ದೆಹಲಿ ಕರ್ನಾಟಕ ಸಂಘ:ಜನಕಪುರಿ ಮಹಿಳಾ ಮಂಡಳಿಯ ಬೆಳ್ಳಿಹಬ್ಬ


Team Udayavani, Oct 14, 2017, 12:02 PM IST

66.jpg

ಮುಂಬಯಿ: ಇದು ನಮ್ಮ ಮಹಿಳೆಯರ, ಮಹಿಳೆಯರಿಗೋಸ್ಕರ ಮಹಿಳೆ ಯರ‌ ಕಾರ್ಯಕ್ರಮ, ಮೊದಲು ಅವರಿಗೆ ಅಭಿನಂದನೆಗಳು. ಕರ್ನಾಟಕ ಸಂಘ ನನಗೆ ತವರು ಮನೆಯ ಹಾಗೆ. ಏಕೆಂದರೆ  ಮೊದಲು ಐಎಎಸ್‌ ಮಾಡುತ್ತಿರುವಾಗ ನಾನು ಇಲ್ಲಿಯೇ ಉಳಿದುಕೊಂಡು ಐಎಎಸ್‌ ಉತ್ತೀರ್ಣಳಾಗಿದ್ದು. ಆದ್ದರಿಂದ ದೆಹಲಿ ಕರ್ನಾಟಕ ಸಂಘದಿಂದ ಯಾವಾಗಕರೆ ಬಂದರೂ ನಾನು ಎಷ್ಟೇ ಕಾರ್ಯನಿರತಳಾಗಿದ್ದರೂ ಕೂಡ ಬಂದೇ ಬರುತ್ತೇನೆ ಎಂದು ಉತ್ತರ ಪ್ರದೇಶ ಭವನದ ಆಯುಕ್ತೆ ಧನಲಕ್ಷ್ಮೀ  (ಐಎಎಸ್‌)  ನುಡಿದರು.

ದೆಹಲಿ ಕರ್ನಾಟಕ ಸಂಘದ ಸಹಯೋಗದೊಂದಿಗೆ ಅ. 8 ರಂದು ಸಂಘದ ಸಭಾಗೃಹದಲ್ಲಿ ನಡೆದ ಜನಕಪುರಿ ಮಹಿಳಾ ಮಂಡಳಿಯ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜನಕಪುರಿ ಮಹಿಳಾ ಮಂಡಳಿ ಬೆಳ್ಳಿ ಹಬ್ಬ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಅಂದಿನಿಂದ ಇಂದಿನವರೆಗೆ ಬೆಳೆಸಿಕೊಂಡು ಬಂದಿರುವುದಕ್ಕಾಗಿ ಅದರ ಎಲ್ಲ ಕಾರಣಕರ್ತರನ್ನು ಶ್ಲಾಘಿಸಿದರು.

ಇನ್ನೋರ್ವ ಮುಖ್ಯ ಅತಿಥಿ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಪತ್ನಿ ಸಬೀನಾ ಅವರು ಮಾತನಾಡಿ, ಇಂದು ಮಹಿಳೆಯರು ಎಲ್ಲ ರಂಗಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಪುರುಷರಿಗೆ ಸರಿಸಮಾನರಾಗಿ ನಿಂತಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಜನಕಪುರಿ ಕನ್ನಡ ಕೂಟದಂತಹ ಮಹಿಳಾ ಮಂಡಳಿಗಳು ತೊಡಗಿ ಕೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.
ಮಹಿಳೆಯರ ಸಬಲೀಕರಣದಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡಿರುವ ಕರಕುಶಲತೆ, ಅಡುಗೆ ಹಾಗೂ ಇನ್ನಿತರ ಕನ್ನಡ ನಾಡಿನ ಸಾಂಸ್ಕೃತಿಕ ಆಚರಣೆಗಳನ್ನು ಬೆಂಬಲಿಸುತ್ತಾ ಬಂದಿರುವ ಮಹಿಳಾ ಮಂಡಳಿಯ ಹುಟ್ಟು ಮತ್ತು ಬೆಳೆದು ಬಂದ ಕುರಿತಾಗಿ ಮಂಡಳಿಯ ಅಧ್ಯಕ್ಷೆ ಜಯಶ್ರೀ ಬಸವರಾಜು ಅವರು ವಿಸ್ತಾರವಾಗಿ ತಿಳಿಸಿದರು. ಮಹಿಳಾ ಮಂಡಳಿಯ ಕಾರ್ಯದರ್ಶಿ  ಸವಿತಾ ನೆಲ್ಲಿ ಮಾತನಾಡಿ, ಜನಕಪುರಿ ಮಹಿಳಾ ಮಂಡಳಿಯ ಅಭಿವೃದ್ಧಿಗಾಗಿ ಅನೇಕರು ಶ್ರಮಿಸಿದ್ದಾರೆ ಎಂದು ತಿಳಿಸುತ್ತ ಎಲ್ಲರಿಗೂ ಈ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೃತಜ್ಞತೆಯನ್ನು ಸಲ್ಲಿಸಿದರು. ಬೆಳ್ಳಿ ಹಬ್ಬವನ್ನು ಸಂಘದ ಜತೆಗೂಡಿ ಆಚರಿಸಲು ನೀಡಿದ ಸಂಘದ ಸಹಕಾರವನ್ನು ತುಂಬು ಹೃದಯದಿಂದ ಸ್ಮರಿಸಿದರು.

