮಾಜದ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯೊಂದಿಗೆ ಸೇರಿದ ಸಮಾಜ ಬಾಂಧವರು ಪಥ ಸಂಚಲನದೊಂದಿಗೆ ಗಣ್ಯರಿಗೆ ಗೌರವ ಸಲ್ಲಿಸಿದರು. ವಿವಿಧ ವಯೋಮಿತಿಗೆ ಅನುಗುಣವಾಗಿ ನಡೆದ, ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು, ಯುವಕ, ಯುವತಿಯರು, ಮಹಿಳೆಯರು, ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆದರು. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಶ್ರಾಂತ್‌ವಾಡಿಯ ಭಾವನ ಡಾನ್ಸ್‌ ಸ್ಟುಡಿಯೋದ ನಿರ್ದೇಶಕಿ ಭಾವನಾ ರಾಮ್‌ ದೇವಾಡಿಗ ಉಪಸ್ಥಿತರಿದ್ದು ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು.

ಸಂಘದ ಪ್ರಮುಖರಾದ ಪ್ರಕಾಶ್‌ ದೇವಾಡಿಗ, ಜನಾರ್ದನ ದೇವಾಡಿಗ, ಸಂತೋಷ್‌ ದೇವಾಡಿಗ, ವಾಮನ ದೇವಾಡಿಗ, ಜಗದೀಶ್‌ ದೇವಾಡಿಗ, ವಿಟಲ್‌ ದೇವಾಡಿಗ, ಪುರಂದರ ದೇವಾಡಿಗ, ಸತೀಶ್‌ ದೇವಾಡಿಗ, ಉದಯ ದೇವಾಡಿಗ, ಗೀತಾ ಎಂ. ದೇವಾಡಿಗ, ಅಮಿತಾ ಎಸ್‌. ದೇವಾಡಿಗ ಮತ್ತು ಸದಸ್ಯರು, ಸಮಾಜ ಬಾಂಧವರು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು. ಸಂಘದ ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ವಿನೋದಾ ಎಸ್‌. ದೇವಾಡಿಗ ವಂದಿಸಿದರು.

 

ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.