ಚಂದ್ರಾ ಮುತಾಲಿಕ ಅವರಿಗೆ ಡಾಕ್ಟರೇಟ್
Team Udayavani, Mar 3, 2017, 4:29 PM IST
ಮುಂಬಯಿ: ಕನ್ನಡ ವಿಭಾಗದ ಸಂಶೋಧನ ವಿದ್ಯಾರ್ಥಿನಿ ಚಂದ್ರಾ ಮುತಾಲಿಕ ಅವರ ಸಂಶೋಧನ ಮಹಾಪ್ರಬಂಧ ಕನ್ನಡ ದಾಸ ಸಾಹಿತ್ಯ ಹಾಗೂ ಮರಾಠಿ ಸಂತ ಸಾಹಿತ್ಯ-ಒಂದು ತೌಲನಿಕ ಅಧ್ಯಯನ ಮಹಾಪ್ರಬಂಧವನ್ನು ಮನ್ನಿಸಿ ಮುಂಬಯಿ ವಿಶ್ವವಿದ್ಯಾಲಯ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ| ಚಂದ್ರಾ ಮುತಾಲಿಕ ಅವರು ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಪ್ರಸ್ತುತಪಡಿಸಿದ್ದರು.
ಬಹುಭಾಷಿಕ ಸಂವೇದನೆಯನ್ನು ಮೈಗೂಡಿಸಿಕೊಂಡಿರುವ ಡಾ| ಚಂದ್ರಾ ಮುತಾಲಿಕ ದೇಸಾಯಿ ಅವರು ಮೂಲತ: ಬೆಳಗಾವಿಯವರು. ಮುಂಬಯಿ ವಿವಿ ಕನ್ನಡ ವಿಭಾಗದಿಂದ ಪ್ರಥಮ ದರ್ಜೆಯಲ್ಲಿ ಎಂಎ ಪದವಿಯನ್ನು ಪಡೆದ ಅವರು ಕನ್ನಡ ಹರಿದಾಸರ ಹಾಗೂ ಮರಾಠಿ ಸಂತರ ಸಾಮಾಜಿಕ ಚಿಂತನೆಗಳು ಎಂಬ ಎಂಫಿಲ್ ಸಂಪ್ರಂಧವನ್ನು ಡಾ| ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದಾರೆ. ಈ ಎಂ. ಫಿಲ್. ಸಂಪ್ರಬಂಧ ಈಗಾಗಲೇ ಪ್ರಕಟಗೊಂಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ತಿರುಮಲ ತಿರುಪತಿಯ ಪುರಸ್ಕಾರಕ್ಕೆ ಪಾತ್ರವಾಗಿದೆ.
ನಾಟಕ ಹಾಗೂ ಸಂಗೀತದಲ್ಲಿ ಆಸಕ್ತಿಯನ್ನು ಹೊಂದಿರುವ ಅವರು ರಂಗನಿರ್ದೇಶಕ ಡಾ| ಭರತ್ ಕುಮಾರ್ ಪೊಲಿಪು ಅವರ ನಾಟಕಗಳಲ್ಲಿ ಪಾತ್ರವಹಿಸಿದ್ದಾರೆ. ಅವರ ಅನೇಕ ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ. ಪ್ರಸ್ತುತ ಮಹಾಪ್ರಬಂಧ ಉಭಯ ಭಾಷೆಗಳ ಭಾವ ಸಂಬಂಧ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದು ಅನೇಕ ಒಳನೋಟಗಳಿಂದ ಕೂಡಿದ ಮಹಾಪ್ರಬಂಧ ಎಂದು ಪಿಎಚ್ಡಿ ಮೌಲ್ಯಮಾಪಕರು ಕೊಂಡಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು