ಡೊಂಬಿವಲಿ ಶ್ರೀ ರಾಧಾಕೃಷ್ಣ  ಶ್ರೀ ಶನೀಶ್ವರ ಮಂದಿರ: ಧಾರ್ಮಿಕ ಸಭೆ


Team Udayavani, Nov 17, 2018, 4:25 PM IST

1611mum10.jpg

ಡೊಂಬಿವಲಿ: ನಾನು ಕಷ್ಟದಲ್ಲಿರುವಾಗ ಈ ಸ್ಥಳದಲ್ಲಿ ಬಂದು ಪ್ರಾರ್ಥಿಸಿ ನನ್ನ ಕಷ್ಟ ಗಳನ್ನು ಪರಿಹರಿಸಿಕೊಂಡಿದ್ದೇನೆ. ಉದ್ಯಮವನ್ನು ಪ್ರಾರಂಭಿಸುವಾಗ ತಾಯಿಯ ಪ್ರೇರಣೆಯಂತೆ ಇಲ್ಲಿ ಪ್ರಾರ್ಥಿಸಿದ ಅನಂತರ ಉದ್ಯಮದಲ್ಲಿ ಯಶಸ್ಸನ್ನು ಕಂಡಿದ್ದೇನೆ. ನಾವೆಲ್ಲರೂ ಒಂದಾಗಿ ಈ ಮಂದಿರವನ್ನು ಭವ್ಯ ದೇವಸ್ಥಾನವನ್ನಾಗಿಸೋಣ ಎಂದು ಉದ್ಯಮಿ ದಿನೇಶ್‌ ಕೋಟ್ಯಾನ್‌ ನುಡಿದರು.

ಡೊಂಬಿವಲಿ ಪಶ್ಚಿಮದ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ಸಂಚಾಲಕತ್ವದ ಶ್ರೀ ರಾಧಾಕೃಷ್ಣ ಶ್ರೀ ಶನೀಶ್ವರ ಮಂದಿರದ 60 ನೇ ವಾರ್ಷಿಕ ಮಂಗಳ್ಳೋತ್ಸವ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಂದಿರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ವಾಗಿದೆ. ಎಲ್ಲರು ಒಗ್ಗಟ್ಟಿನಿಂದ ಮಂದಿರವನ್ನು ನಿರ್ಮಿಸೋಣ. ಅದಕ್ಕಾಗಿ ತುಳು-ಕನ್ನಡಿಗರು ಕಟಿ ಬದ್ಧರಾಗೋಣ ಎಂದರು.

ವಜ್ರ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಜಾತಿ, ಮತ, ಭೇದವನ್ನು ಮರೆತು ಕಳೆದ ಎರಡು ದಿನಗಳಿಂದ ಎಲ್ಲ ಸದಸ್ಯರು ಅದರೊಂದಿಗೆ ವಿಶೇಷವಾಗಿ ಮಹಿಳಾ ವೃಂದ ಬಹಳಷ್ಟು ಶ್ರಮವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆ. ನಾವೆಲ್ಲರೂ ಒಂದಾಗಿ ಭವ್ಯ ದೇವ ಸ್ಥಾನ ನಿರ್ಮಿಸುವುದರೊಂದಿಗೆ ಡೊಂಬಿವಲಿಯ ಪ್ರಸಿದ್ಧ ಕ್ಷೇತ್ರವನ್ನಾಗಿ ಸೋಣ ಎಂದರು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ ಅವರು ಮಾತನಾಡಿ, ದೇವಸ್ಥಾನ, ಮಠ, ಮಂದಿರ, ಹಿಂದುತ್ವದ ಸಂಕೇತ ವಾಗಿದೆ. ನಮ್ಮ ಹಿರಿಯರು ಹಿಂದು ತ್ವದ ಮೂಲವನ್ನು ಉಳಿಸಲು ಅಂದಿನ ದಿನಗಳಲ್ಲೇ ಅಡಿಪಾಯವನ್ನು ಹಾಕಿದ್ದಾರೆ. ನಮ್ಮ ಉದ್ದೇಶ, ದೇವರ ಅನುಗ್ರಹವಿದ್ದರೆ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವಿಲ್ಲ ಎಂದು ನುಡಿದರು.

