ಆರೋಗ್ಯ ಇಲಾಖೆಯಿಂದ 76 ವೈದ್ಯರ ನೇಮಕ


Team Udayavani, Jul 23, 2021, 12:44 PM IST

department of health

ವಸಾಯಿ: ಕೊರೊನಾ ಮೂರನೇ ಅಲೆಗೆ ಸಿದ್ಧತೆಗಾಗಿ ಮನಪಾ ಆರೋಗ್ಯ ಇಲಾಖೆಯಲ್ಲಿ 76 ಹೊಸ ವೈದ್ಯರನ್ನು ನೇಮಿಸಲಾಗಿದ್ದು, ಇದರಿಂದ ವೈದ್ಯರ ಸಂಖ್ಯೆ 142ರಿಂದ 218ಕ್ಕೆ ಹೆಚ್ಚಳಗೊಂಡಿದೆ.

ಎರಡನೇ ಅಲೆಯು ಮೊದಲನೆ ಯದಕ್ಕಿಂತ ಭಯಾನಕವಾಗಿತ್ತು. ಅದನ್ನು ತಡೆಗಟ್ಟಲು ಆರೋಗ್ಯ ವ್ಯವಸ್ಥೆ ಪರದಾಡುತ್ತಿತ್ತು. ಈ ಮಧ್ಯೆ 3ನೇ

ಅಲೆಯ ಸಾಧ್ಯತೆಯಿದ್ದು, ವಸಾಯಿ- ವಿರಾರ್‌ ಮನಪಾ ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮ ಕಾತಿಯನ್ನು ಪ್ರಾರಂಭಿಸಿತು. ಪ್ರಸ್ತುತ 905 ಸಿಬಂದಿಯನ್ನು  ಹೊಂದಿದ್ದು, ಇದರಲ್ಲಿ 218 ವೈದ್ಯರು, 5 ಸಾರ್ವಜನಿ ಕ ಆರೋಗ್ಯ ದಾದಿಯರು, 263 ದಾದಿ

ಯರು, 236 ಪ್ರಸೂತಿ ತಜ್ಞರು, 71 ಔಷಧಕಾರರು, 84 ಪ್ರಯೋಗಾಲಯ ಸಹಾಯಕರು ಮತ್ತು 19 ಎಕ್ಸರೆ ಸಹಾ ಯಕರನ್ನು ಒಳಗೊಂಡಿದೆ. ಇದಲ್ಲದೆ ಡಯಾಲಿಸಿಸ್‌ ಮೇಲ್ವಿಚಾರಕನಂತಹ ವಿವಿಧ ಹುದ್ದೆಗಳನ್ನು ಸೇರಿಸಲಾಗಿದೆ.

ನೂತನ ಸಿಬಂದಿಯಿಂದ ವಿವಿಧೆಡೆ ಸೇವೆ

3ನೇ ಸಂಭಾವ್ಯ ಅಲೆಯನ್ನು  ಎದುರಿಸಲು ಕ್ರಮಗಳನ್ನು ಪ್ರಾರಂಭಿ ಸಲಾಗಿದೆ. ಇದಕ್ಕೆ ಹೆಚ್ಚಿನ ಪ್ರಮಾಣದ ಸಿಬಂದಿ ಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ಮಾಡಲಾ ಗಿದೆ ಎಂದು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸಂತೋಷ್‌ ದೇಹಾರ್ಕರ್‌ ಮಾಹಿತಿ ನೀಡಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಬಂದಿ

ಯನ್ನು ಹೊಸ ಕೊರೊನಾ ಚಿಕಿತ್ಸಾ ಕೇಂದ್ರ, ಕೊರೊನಾ ಮಕ್ಕಳ ಆಸ್ಪತ್ರೆ, ವ್ಯಾಕ್ಸಿನೇಶನ್‌ ಅಭಿಯಾನಕ್ಕೆ ಬಳಸಲಾ ಗುವುದು ಎಂದು ಆಯುಕ್ತ ಸಂತೋಷ್‌ ದೇಹಾರ್ಕರ್‌ ತಿಳಿಸಿದ್ದಾರೆ.

ಮೂರನೇ ಸಂಭಾವ್ಯ ಅಲೆ ಎದುರಿಸಲು ಕ್ರಮ

ಎನ್‌ಎಂಸಿಯಲ್ಲಿ 21 ನಾಗರಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಸಾಯಿಯಲ್ಲಿ ಸರ್‌ ಡಿಎಂ ಪೆಟಿಟ್‌ ಆಸ್ಪತ್ರೆ ಮತ್ತು ನಲಸೋಪರದ ತುಲಿಂಜ್‌ ಆಸ್ಪತ್ರೆ ಹಾಗೂ ಎರಡು ಶಿಶುಪಾಲನ ಕೇಂದ್ರಗಳಿವೆ. ಕೊರೊನಾಗೆ ಚಂದನ್ಸರ್‌ ಆಸ್ಪತ್ರೆ, ವರುಣ್‌ ಕೈಗಾರಿಕಾ ಕೋವಿಡ್‌ ಕೇಂದ್ರ ಗಳು, ಅಗರ್ವಾಲ್‌ ಕೇಂದ್ರಗಳನ್ನು ನಿರ್ಮಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಆರೋಗ್ಯ ಇಲಾಖೆ ಯಲ್ಲಿ  ಹೆಚ್ಚಿನ ವೈದ್ಯರು ಮತ್ತು ದಾದಿಯರನ್ನು ನೇಮಕ ಮಾಡಲು ಮನಪಾ ಎಪ್ರಿಲ್‌ನಲ್ಲಿ ನಿರ್ಧರಿಸಿತು. ಅದನ್ನು ಗಮನದಲ್ಲಿಟ್ಟುಕೊಂಡು ನೇರ ಸಂದರ್ಶನಗಳ ಮೂಲಕ ಪೋಸ್ಟ್‌ ಗಳನ್ನು ಭರ್ತಿ ಮಾಡಲಾಯಿತು.

ಒಪ್ಪಂದದ ಮೇಲೆ ನೇಮಕ

ಮನಪಾ ಪ್ರಸ್ತುತ ಎಂಬಿಬಿಎಸ್‌ ವೈದ್ಯರಿಗೆ ಮಾಸಿಕ 75,000 ರೂ., ಬಿಎಎಂಎಸ್‌ ವೈದ್ಯರಿಗೆ 50,000 ರೂ. ಮತ್ತು ಬಿಎಚ್‌ಎಂಎಸ್‌ ವೈದ್ಯ ರಿಗೆ 40,000 ರೂ., ಹೊಸದಾಗಿ ನೇಮಕಗೊಂಡ ವೈದ್ಯರು ಮತ್ತು ದಾದಿಯರಿಗೂ ಅದೇ ವೇತನ ಪ್ರಮಾಣದಲ್ಲಿ  ಪಾವತಿಸಲಾಗುವುದು. ಹೊಸದಾಗಿ ನೇಮಕಗೊಂಡ ವೈದ್ಯರು ಮತ್ತು ಇತರ ಸಿಬಂದಿಯನ್ನು 11 ತಿಂಗಳ ಒಪ್ಪಂದದ ಮೇಲೆ ನೇಮಕ ಮಾಡಲಾಗಿದೆ. ಈ ಒಪ್ಪಂದವನ್ನು ನಿಯಮಿತವಾಗಿ ವಿಸ್ತರಿಸಲಾಗುವುದು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.