ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳಿ: ರಂಜಾನ್ ಹಬ್ಬದ ಪಡಿತರ ವಿತರಣೆ
Team Udayavani, May 15, 2021, 1:34 PM IST
ಸೊಲ್ಲಾಪುರ: ಕೊರೊನಾ ಹಿನ್ನಲೇ ಜಗತ್ತು ಸ್ಥಬ್ಧಗೊಂಡಿದ್ದು, ಸಾಮಾನ್ಯ ಜನರ ಬದುಕು ಸಂಕಷ್ಟದಲ್ಲಿದೆ. ಕಳೆದ ಮೂರು ತಿಂಗಳಿಂದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳಿ ಸಂಪೂರ್ಣ ಬಂದ್ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಮಂಡಳಿಯ ಮುಸ್ಲಿಂ ಸೇವಕರಿಗೆ ರಂಜಾನ್ ಹಬ್ಬದ ಪಡಿತರವನ್ನು ವಿತರಿಸಲಾಯಿತು.
ಕೊರೊನಾದಿಂದ ಅನೇಕ ವ್ಯಾಪಾರಿಗಳ ಬದುಕು ಚಿಂತಾಜನಕವಾಗಿದೆ. ಅಕ್ಕಲ್ಕೋಟೆ ಪಟ್ಟಣದ ಸ್ವಾಮಿ ಸಮರ್ಥ ಮಂದಿರ ಮತ್ತು ಅನ್ನಛತ್ರ ಆವರಣ
ದಲ್ಲಿದ್ದ ಅಂಗಡಿ, ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಿರುವುದರಿಂದ ಯಾವುದೇ ವ್ಯಾಪಾರ, ವಹಿವಾಟು ನಡೆಯುತ್ತಿಲ್ಲ.
ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಸಂದರ್ಭದಲ್ಲಿ ಅನ್ನಛತ್ರದ ಸೇವಕರಿಗೆ ನೇರವಾಗಬೇಕು ಎನ್ನುವ ಉದ್ದೇಶದಿಂದ ಮಂಡಳಿಯ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸ್ಲೆ
ಅವರ ಮಾರ್ಗದರ್ಶನ ಮತ್ತು ಪ್ರಮುಖಕಾರ್ಯಕಾರಿ ವಿಶ್ವಸ್ತ ಅಮೋಲ್ರಾಜೆ ಭೋಸ್ಲೆಯವರ ನೇತೃತ್ವದಲ್ಲಿ ಕಾಯದರ್ಶಿ ಶಾಮರಾವ ಮೋರೆ ಮಂಡಳಿಯ ಮುಸ್ಲಿಂ ಸೇವಕರಿಗೆ ರಂಜಾನ್ ಹಬ್ಬದ ಅಂಗವಾಗಿ ಪಡಿತರವನ್ನು ವಿತರಿಸಿದರು.
ಸಂಸ್ಥೆಯ ವತಿಯಿಂದ ಬಡ ಕೂಲಿ ಕಾರ್ಮಿಕರ ಮತ್ತು ದೀನ ದಲಿತರ ಮಕ್ಕಳಿಗೆ ಶೈಕ್ಷಣಿಕ ಸಹಾಯ, ಭೂಕಂಪ, ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ಚಾಚಿದೆ. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಆರೋಗ್ಯ, ಕ್ರೀಡಾ, ಸಾಂಸ್ಕೃತಿಕ ಕ್ಷೇತ್ರ, ಸ್ತ್ರೀ ಭ್ರೂಣ ಹತ್ಯೆ ವಿರುದ್ಧ, ವರದಕ್ಷಿಣೆ ವಿರುದ್ಧ, ಸ್ವತ್ಛತಾ ಅಭಿಯಾನ ಸಹಿತ ಅನೇಕ ಮಹತ್ವದ ಕಾರ್ಯದಲ್ಲಿ ಸಂಸ್ಥೆ ಪ್ರಮುಖವಾದ ಕಾರ್ಯ ನಿರ್ವಹಿಸುತ್ತಿದೆ.
ಈ ಸಂದರ್ಭ ಮಂಡಳದ ಉಪಾಧ್ಯಕ್ಷ ಅಭಯ ಖೋಬರೆ, ಕಾರ್ಯದರ್ಶಿ ಶಾಮರಾವ ಮೋರೆ, ಅಪ್ಪಾ ಹಂಚಾಟೆ, ನಾಮಾ ಭೋಸ್ಲೆ, ಬಾಳಾಸಾಹೇಬ್ ಘಾಟಗೆ, ಅಮಿತ್ ಥೋರಾತ, ಮಹಾಂತೇಶ ಸ್ವಾಮಿ, ಸಮರ್ಥ ಘಾಟಗೆ, ದತ್ತಾ ಮಾನೆ, ಲಕ್ಷ್ಮಣ್ ಪಾಟೀಲ್, ರಾಜೇಂದ್ರ ಪವಾರ್ ಹಾಗೂ ಮಂಡಳಿಯ ಸೇವಕರು Óಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!