ದೇವಾಡಿಗ ಸಂಘ ಮುಂಬಯಿ ವಾರ್ಷಿಕ ಮಹಾಸಭೆ, ಶೈಕ್ಷಣಿಕ ನೆರವು ವಿತರಣೆ


Team Udayavani, Sep 4, 2018, 12:29 PM IST

6.jpg

ಮುಂಬಯಿ: ದೇವಾಡಿಗ ಸಂಘ ಮುಂಬಯಿ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ವಿತರಣೆ ಮತ್ತು ಸ್ವಾತಂತ್ರ್ಯ  ದಿನಾಚರಣೆಯು ಆ. 15 ರಂದು  ಸಂಘದ ಅಧ್ಯಕ್ಷರಾದ  ರವಿ ಎಸ್‌. ದೇವಾಡಿಗ ಅಧ್ಯಕ್ಷತೆಯಲ್ಲಿ ನೆರೂಲ್‌ನ ದೇವಾಡಿಗ ಭವನದಲ್ಲಿ ನಡೆಯಿತು.

ಧ್ವಜಾರೋಹಣಗೈದು ಮಾತ ನಾಡಿದ ಅಧ್ಯಕ್ಷ ರವಿ ಎಸ್‌. ದೇವಾಡಿಗ ಅವರು, ಈ   ದಿನ ನಮಗೆ ಎಲ್ಲರಿಗೂ ಮಂಗಳಕರ ಸಂದರ್ಭವಾಗಿದೆ, ಭಾರತದ ಸ್ವಾತಂತ್ರ್ಯ  ದಿನವು ಎಲ್ಲಾ   ಭಾರತೀಯ ನಾಗರಿಕರಿಗೆ ಪ್ರಮುಖ ದಿನವಾಗಿದೆ ಎಂದು ಇತಿಹಾಸದಲ್ಲಿ ಶಾಶ್ವತವಾಗಿ ಉಲ್ಲೇಖೀಸಲಾಗಿದೆ. ಭಾರತದ ಮಹಾನ್‌ ಸ್ವಾತಂತ್ರ್ಯ  ಹೋರಾಟಗಾರರಿಂದ ಅನೇಕ ವರ್ಷಗಳ ಕಠಿಣ ಹೋರಾಟದ ನಂತರ ನಾವು ಬ್ರಿಟಿಷ್‌ ಆಳ್ವಿಕೆಯಿಂದ ಸ್ವಾತಂತ್ರ್ಯ  ಬಂದ ದಿನ. ಭಾರತದ ಸ್ವಾತಂತ್ರ್ಯ ದ ಮೊದಲ ದಿನವನ್ನು ನೆನಪಿಟ್ಟುಕೊಳ್ಳಲು ಮತ್ತು ಭಾರತದ ಸ್ವಾತಂತ್ರ್ಯ  ಪಡೆಯುವಲ್ಲಿ ತಮ್ಮ ಜೀವವನ್ನು ತ್ಯಾಗ ಮಾಡಿದ ಮಹಾನ್‌ ನಾಯಕರ ಎÇÉಾ ತ್ಯಾಗಗಳನ್ನು ನೆನಪಿಟ್ಟುಕೊಳ್ಳಲು ಆ.  15 ರಂದು ಪ್ರತಿ ವರ್ಷ ಸ್ವಾತಂತ್ರ್ಯ  ದಿನವನ್ನು ಆಚರಿಸುತ್ತೇವೆ. ನಮ್ಮ ಸಂಘದಲ್ಲಿ ನಾವು ಎಲ್ಲರೂ ಒಂದಾಗಬೇಕಿದೆ ಏಕೆಂದರೆ ಮುಂದಿನ  ದಿನಗಳಲ್ಲಿ 2025 ರ ಶತಮಾನೋತ್ಸವದ ಆಚರಣೆಗಾಗಿ ನಾವು ಅನೇಕ ಕಾರ್ಯಕ್ರಮಗಳನ್ನು ಹೊಂದಿದ್ದೇವೆ ಎಂದರು.

