ಡೊಂಬಿವಲಿ ಶ್ರೀ ಆದ್ಯ ಶಂಕರಾಚಾರ್ಯ ಸೇವಾ ಸಮಿತಿ: ಶಂಕರಾಚಾರ್ಯ ಜಯಂತಿ


Team Udayavani, Apr 28, 2018, 9:30 AM IST

2504mum02.jpg

ಮುಂಬಯಿ: ಅಂದು ವೇದಗಳ ಅಸ್ತಿತ್ವವನ್ನೆ ಅಲ್ಲಗಳೆಯುವ ಬೌದ್ಧ ಹಾಗೂ ಜೈನ ಧರ್ಮದ ಪ್ರಭಾವದಿಂದ ಅವನತಿಯ ಅಂಚಿನಲ್ಲಿದ್ದ ಹಿಂದೂ ಧರ್ಮಕ್ಕೆ ಪುನಃಶ್ಚೇತನವನ್ನು ನೀಡಿದವರು ಮಹಾನ್‌ ಸಾಧಕ ಜಗದ್ಗುರು ಆದಿ ಶ್ರಿ ಶಂಕರಾಚಾರ್ಯರು ಎಂದು ಕೂಡ್ಲಿ ಶೃಂಗೇರಿ ಪೀಠದ ಶ್ರೀ ವಿದ್ಯಾಭಿನವ ತೀರ್ಥ ಶಂಕರ ಭಾರತಿ ಸ್ವಾಮಿಗಳು ನುಡಿದರು.

ಶ್ರೀ ಆದ್ಯ ಶಂಕರಾಚಾರ್ಯ ಸೇವಾ ಸಮಿತಿ ಡೊಂಬಿವಲಿ ವತಿಯಿಂದ ಡೊಂಬಿವಲಿ ಪೂರ್ವದ ಅಗರ್‌ವಾಲ್‌ ಸಭಾಗೃಹದಲ್ಲಿ ಎ. 19ರಿಂದ ಎ. 21ರ ವರೆಗೆ ಆಯೋಜಿಸಿದ ಮೂರು ದಿನಗಳ ಶ್ರೀ ಶಂಕರಚಾರ್ಯ ಜಯಂತಿ ಉತ್ಸವ ಸಂಭ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ತಮ್ಮ ಎಂಟನೆ ವಯಸ್ಸಿನಲ್ಲಿಯೇ ಸನ್ಯಾಸತ್ವ ಸ್ವೀಕರಿಸಿದ ಆದಿ ಶಂಕರಾಚಾರ್ಯರು ಹಿಂದೂ ಧರ್ಮದ ಪ್ರಚಾರಕ್ಕಾಗಿ ದೇಶದ ವಿವಿಧೆಡೆಗಳಲ್ಲಿ ನಾಲ್ಕು  ಮಠಗಳನ್ನು ಸ್ಥಾಪಿಸಿದ್ದಾರೆ. ವೇದಗಳ ಮೂಲಕ ಪರಮಾತ್ಮನ ಸಾನ್ನಿಧ್ಯ ಸಾಧ್ಯ ಎಂಬುವುದನ್ನು ಸಾಬೀತುಪಡಿಸಿದರಲ್ಲದೆ, ತಮ್ಮ 32 ವರ್ಷಗಳ ಜೀವಿತ  ಅವಧಿಯಲ್ಲಿ ಅನೇಕ ಮಹಾನ್‌ ಗ್ರಂಥಗಳನ್ನು ರಚಿಸಿರುವುದು ವಿಶೇಷವಾಗಿದೆ ಎಂದು ನುಡಿದು, ಆದ್ಯ ಶಂಕರಾಚಾರ್ಯರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ನಡೆಸಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಶಂಕರ ತತ್ವಗಳ ಪ್ರತಿಪಾದ‌ಕ ಅಶುತೋಷ್‌ ಪುರಾಣಿಕ ಅವರು ಮಾತನಾಡಿ, ಅದ್ವೈತ ಮತದ ಸ್ಥಾಪನೆಯ ಮೂಲಕ ದೇಶದಲ್ಲೇ ಹಿಂದುತ್ವದ ಬೇರುಗಳನ್ನು ಗಟ್ಟಿಗೊಳಿಸಿದ ಮಹಾನ್‌ ಚೇತನ ಆದಿ ಶ್ರೀ ಶಂಕರಾಚಾರ್ಯ ಎಂದು ಹೇಳಿದರಲ್ಲದೆ, ವೇದಗಳ ಅಧ್ಯಯನ ಹಾಗೂ ಭಕ್ತಿಯ ಬುನಾದಿಯ ಮೂಲಕ ಪರಮಾತ್ಮನನ್ನು ಕಾಣಲು ಸಾಧ್ಯ. ಶಂಕರಾಚಾರ್ಯರು ಒಬ್ಬ ವ್ಯಕ್ತಿ ಅಲ್ಲ, ಓರ್ವ ಶಕ್ತಿಯಾಗಿದ್ದು, ಶ್ರೀ ಶಂಕರಾಚಾರ್ಯರ ತತ್ವಗಳನ್ನು ಪರಿಚಯಿಸಿ ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಹಿಂದೂ  ಧರ್ಮವನ್ನು ಬೆಳೆಸೋಣ ಎಂದು ನುಡಿದರು.

