ಡೊಂಬಿವಲಿ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದಿಂದ ಅರಸಿನ ಕುಂಕುಮ
Team Udayavani, Feb 16, 2017, 4:41 PM IST
ಡೊಂಬಿವಲಿ: ಡೊಂಬಿವಲಿ ಪಶ್ಚಿಮದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದ ವತಿಯಿಂದ ವಾರ್ಷಿಕ ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಡೊಂಬಿವಲಿ ಪಶ್ಚಿಮದ ಕಾಂಚಿ ಕೋ. ಆಪರೇಟಿವ್ ಹೌಸಿಂಗ್ ಸೊಸೈಟಿಯ ಸಭಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಸಂಘದ ಗೌರವ ಕಾರ್ಯಾಧ್ಯಕ್ಷ ವಿಠಲ್ ಎಂ. ನಾಯ್ಕ, ರತ್ನಾ ಆರ್. ದೇವಾಡಿಗ, ಕಾರ್ಯಾಧ್ಯಕ್ಷೆ ರೋಹಿಣಿ ಅಮೀನ್, ಉಪ ಕಾರ್ಯಾಧ್ಯಕ್ಷೆ ಶಕುಂತಳಾ ವಿ. ನಾಯ್ಕ, ಕಾರ್ಯದರ್ಶಿ ಕಮಲಾ ಎನ್. ನಾಯ್ಕ, ಜತೆ ಕಾರ್ಯದರ್ಶಿ ಶೈಲಜಾ ಜೆ. ಶೆಟ್ಟಿ, ಕೋಶಾಧಿಕಾರಿ ಪ್ರೇಮಾ ಜೆ. ಮೆಂಡನ್, ಜತೆ ಕೋಶಾಧಿಕಾರಿ ಶಾಂತಿ ಎಸ್. ದೇವಾಡಿಗ ಹಾಗೂ ಸಮಿತಿಯಸದಸ್ಯರು ಉಪಸ್ಥಿತರಿದ್ದು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು.
ಪ್ರಾರಂಭದಲ್ಲಿ ಮಹಿಳಾ ವಿಭಾಗದಿಂದ ಭಜನೆ, ವಿಠಲ್ ಎಂ. ನಾಯ್ಕ ಅವರಿಂದ ಗುರುವಂದನೆ, ಪ್ರಾರ್ಥನೆ, ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಸ್ಥಳೀಯ ತುಳು-ಕನ್ನಡಿಗ, ಅನ್ಯಭಾಷಿಯ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?