ಕೆಂಪು ವಲಯದಲ್ಲಿ ಬಿಎಂಸಿ ಕಾರ್ಯಾಚರಣೆ ಜನರಿಗೆ ಇಮ್ಯೂನಿಟಿ ಬೂಸ್ಟರ್‌ ಗುಳಿಗೆ ವಿತರಣೆ


Team Udayavani, May 15, 2020, 8:18 AM IST

ಕೆಂಪು ವಲಯದಲ್ಲಿ ಬಿಎಂಸಿ ಕಾರ್ಯಾಚರಣೆ ಜನರಿಗೆ ಇಮ್ಯೂನಿಟಿ ಬೂಸ್ಟರ್‌ ಗುಳಿಗೆ ವಿತರಣೆ

ಸಾಂದರ್ಭಿಕ ಚಿತ್ರ

ಮುಂಬಯಿ: ಕೋವಿಡ್‌ -19 ಪ್ರಕರಣಗಳ ಸಂಖ್ಯೆ ಮಹಾರಾಷ್ಟ್ರದಲ್ಲಿ 26,000 ಮತ್ತು ಮುಂಬಯಿಯಲ್ಲಿ 16,000ಕ್ಕೆ ಸಮೀಪಿಸುತ್ತಿರುವುದರೊಂದಿಗೆ ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಕಂಟೈನ್‌ಮೆಂಟ್‌ ಮತ್ತು ಕೆಂಪು ವಲಯಗಳಲ್ಲಿ ವಾಸಿಸುವ ಜನರಿಗೆ ರೋಗನಿರೋಧಕ ಶಕ್ತಿ ವರ್ಧಕ (ಇಮ್ಯೂನಿಟಿ ಬೂಸ್ಟರ್‌) ಮಾತ್ರೆಗಳನ್ನು ವಿತರಿಸಲು ಆರಂಭಿಸಿದೆ.

ಮುಂಬಯಿ ಮೇಯರ್‌ ಕಿಶೋರಿ ಪೆಡ್ನ್ಕರ್‌ ಇದನ್ನು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ. ಬಿಎಂಸಿ ಮನೆ-ಮನೆಗೆ ತೆರಳಿ ಜನರ ತಪಾಸಣೆ ಮಾಡಲು ಪ್ರಾರಂಭಿಸಿದೆ ಹಾಗೂ ಕಂಟೈನ್‌ಮೆಂಟ್‌ ಮತ್ತು ಕೆಂಪು ವಲಯಗಳಲ್ಲಿ ವಾಸಿಸುವ ಎಲ್ಲ ಜನರಿಗೆ ಆರ್ಸೆನಿಕಮ್‌ ಆಲ್ಬಮ್‌ 30 ಗುಳಿಗೆಯನ್ನು ನೀಡಲು ಪ್ರಾರಂಭಿಸಿದೆ ಎಂದು ಪೆಡ್ನ್ಕರ್‌  ಹೇಳಿದ್ದಾರೆ. ಈ ಔಷಧದ ಪರಿಣಾಮಕಾರಿತ್ವವು ಇನ್ನೂ ತಿಳಿದುಬಂದಿಲ್ಲ ಆದರೆ ಅದರ ಸಾಮರ್ಥ್ಯದ ಬಗ್ಗೆ ಕಲ್ಪನೆಯನ್ನು ಪಡೆಯಲು ಅದನ್ನು ಪ್ರಾಯೋಗಿಕ ಆಧಾರದ ಮೇಲೆ ನೀಡಲು ಪ್ರಾರಂಭಿಸಿದೆ ಎಂದು ಮೇಯರ್‌ ತಿಳಿಸಿದ್ದಾರೆ. ಔಷಧಿ ಪರಿಣಾಮಕಾರಿ ಎಂದು ಕಂಡುಬಂದಲ್ಲಿ, ಅಧಿಕಾರಿಗಳು ಅದನ್ನು ಮತ್ತಷ್ಟು ಕಂಟೈನ್‌ಮೆಂಟ್‌ ಕೇಂದ್ರಗಳಲ್ಲಿ ಜನರಿಗೆ ವಿತರಿಸಲಿದ್ದಾರೆ ಎಂದು ಪೆಡ್ನ್ಕರ್‌ ಹೇಳಿದ್ದಾರೆ. ಬಿಎಂಸಿ ಮೂಲಕ ಸರಕಾರ ಕಳೆದ ಎರಡು ವಾರಗಳಲ್ಲಿ ಹೆಚ್ಚುವರಿ ಆರು ಕೋವಿಡ್‌ ಆರೈಕೆ  ಕೇಂದ್ರಗಳನ್ನು (ಸಿಸಿಸಿ) ಸ್ಥಾಪಿಸಿದೆ. ಈ ಕೇಂದ್ರ ಗಳಲ್ಲಿ ದಟ್ಟವಾದ ಕೊಳೆಗೇರಿ ಪ್ರದೇಶಗಳ ರೋಗ
ಲಕ್ಷಣವಿಲ್ಲದ ರೋಗಿಗಳನ್ನು ಇರಿಸಲಾಗುತ್ತದೆ. ಮಹಾಲಕ್ಷ್ಮೀ ರೇಸ್‌ಕೋರ್ಸ್‌, ನೆಹರು ವಿಜ್ಞಾನ  ಕೇಂದ್ರ, ಬಿಕೆಸಿಯ ಎಂಎಂಆರ್‌ಡಿಎ ಮೈದಾನ, ಮಾಹಿಮ್‌ ನೇಚರ್‌ ಪಾರ್ಕ್‌ ಮತ್ತು ಗೋರೆ
ಗಾಂವ್‌ನ ನೆಸ್ಕೋ ಮೈದಾನದಲ್ಲಿ ಹೊಸ ಸೌಲಭ್ಯ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಸೌಲಭ್ಯ ಗಳೊಂದಿಗೆ ಮುಂಬಯಿಯ ಒಟ್ಟು ಸಾಮರ್ಥ್ಯ ವನ್ನು 14,000 ದಿಂದ 34,000 ಹಾಸಿಗೆಗಳಿಗೆ ಹೆಚ್ಚಿಸಲಾಗಿದೆ.