ಎ. 19ರಂದು ಸಂಜೆ ಡೊಂಬಿವಲಿ ಪೂರ್ವದ ಮಾನಾ³ಡಾ ರಸ್ತೆಯ ಗಾಂವೆªàವಿ ಮಂದಿರದಿಂದ ಅಗರ್‌ವಾಲ್‌ ಸಭಾಗೃಹದವರೆಗೆ ಆದ್ಯ ಶ್ರೀ ಶಂಕರಾಚಾರ್ಯರ ಉತ್ಸವ ಮೂರ್ತಿಯನ್ನು ಭವ್ಯ ಮೆರವಣಿಗೆಯ ಮೂಲಕ ವೇದಿಕೆಗೆ ತರಲಾಯಿತು. ಪಂಡಿತರ ವೇದಘೋಷ, ಮಹಿಳೆಯರ ಭಜನೆ, ವಿವಿಧ ವಾದ್ಯ ಮೇಳಗಳು, ಕಲಾತಂಡಗಳ ನೃತ್ಯಗಳು ಮೆರವಣಿಗೆಯಲ್ಲಿ ಆಕರ್ಷಣೀಯವಾಗಿದ್ದವು. ಜಯಂತ್ಯುತ್ಸವದ ನಿಮಿತ್ತ ಧಾರ್ಮಿಕ ಕಾರ್ಯಕ್ರಮವಾಗಿ ರುದ್ರಾಭಿಷೇಕ, ಅಷ್ಟಾವಧಾನ, ಓಂ ನಮಃ ಶಿವಾಯ ಮಂತ್ರ ಪಾರಾಯಣ, ರುದ್ರ ಸ್ವಾಹಾಕಾರ ಯಜ್ಞ, ಭಗವದ್ಗೀತಾ ಪಠಣ, ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನೆ, ಸಾಮೂಹಿಕ ಉಪನಯನ ಇನ್ನಿತರ ಕಾರ್ಯಕ್ರಮಗಳು ನೆರವೇರಿದವು.

ಕಾರ್ಯಕಾರಿ ಸಮಿತಿಯ ಅಜಿತ್‌ ಉಮಾರಾಣಿ, ಎಸ್‌. ಪುರೋಹಿತ್‌, ಎಲ್‌. ಎಸ್‌. ಕುಲಕರ್ಣಿ, ಪಿ. ಎಸ್‌. ಜೋಶಿ, ಎಸ್‌. ಎಲ್‌. ಸಿಂದಣಿಕರ, ಮಹಿಳಾ ವಿಭಾಗದ ಅನುರಾಧಾ ಉಮಾರಾಣಿ, ವಿ. ವಿ. ಕುಲಕರ್ಣಿ, ಅನಂತ ಭಟ್‌ ಮೊದಲಾದವರು ಸಹಕರಿಸಿದರು. ನೂರಾರು ಭಕ್ತಾದಿಗಳು ಮೂರು ದಿನಗಳ ಈ ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.