ಬಂಟರ ಸಂಘ ಭಿವಂಡಿ- ಬದ್ಲಾಪುರ ಪ್ರಾದೇಶಿಕ ಸಮಿತಿಯ ಸಂಘಟಕ ಸುಬ್ಬಯ್ಯ ಶೆಟ್ಟಿ ಅವರು ಮಾತನಾಡಿ, ದಿವಾಕರ ಶೆಟ್ಟಿ ಇಂದ್ರಾಳಿಯವರೊಂದಿಗೆ ಮಂದಿರದ ಕೆಲಸದಲ್ಲಿ ನನ್ನನ್ನು ಭಾಗಿಯಾಗಿಸಿದ್ದೀರಿ. ಈ ಕ್ಷೇತ್ರದ ಅಭಿವೃದ್ಧಿಯಲ್ಲಿ ನನ್ನ ಕೊಡುಗೆ ನೀಡಲು  ತಯಾರಿದ್ದೇನೆ. ಡೊಂಬಿವಲಿಯಲ್ಲಿ ರಾಧಾಕೃಷ್ಣ ಶ್ರೀ ಶನಿದೇವರ ಭವ್ಯ ದೇವಸ್ಥಾನದ ನಿರ್ಮಾಣಕ್ಕೆ ತಯಾರಾಗೋಣ ಎಂದು ಹೇಳಿದರು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಆನಂದ ಶೆಟ್ಟಿ ಎಕ್ಕಾರು ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಈ ಸ್ಥಳದಲ್ಲಿ ಉತ್ತಮ ಕಾರ್ಯಕ್ರಮಗಳು ಜರ ಗುತ್ತಿವೆ. ನಿಮ್ಮೆಲ್ಲರ ಸಹಕಾರ ದೇವರ ದಯೆಯಿಂದ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿದೆ. ತಾಯ್ನಾಡಿನ ಸಂಸ್ಕೃತಿಯನ್ನು ಇಲ್ಲಿ ಕಾಣುವಂತಾಯಿತು ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ರವಿ ಸನಿಲ್‌ ಅವರು ಮಾತನಾಡಿ, ಕ್ಷೇತ್ರದ ಮಹಿಳಾ ವಿಭಾಗದ ಕೆಲಸಗಳು ಅಚ್ಚು ಕಟ್ಟಾಗಿ ನಡೆಯುವುದರಿಂದ ನಮ್ಮ ಕಾರ್ಯಕಲಾಪಗಳು ಸುಸಾಂಗವಾಗಿ ನೆರವೇರುತ್ತಿದೆ. ಕಾರ್ಯಕಾರಿ ಸಮಿ ತಿಯ ಬೆಂಬಲ, ಅರ್ಚಕರ ಪ್ರೋತ್ಸಾಹ ಈ ಸಂಸ್ಥೆಯೊಂದಿಗಿದೆ. ನಾವೆಲ್ಲರೂ ಶೀಘ್ರದಲ್ಲೇ ಭವ್ಯ ದೇವಸ್ಥಾನ  ನಿರ್ಮಿ ಸೋಣ ಎಂದರು.

ಕಾರ್ಯದರ್ಶಿ ಸೋಮನಾಥ ಪೂಜಾರಿ ಸ್ವಾಗತಿಸಿ ಅಧಿಕ ಧನ ಸಂಗ್ರಹಿಸಿದವರ ಯಾದಿ ಓದಿದರು. ಬೆಳಗ್ಗೆ ಶ್ರೀ ಸತ್ಯನಾರಾಯಣ ಮಹಾ ಪೂಜೆ ನಡೆಯಿತು. ಪೂಜಾ ವಿಧಿ- ವಿಧಾನಗಳಲ್ಲಿ ಶೇಖರ್‌ ಭುವಾಜಿ ಸಹಕರಿಸಿದರು. ವಜ್ರ ಮಹೋತ್ಸವದ ಕಾರ್ಯದರ್ಶಿ ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ರವಿ ಸನಿಲ್‌, ರಾಜೀವ ಭಂಡಾರಿ, ರಾಮಣ್ಣ ಶೆಟ್ಟಿ, ರವೀಂದ್ರ ವೈ. ಶೆಟ್ಟಿ, ಹರೀಶ್‌ ಶೆಟ್ಟಿ, ಪ್ರಕಾಶ್‌ ಭಟ್‌, ಆರ್‌. ಬಿ. ಶೆಟ್ಟಿ, ಶೇಖರ್‌ ಭುವಾಜಿ, ಶೇಖರ್‌ ಪುತ್ರನ್‌, ಲಕ್ಷ್ಮಣ್‌ ಸುವರ್ಣ, ಸೋಮನಾಥ ಪೂಜಾರಿ, ವಸಂತ ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.