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆ ಅವರು ಮಾತನಾಡಿ, ದೆಹಲಿ ಕರ್ನಾಟಕ ಸಂಘಕ್ಕೆ ಎರಡು ಸಾಂಸ್ಕೃತಿಕ ಕಣ್ಣುಗಳು, ಒಂದು ದೆಹಲಿ ಸ್ನೇಹಾ ಕನ್ನಡ ಲೇಡೀಸ್‌ ಅಸೋಯೇಶನ್‌ ಇನ್ನೊಂದು ಜನಕಪುರಿ ಮಹಿಳಾ ಮಂಡಳಿ. ಇಂದು ಜನಕಪುರಿಯ ಮಹಿಳಾ ರತ್ನಗಳು ಕೂಡಿ ಬೆಳ್ಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಸಂಘ ಇಂದು ಆರ್ಥಿಕವಾಗಿ ಸದೃಢವಾಗಿದೆ. ದೆಹಲಿಯ ಇತರ ಕನ್ನಡ ಸಂಘ ಸಂಸ್ಥೆಗಳಿಗೂ ಕೂಡಾ ಸಹಕಾರವನ್ನು ನೀಡಿ ಸ್ಪಂದಿಸುತ್ತಿವೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸಂಘದ ಪ್ರ. ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ಮಾತನಾಡಿ,  ಬೆಳ್ಳಿ ಹಬ್ಬದ ಆಚರಣೆಯ ಈ ಸಂದರ್ಭದಲ್ಲಿ ತಮ್ಮ ಶುಭಾಶಯವನ್ನು ಕೋರಿದರು.  ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಲಾ°ಡ್‌ ಸಹೋದರಿಯರಾದ ಕನ್ನಡ ಚಿತ್ರರಂಗದ  ಹಿನ್ನೆಲೆ ಗಾಯಕಿಯರಾದ ಮಾನಸ ಹೊಳ್ಳ ಮತ್ತು ಪ್ರಾರ್ಥನ ಕಿರಣ್‌ ಅವರಿಂದ ರಸಮಂಜರಿ ನಡೆಯಿತು. ಡಾ| ಎಸ್‌. ಎಲ್‌. ಭಂಡಾರ್‌ಕರ್‌ ನಿರ್ದೇಶನದ ದಿ| ಎಚ್‌. ಎಸ್‌. ಕುಲಕರ್ಣಿ ರಚಿತ ದೇವರು ಎದ್ದು ಬಂದಾಗ ನಾಟಕವನ್ನು ಪ್ರದರ್ಶಿಸಲಾಯಿತು. ಜನಕಪುರಿ ಮಹಿಳಾ ಮಂಡಳಿಯ ಸದಸ್ಯರು ಮತ್ತು ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಿತು. ದೆಹಲಿ ಕರ್ನಾಟಕ ಸಂಘದ ಉಪಾಧ್ಯಕ್ಷೆ ಆಶಾಲತಾ ಎಂ. ಕಾರ್ಯಕ್ರಮ ನಿರೂಪಿಸಿದರು.  ಜತೆ ಕಾರ್ಯದರ್ಶಿ ಜಮುನಾ ಸಿ. ಮಠದ  ವಂದಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.