ವಿವಿಧ ಸಂಘಟನೆಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ


Team Udayavani, Apr 13, 2020, 12:27 PM IST

ವಿವಿಧ ಸಂಘಟನೆಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಮುಂಬಯಿ: ಕೋವಿಡ್‌ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಹಾರಾಷ್ಟ್ರ ಐಎಎಸ್‌ ಅಧಿಕಾರಿಗಳ ಪತ್ನಿಯರ ಸಂಘವು ಮುಖ್ಯಮಂತ್ರಿ ಪರಿಹಾರ ನಿಧಿಗೆ 1.75 ಲಕ್ಷ ರೂ.ಗಳ ದೇಣಿಗೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಸಂಜಯ್‌ ಕುಮಾರ್‌ ಅವರು ಶನಿವಾರ ಸಂಜೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಚೆಕ್‌ ಹಸ್ತಾಂತರಿಸಿದ್ದು, ಇದನ್ನು ರಾಜ್ಯದಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿವಿಧ ಉಪಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ದೊಡ್ಡ ಕಾರ್ಪೋರೇಟ್‌ಗಳು ತಮ್ಮ ಸಂಪತ್ತನ್ನು ಸರಕಾರಿ ಯೋಜನೆಗಳಿಗೆ ಉಪಲಬ್ಧಗೊಳಿಸಿದ ಅನಂತರ ಮುಂಬಯಿ ಮತ್ತು ಮಹಾರಾಷ್ಟ್ರದ ಇತರೆಡೆಯ ಸಾಮಾನ್ಯ ವ್ಯಕ್ತಿಗಳು ಮತ್ತು ಸ್ಥಳೀಯ ಸ್ವಯಂಸೇವಕ ಸಂಘಗಳು ಕೂಡ ಲಾಕ್‌ಡೌನ್ನಿಂದಾಗಿ ಸಿಕ್ಕಿಕೊಂಡಿರುವ ವಲಸಿಗರು, ಸಾಮಾನ್ಯ ಕಾರ್ಮಿಕರು ಮತ್ತು ಇತರರಿಗೆ ಸಹಾಯ ಮಾಡಲು ಇದೇ ರೀತಿಯ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ಒಂದು ವಿಶಿಷ್ಟ ಉಪಕ್ರಮದಲ್ಲಿ ಚಾಂದಿವಲಿಯ ವುಡ್‌ಲ್ಯಾಂಡ್‌ ಹೈಟ್ಸ್ ಕಟ್ಟಡದ ಸದಸ್ಯರು ಪ್ರತಿದಿನ ಸುಮಾರು 500 ವಲಸೆ ಭದ್ರತಾ ಸಿಬಂದಿಗಳು, ಮನೆ ನೌಕರರು, ಕನ್ಸರ್ವೆನ್ಸಿ ಸಿಬಂದಿ ಮತ್ತು ಚಾಲಕರಿಗೆ ಸ್ಥಳೀಯ ದೇವಾಲಯಗಳು ಮತ್ತು ಸುತ್ತಮುತ್ತಲಿನ ಸ್ವಯಂಸೇವಕರ ಮೂಲಕ ಆಹಾರ ಸಾಮಗ್ರಿಗಳನ್ನು ಒದಗಿಸುತ್ತಿದ್ದಾರೆ ಮತ್ತು ತಮ್ಮ ವೈಯಕ್ತಿಕ ಉಳಿತಾಯದಿಂದ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡುತ್ತಿದ್ದಾರೆ ಎಂದು ತಂಡದ ಸದಸ್ಯ ಪ್ರದೀಪ್‌ ಮೆನನ್‌ ಹೇಳಿದ್ದಾರೆ.

ಗೋವಂಡಿ ಪೊಲೀಸ್‌ ಠಾಣೆಯ ಕಾಸ್ಟೇಬಲ್‌ ರಾಜೇಂದ್ರ ಘೋರ್ಪಡೆ ಅವರು ಕಳೆದ ಕೆಲವು ದಿನಗಳಿಂದ ಬಡವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವುದರ ಜತೆಗೆ ತಮ್ಮ ಉಳಿತಾಯದಿಂದ 25,000 ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾನ ಮಾಡಿದ್ದಾರೆ. ಬಾಲಿವುಡ್‌ ನಟ ನಾನಾ ಪಾಟೆಕರ್‌ ಅವರ ನಾಮ್‌ ಫೌಂಡೇಶನ್‌ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದೆ. ಇಂಟರ್‌ನ್ಯಾಷನಲ್‌ ಸೊಸೈಟಿ ಫಾರ್‌ ಕೃಷ್ಣ ಕಾನ್ಷಿಯಸ್ನೆಸ್‌ ಟೆಂಪಲ…, ರಿಲಯನ್ಸ್ ಫೌಂಡೇಶನ…, ರೋಟರಿ ಕ್ಲಬ್‌ ಆಫ್ ಮುಂಬಯಿ ಕ್ವೀನ್ಸ್ ನೆಕ್ಲೆಸ್‌ ಇಸ್ಕಾನ್‌ ಅನ್ನಾಮೃತ ಜತೆಗೆ ಕೈಜೋಡಿಸಿ ಮುಂಬಯಿ, ಪಾಲ್ಗರ್‌, ಪುಣೆ, ಔರಂಗಾಬಾದ್‌, ಜಾಲಾ° ಮತ್ತು ನಾಗಪುರಗಳಲ್ಲಿ ವಲಸೆ ಬಂದವರಿಗೆ 2,25,000 ಕ್ಕೂ ಹೆಚ್ಚು ಊಟವನ್ನು ಒದಗಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ 250 ಬೆಸ್ಟ್‌ ಬಸ್‌ ಚಾಲಕರು, ಕಂಡಕ್ಟರ್‌ಗಳು, ಪಾದಚಾರಿ ನಿವಾಸಿಗಳು ಮತ್ತು ವಲಸಿಗರಿಗೆ ಧರ್ಮೇಶ್‌ ಝವೇರಿ ಮತ್ತು ಭರತ್‌ ಪರೇಖ್‌ ನೇತೃತ್ವದ ವಿಲೇ ಪಾರ್ಲೆ ಜೈನ್‌ ಡೈಮಂಡ್‌ ಟ್ರೇಡರ್ಸ್‌ ಗ್ರೂಪ್‌ ವಾರಾಂತ್ಯದ ಊಟ ಮತ್ತು ಉಪಾಹಾರವನ್ನು ಆಯೋಜಿಸುತ್ತಿದೆ. ಅದೇ, ರಾಯಗಡದ 150 ವಲಸೆ ಕುಟುಂಬಗಳಿಗೆ ಆಹಾರ ಪ್ಯಾಕೆಟ್‌ಗಳನ್ನು ಒದಗಿಸಲು ಇಲ್ಲಿನ ಹಿಲ್‌ ಸ್ಪ್ರಿಂಗ್‌ ಇಂಟರ್‌ನ್ಯಾಷನಲ್‌ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಬಿಷೇಕ್‌ ಅವರ್‌ಸೇಕರ್‌ ಅವರು 1,53,000 ರೂ. ದೇಣಿಗೆ ಸಂಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.