ಅನಾಥಾಶ್ರಮಕ್ಕೆ ದಿನೋಪಯೋಗಿ ಪರಿಕರಗಳ ವಿತರಣೆ
Team Udayavani, Sep 30, 2019, 6:02 PM IST
ಮುಂಬಯಿ, ಸೆ. 29: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಸಾಂಸ್ಕೃತಿಕ, ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುತ್ತಾ ಸಮಾಜಮುಖೀಯಾಗಿ ಗುರುತಿಸಿಕೊಂಡಿದ್ದು, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರಾದ ಸಿಎ ವಿಶ್ವನಾಥ ಶೆಟ್ಟಿ ಅವರ ಉಪಸ್ಥಿತಿಯೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳ ಸಹಕಾರದೊಂದಿಗೆ ಸೆ. 22ರಂದು ವಿಕ್ರೋಲಿ ಪೂರ್ವದ ಠಾಗೋರ್ ನಗರದ ಗುಡ್ ಸಮರ್ಥನ್ ಮಿಷನ್ ವಿಜಯಾಶ್ರಮಯಕ್ಕೆ ಭೇಟಿ ನೀಡಿತು.
ಈ ಅನಾಥಶ್ರಮವು 1970ರಲ್ಲಿ ಸ್ಥಾಪನೆಯಾಗಿದ್ದು ನಿರ್ಗತಿಕ ವೃದ್ದರಿಂದ ಅನಾಥ ಮಕ್ಕಳು ಸೇರಿದಂತೆ ಸುಮಾರು 80 ಜನರಿದ್ದು ಇವರ ಸೇವೆಯನ್ನು ಆಶ್ರಮವು ಶ್ರದ್ಧೆಯಿಂದ ಮಾಡುತ್ತಿದೆ. ಬದುಕಿನಲ್ಲಿ ಸಾರ್ಥಕತೆ ಕಾಣಬೇಕಾದರೆ ಬಡವರ, ದೀನರ, ಅಶಕ್ತರ ಸೇವೆ ಮಾಡಬೇಕು, ಅವರ ಕಣ್ಣೀರೊರೆಸುವ ಕಾರ್ಯ ಮಾಡಿ ಅವರ ಮೊಗದಲ್ಲೂ ಸಂತಸ ಭರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಬೇಕು ಎನ್ನುವ ಮಾತಿಗನುಗುಣವಾಗಿ ಅನಾಥಾಶ್ರಮಕ್ಕೆ ಭೇಟಿ ನೀಡಿ ಮಕ್ಕಳು ಹಾಗೂ ವೃದ್ಧರಿಗೆ ಆ ದಿನದ ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.
ಮಾತ್ರವಲ್ಲದೆ ಅವರಿಗೆ ಅವಶ್ಯವಿರುವ ದಿನೋಪಯೋಗಿ ಆಹಾರೋಪಯೋಗಿ ಜತೆಗೆ ಬಟ್ಟೆ ಬರೆ, ಬೆಡ್ ಶೀಟ್ಗಳನ್ನು
ನೀಡಲಾಯಿತು. ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಅಮೃತಾ ಶೆಟ್ಟಿ, ಕೋಶಾಧಿಕಾರಿ ಡಾ| ಪಲ್ಲವಿ ಶೆಟ್ಟಿ, ಜತೆ ಕಾರ್ಯದರ್ಶಿ ಸರೋಜಿನಿ ಶೆಟ್ಟಿ, ಜತೆ ಕೋಶಾಧಿಕಾರಿ ವೀಣಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾದ ತಾರಾನಾಥ ಶೆಟ್ಟಿ, ಸೇರಿದಂತೆ, ಉದಯ ಎಲ್. ಶೆಟ್ಟಿ ಪೇಜಾವರ, ವಿನುತಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಜ್ಯೋತಿ ಶೆಟ್ಟಿ, ಶಾಂತಾ ಶೆಟ್ಟಿ, ನಿರ್ಮಲಾ ಶೆಟ್ಟಿ, ವಿಕಾಸ್ ರೈ, ರಿತೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್