ಪನ್ವೆಲ್ ಪರಿಸರದ ಎರಡು ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ
ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ
Team Udayavani, Sep 8, 2021, 2:39 PM IST
ಪನ್ವೆಲ್: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರ ಆಶಯದಂತೆ ಬಂಟರ ಸಂಘ ಮುಂಬಯಿ ಇದರ ಪೂರ್ವ ವಲಯ ಸಮನ್ವಯಕ ಸುಬ್ಬಯ್ಯ ಶೆಟ್ಟಿಯವರ ನಿರ್ದೇಶನದಲ್ಲಿ ಜನಪರ ಕಾರ್ಯಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯು ಕಾರ್ಯಪ್ರವೃತ್ತಿಯಲ್ಲಿದೆ.
ಸುಬ್ಬಯ್ಯ ಶೆಟ್ಟಿ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿ ಮತ್ತು ಸಮಿತಿಯ ಎಲ್ಲ ಪದಾಧಿಕಾರಿಗಳ ಕೂಡುವಿಕೆಯಲ್ಲಿ ಆ. 29ರಂದು ಪನ್ವೆಲ್ನಿಂದ 15 ಕಿ. ಮೀ. ದೂರದಲ್ಲಿರುವ ನೆರೆ ವಿಲೇಜ್ನ ಶುಭಂ ವೃದ್ಧಾಶ್ರಮಕ್ಕೆ ಮತ್ತು ಪನ್ವೆಲ್ನ ಕೊಪೋಲಿ ವಿಲೇಜ್ನಲ್ಲಿರುವ ಬಂಟ ಬಾಂಧವರ ಸಂಚಾಲಿತ ಆಶ್ರಯ ಫೌಂಡೇಶನ್ ಸಂಸ್ಥೆಯ ವೃದ್ಧಾಶ್ರ ಮಗಳಿಗೆ ಭೇಟಿ ನೀಡಲಾಯಿತು. ಈ ಸಂದರ್ಭ ಅಲ್ಲಿರುವ ನಿರಾಶ್ರಿತರಿಗೆ ಒಂದು ತಿಂಗಳಿಗೆ ಬೇಕಾಗುವ ಎಲ್ಲ ಆಹಾರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿ, ಅಲ್ಲಿರುವ ಎಲ್ಲ ವಯೋವೃದ್ಧರಿಗೆ ಮತ್ತು ಮಾನಸಿಕ ಅಸ್ವಸ್ಥರಿಗೆ ಫಲವಸ್ತುಗಳನ್ನು ನೀಡಿ ಸಂತೈಸಲಾಯಿತು.
ಇದನ್ನೂ ಓದಿ:ವೈರಲ್ ವೀಡಿಯೋ | ಹಜೀಬ್ ಇಲ್ಲದ ಮಹಿಳೆ, ಕತ್ತರಿಸಿದ ಕಲ್ಲಂಗಡಿ ಹಣ್ಣಿನಂತೆ : ತಾಲಿಬಾನ್ ಉಗ್ರ
ಈ ಸಂದರ್ಭ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ಉಪ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ, ಜತೆ ಕೋಶಾಧಿಕಾರಿ ಭಾಸ್ಕರ್ ಶೆಟ್ಟಿ ಪದ್ಮಾ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಅನಿಲ್ ಶೆಟ್ಟಿ ಪಾಂಗಾಳ, ಪನ್ವೆಲ್ ವಲಯದ ಮುಖ್ಯಸ್ಥ ಗುರು ಶೆಟ್ಟಿ ಪನ್ವೆಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ಸಲಹಾ ಸಮಿತಿ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಗೀತಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್. ಶೆಟ್ಟಿ ಹಾಗೂ ಯುವ ವಿಭಾಗದ ಶೈನಿಷಿ ಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