ಡಾ|ಜಿ.ಡಿ.ಜೋಶಿ ಪ್ರತಿಷ್ಠಾನ:ಮನೆ ಮನೆಯಲ್ಲಿ ಸಾಹಿತ್ಯ ಸ್ಪಂದನ
Team Udayavani, Aug 22, 2017, 12:12 PM IST
ಮುಂಬಯಿ: ಡಾ| ಜಿ. ಡಿ. ಜೋಶಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಇದರ ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮವು ಆ. 12 ರಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ| ಜಿ. ಡಿ. ಜೋಶಿ ಅವರ ಕುರ್ಲಾದ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ತಾರಾ ಆರ್. ಬಂಗೇರ ಅವರ ಗಣೇಶ ಸ್ತುತಿಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಗರದ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರು ಸ್ವರಚಿತ ತುಳು ಕವನವನ್ನು ಪ್ರಸ್ತುತಪಡಿಸಿ, ಸಾಹಿತ್ಯ ಪ್ರಕಾರಗಳ ಬಗ್ಗೆ ವಿವರಿಸಿದರು. ನಾವು ನಮ್ಮಲ್ಲಿ ಅಸ್ತಿತ್ವವನ್ನು ಹುಡುಕಿಕೊಳ್ಳುವ ಅವಶ್ಯಕತೆಯಿದೆ ಎಂದು ನುಡಿದರು. ಡಾ| ಜಿ. ಡಿ. ಜೋಶಿ ಅವರು ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ನಡೆದುಕೊಂಡು ಬಂದ ಬಗೆಯನ್ನು ವಿಶ್ಲೇಷಿಸಿದರು.
ತಾರಾ ಬಂಗೇರ ಅವರು ಪ್ರಶ್ನೆ ಕವನವನ್ನು ಮತ್ತು ಲಕ್ಷಿ¾à ಪೂಜಾರಿ ಅವರು ಚಂದ್ರಮ ಕವನವನ್ನು ವಾಚಿಸಿದರು. ಅರವಿಂದ ಮುದ್ಗಲ್ ಅವರು ಜೇಷ್ಠ ನಾಗರಿಕರು ಎಂಬ ಹನಿಗವನ, ರಮೇಶ್ ಕೆ. ಪುತ್ರನ್ ಅವರು ಶಿರಲ್ಲಿನ ಮಹಾದೇವ ಶಿವ ವಚನವನ್ನು ಹಾಗೂ ಶಾರದಾ ಅಂಬೆಸಂಗೆ ಅಮ್ಮ ಕವನ ಹಾಗೂ ಮರುಳ, ಚುನಾವಣೆ ಎಂಬ ಚುಟುಕುಗಳನ್ನು ಪ್ರಸ್ತುತಪಡಿಸಿದರು.
ಪಂಡಿತ್ ಜಿ. ಜಿ. ಜೋಶಿ ಅವರು ಹಿಂದೂಸ್ಥಾನಿ ಶಾಸ್ತಿÅàಯ ಸಂಗೀತದಲ್ಲಿ ಕುಮರಿಯ ಸ್ಥಾನದ ಬಗ್ಗೆ ಲೇಖನ ಮಂಡಿಸಿದರು. ಡಾ| ಕರುಣಾಕರ ಶೆಟ್ಟಿ ಅವರು ಹೊರನಾಡ ಕನ್ನಡಿಗರು ಕವನ ಹಾಗೂ ಡಾ| ಕೆ. ಗೋವಿಂದ ಭಟ್ ಅವರು ಋಣ ಕವನವನ್ನು ಓದಿದರು. ಪ್ರತಿಷ್ಠಾನದ ಕೋಶಾಧಿಕಾರಿ ಡಾ| ಕರುಣಾಕರ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