ನಾಯರ್‌, ಕೆಇಎಂ, ಸೆವೆನ್‌ ಹಿಲ್ಸ್ ಮುಂತಾದ  ಆಸ್ಪತ್ರೆಗಳಲ್ಲಿ ಗಂಭೀರ ರೋಗಿಗಳ ಆರೈಕೆ ಹಾಸಿಗೆ ಗಳನ್ನು 3,000ದಿಂದ 4,750ಕ್ಕೆ ಹೆಚ್ಚಿಸಲಾಗಿದೆ. ಎನ್‌ಎಸ್‌ಸಿಐ ಡೋಮ್‌ನಲ್ಲಿ ಮೊಬೈಲ್‌ ಐಸಿಯು ಹಾಸಿಗೆಗಳನ್ನು ಕೂಡ ಯೋಜಿಸಲಾಗುತ್ತಿದೆ. ಕಂಟೈನ್‌ಮೆಂಟ್‌ ಮತ್ತು ಕೆಂಪು ವಲಯಗಳಲ್ಲಿ ಕೋವಿಡ್‌-19 ಹರಡುವುದನ್ನು ತಪ್ಪಿಸಲು ಬಿಎಂಸಿ ಮುಂಬಯಿಯ ನಿವಾಸಿಗಳನ್ನು ಸಂಪರ್ಕ ತಡೆಯಲ್ಲಿರಿಸಿಕೊಳ್ಳುತ್ತಿದೆ.

ಮಹಾರಾಷ್ಟ್ರದಲ್ಲಿ ಗುರುವಾರ ಕೋವಿಡ್‌ -19 ಪ್ರಕರಣಗಳ ಸಂಖ್ಯೆ 25,922ಕ್ಕೆ ಏರಿದ್ದು, ಕಳೆದ 24 ಗಂಟೆಗಳಲ್ಲಿ 1,000ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಕೋವಿಡ್‌-19ರಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಿರುವ ಮಹಾರಾಷ್ಟ್ರ ಸತತ 8ನೇ ದಿನಕ್ಕೆ 1,000ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ರಾಜ್ಯವು ಒಂದೇ ಒಂದು ದಿನದಲ್ಲಿ 53 ಹೊಸ ಸಾವುಗಳನ್ನು ದಾಖಲಿಸಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.