ಪ್ರಧಾನ ಗೌರವ  ಕಾರ್ಯದರ್ಶಿ ವಿಶ್ವನಾಥ್‌ ಬಿ. ದೇವಾಡಿಗ,  ಆನಂದ್‌ ಶೇರಿಗಾರ್‌, ಪ್ರಾದೇಶಿಕ ಸಮನ್ವಯ ಸಮಿತಿ ನವಿ ಮುಂಬಯಿಯ  ಮಾಜಿ ಅಧ್ಯಕ್ಷ ಎಚ್‌.  ಮೋಹನ್‌ದಾಸ್‌,  ಜತೆ ಕಾರ್ಯದರ್ಶಿಗಳಾದ ಮಾಲತಿ ಜೆ ಮೊಯಿಲಿ ಮತ್ತು ಗಣೇಶ್‌ ಶೇರಿಗಾರ್‌,  ಕೃಷ್ಣ ಬಿ. ದೇವಾಡಿಗ, ಶಿಕ್ಷಣ ಸಮಿತಿಯ ಅಧ್ಯಕ್ಷ, ಕೋಶಾಧಿಕಾರಿ   ದಯಾನಂದ ದೇವಾಡಿಗ, ವೈಧ್ಯಕೀಯ ಮತ್ತು ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ  ಜನಾರ್ಧನ ದೇವಾಡಿಗ, ಪೂರ್ಣಿಮಾ ದೇವಾಡಿಗ, ಮಹಿಳಾ  ವಿಭಾಗ ಕಾರ್ಯದರ್ಶಿ ನಿತೇಶ್‌ ದೇವಾಡಿಗ, ಪ್ರಾದೇಶಿಕ ಸಮನ್ವಯ ಸಮಿತಿ ನಗರ ವಲಯದ ಸದಸ್ಯರುಗಳಾದ ಚಂದ್ರಶೇಖರ ದೇವಾಡಿಗ, ಶಾಂತಾ ದೇವಾಡಿಗ, ರಂಜಿನಿ ಮೊಲಿ, ಮಹಿಳಾ ವಿಭಾಗ ಉಪಾಧ್ಯಕ್ಷೆ ಲತಾ ಶೇರಿಗಾರ್‌ ವನಿತಾ ದೇವಾಡಿಗ  ಉಪಸ್ಥಿತರಿದ್ದರು. ಮಾಲತಿ ಜೆ. ಮೊಲಿ ಅವರು ವಂದಿಸಿದರು.

ಭೋಜನದ ನಂತರದ ಸಂಘದ  93 ನೇ ವಾರ್ಷಿಕ ಮಹಾಸಭೆ ರಂಜಿನಿ ಮೊಲಿ ಅವರ  ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಸಂಘದ ಅಧ್ಯಕ್ಷ ರವಿ ಎಸ್‌. ದೇವಾಡಿಗ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ, ಅಜೆಂಡಾ ಪ್ರಕಾರ ಚರ್ಚೆ ನಡೆಸಿದರು. ಸಂಘದ ಉನ್ನತಿ ಮತ್ತು ಶತಮಾನೋತ್ಸವದ ಆಚರಣೆಯ  ವಿಷಯವಾಗಿ  ಸದಸ್ಯರು ತಮ್ಮ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಕುಮಾರಿ  ಸುಮಾ ವೆಂಕಟೇಶ್‌ ಗೌಡ  ಕನ್ನಡ ಭವನ ಸೊಸೈಟಿ ಪ್ರೌಢಶಾಲೆ ಫೋರ್ಟ್‌  ಮತ್ತು  ಸಿ. ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ  ಕುಮಾರಿ ಶ್ವೇತಾ ಗೋಪಾಲ್‌ ದೇವಾಡಿಗ ಅವರನ್ನು ಸಂಘದ ಮಾಜಿ ಅಧ್ಯಕ್ಷರಾದ  ಕೆ. ಭುಜಂಗ ರಾವ್‌ ಮತ್ತು  ಶ್ರೀ ಏಕನಾಥೇಶ್ವರಿ  ದೇವಸ್ಥಾನದ ಟ್ರಸ್ಟಿ  ಅಣ್ಣಯ್ಯ ಶೇರಿಗಾರ್‌ ಅವರು ಗೌರವಿಸಿದರು. 224 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಸಂಘದ ಕಚೇರಿ ಮತ್ತು ಬೇರೆ ಬೇರೆ ಪ್ರಾದೇಶಿಕ ಸಮನ್ವಯ ಸಮಿತಿಯ ಕಚೇರಿಯ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದರು.  

ಶಿಕ್ಷಣ ವಿಭಾಗದ ಅಧ್ಯಕ್ಷ ಕೃಷ್ಣ ಬಿ. ದೇವಾಡಿಗ ವಿದ್ಯಾರ್ಥಿವೇತನ ವಿತರಿಸುವುದರಲ್ಲಿ ಸಹಕಾರ ನೀಡಿದ ಸದಸ್ಯರ ಸಹಕಾರಕ್ಕಾಗಿ ವಂದಿಸಿದರು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.