ಡೊಂಬಿವಲಿ ಶ್ರೀ ಜಗದಂಬಾ ಮಂದಿರ 3ನೇ ಪ್ರತಿಷ್ಠಾಪನಾ ಮಹೋತ್ಸವ


Team Udayavani, Mar 13, 2018, 2:35 PM IST

1203mum01b.jpg

ಡೊಂಬಿವಲಿ: ತುಳು-ಕನ್ನಡಿಗರ ಕೇಂದ್ರವೆಂದೇ ಖ್ಯಾತಿಯಾಗಿರುವ ಡೊಂಬಿವಲಿ ಪಟ್ಟಣದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಂಡ, ತುಳು ಕನ್ನಡಿಗರ ಶ್ರದ್ಧಾಕೇಂದ್ರವಾದ ಡೊಂಬಿವಲಿ ಪಶ್ಚಿಮದ ಶ್ರೀ ಜಗದಂಬಾ ಮಂದಿರದ 3ನೇ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವವು ವೇದಮೂರ್ತಿ ಪಂಡಿತ್‌ ಗುರುಪ್ರಸಾದ್‌ ಭಟ್‌ ಹಾಗೂ ಗಣೇಶ್‌ ಭಟ್‌ ಅವರ ಸಾರಥ್ಯದಲ್ಲಿ ಮಾ.11ರಂದು ಸಂಭ್ರಮ ಸಡಗರದಿಂದ ಜರಗಿತು.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಮಹಾಸಂಕಲ್ಪ, ಸ್ವಸ್ತಿ ಪುಣ್ಯಾಹ ವಾಚನ, ತೋರಣ ಮುಹೂರ್ತ, ಮಹಾಗಣಪತಿ ಹೋಮ, ಪ್ರಧಾನ ಹೋಮ, ಮಹಾಪಂಚಾಮೃತ ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಅನಂತರ ಶ್ರೀ ಜಗದಂಬೆಯ ಬಲಿಮೂರ್ತಿಯನ್ನು ವಿವಿಧ ವಾದ್ಯ ಮೇಳ ಹಾಗೂ ವೇದ ಘೋಷಗಳ ಭವ್ಯ ಮೆರವಣಿಗೆಯೊಂದಿಗೆ ಮಧ್ಯ ಗೋಪಿನಾಥ ವೃತ್ತದಿಂದ ಶ್ರೀ ದೇವಿಯ ಸನ್ನಿಧಿಯವರೆಗೆ ತರಲಾಯಿತು. ವೇದಮೂರ್ತಿ ರವಿರಾಜ್‌ ಭಟ್‌ ನಂದಳಿಕೆ ಸಾರಥ್ಯದಲ್ಲಿ ಉತ್ಸವ ಬಲಿ, ಪಲ್ಲ ಪೂಜೆ ಹಾಗೂ ಮಂಗಳಾರತಿ ನಡೆಯಿತು.

ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ಸಸಿಹಿತ್ಲು ಮಂಗಳೂರು ತಂಡದ ವತಿಯಿಂದ ಭಜನಾ ನೃತ್ಯ ಸಂಕೀರ್ತನೆ ನೆರೆದ ಭಕ್ತರ ಮನದ ಕದ ತಟ್ಟಿತು.

ಶ್ರೀ ದೇವಿಯ ಭವ್ಯ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ತಮ್ಮ ಪಾರಂಪರಿಕ ವೇಷಭೂಷಣಗಳೊಂದಿಗೆ ಪೂರ್ಣ ಕುಂಭ ಸಹಿತ ಭಾಗಿಯಾದರು. ಹುಲಿ ವೇಷ, ಬಣ್ಣದ ಕೊಡೆ ಹಿಡಿದ ವನಿತೆಯರು ಮೆರವಣಿಗೆಗೆ ಮೆರುಗು ನೀಡಿದರು. ದಿನೇಶ್‌ ಕೋಟ್ಯಾನ್‌ ಬಳಗದ ವಾದ್ಯ ಹಾಗೂ ಚೆಂಡೆ ವಾದನ ಮೆರಣಿಗೆಯ ಆಕರ್ಷಣೆಯಾಯಿತು.

ರಾತ್ರಿ ರಂಗಪೂಜೆ, ಮಹಾಪೂಜೆ, ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಥಾಣೆಯ ಉಸ್ತುವಾರಿ ಸಚಿವ ಏಕನಾಥ್‌ ಶಿಂಧೆ, ಥಾಣೆ ಜಿಲ್ಲಾ ಶಿವಸೇನಾ ಸಂಘಟಕ ಗೋಪಾಲ್‌ ಲಾಂಡೆY, ನಗರಸೇವಕರಾದ ರಾಜೇಶ್‌ ಮೋರೆ, ವಾಮನ್‌ ಮ್ಹಾತ್ರೆ, ಪ್ರಕಾಶ್‌ ಭೊಯೀರ್‌, ಶಿವಸೇನಾ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ ಜಯ ಪೂಜಾರಿ, ಸಂಘಟಕ ಸುಭಾಶ್‌ ಶೆಟ್ಟಿ ಇನ್ನಂಜೆ, ಯಕ್ಷಕಲಾ ಸಂಸ್ಥೆಯ ಗೌರವ ಅಧ್ಯಕ್ಷ ದಿವಾಕರ್‌ ರೈ, ಅಧ್ಯಕ್ಷ ಹರೀಶ್‌ ಶೆಟ್ಟಿ, ರವೀಂದ್ರ ವೈ. ಶೆಟ್ಟಿ, ವಸಂತ್‌ ಸುವರ್ಣ, ಮಾಧವ್‌ ಭಂಡಾರಿ, ಆನಂದ್‌ ಶೆಟ್ಟಿ ಎಕ್ಕಾರು, ನಾಗಕಿರಣ್‌ ಶೆಟ್ಟಿ ದಂಪತಿ, ರಮಾನಂದ್‌ ಶೆಟ್ಟಿ, ರವಿ ಸನೀಲ್‌, ರಾಜೇಶ್‌ ಕೋಟ್ಯಾನ್‌, ನಾರಾಯಣ್‌ ಶೆಟ್ಟಿ, ಗುರುಸ್ವಾಮಿ ಹಾಗೂ ಮಂಡಳಿಯ ಕಾರ್ಯಕಾರಿಣಿ ಸಮಿತಿಯ ಸದಸ್ಯರು ಹಾಗೂ ಡೊಂಬಿವಲಿ ಪರಿಸರದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಹಿತ ನೂರಾರು ಭಕ್ತ ಬಾಂಧವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಚಿತ್ರ,ವರದಿ: ಗುರುರಾಜ್‌ ಪೋತನೀಸ್‌

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.